Sign In

By signing in or creating an account, you agree with Associated Broadcasting Company's Terms & Conditions and Privacy Policy.

Deodhar Trophy 2023: ಮಯಾಂಕ್ ಭರ್ಜರಿ ಬ್ಯಾಟಿಂಗ್: ದಕ್ಷಿಣ ವಲಯ ತಂಡಕ್ಕೆ ಜಯ

Deodhar Trophy 2023: ದಕ್ಷಿಣ ವಲಯ ಪರ ವಾಸುಕಿ ಕೌಶಿಕ್ ಹಾಗೂ ಸಾಯಿ ಕಿಶೋರ್ 3 ವಿಕೆಟ್ ಪಡೆದರೆ, ವಿಧ್ವತ್ ಕಾವೇರಪ್ಪ 2 ವಿಕೆಟ್ ಕಬಳಿಸಿದರು.

Deodhar Trophy 2023: ಮಯಾಂಕ್ ಭರ್ಜರಿ ಬ್ಯಾಟಿಂಗ್: ದಕ್ಷಿಣ ವಲಯ ತಂಡಕ್ಕೆ ಜಯ
Mayank Agarwal
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 30, 2023 | 8:34 PM

Deodhar Trophy 2023: ದೇವಧರ್ ಟ್ರೋಫಿಯ 11ನೇ ಪಂದ್ಯದಲ್ಲಿ ದಕ್ಷಿಣ ವಲಯ ತಂಡವು ಭರ್ಜರಿ ಜಯ ಸಾಧಿಸಿದೆ. ಪುದುಚೇರಿಯ ಕ್ರಿಕೆಟ್​ ಅಸೋಷಿಯೇಷನ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ದಕ್ಷಿಣ ವಲಯ ಹಾಗೂ ಪೂರ್ವ ವಲಯ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಪೂರ್ವ ವಲಯ ತಂಡದ ನಾಯಕ ಸೌರಭ್ ತಿವಾರಿ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಪೂರ್ವ ವಲಯಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಕನ್ನಡಿಗ ವಾಸುಕಿ ಕೌಶಿಕ್ ಯಶಸ್ವಿಯಾದರು.

ಅಭಿಮನ್ಯು ಈಶ್ವರನ್ (12) ವಾಸುಕಿ ಕೌಶಿಕ್ ದಕ್ಷಿಣ ವಲಯ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಆದರೆ ಇದಾದ ಬಳಿಕ ಜೊತೆಯಾದ ವಿರಾಟ್ ಸಿಂಗ್ (49) ಹಾಗೂ ಸುಭ್ರಾಂಶು ಸೇನಾಪತಿ (44) ಉತ್ತಮ ಜೊತೆಯಾಟವಾಡಿದರು.

ಈ ಹಂತದಲ್ಲಿ ದಾಳಿಗಿಳಿದ ವಾಷಿಂಗ್ಟನ್ ಸುಂದರ್ ವಿರಾಟ್ ಸಿಂಗ್ ವಿಕೆಟ್ ಪಡೆದರೆ, ಸಾಯಿ ಕಿಶೋರ್ ಸುಭ್ರಾಂಶು ವಿಕೆಟ್ ಕಬಳಿಸಿದರು. ಈ ಎರಡು ವಿಕೆಟ್​ಗಳ ಪತನದೊಂದಿಗೆ ಪೂರ್ವ ವಲಯ ತಂಡವು ದಿಢೀರ್ ಕುಸಿತಕ್ಕೊಳಗಾಯಿತು.

ಈ ವೇಳೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ದಕ್ಷಿಣ ವಲಯ ಬೌಲರ್​ಗಳು 46 ಓವರ್​ಗಳಲ್ಲಿ 229 ರನ್​ಗಳಿಗೆ ಪೂರ್ವ ವಲಯ ತಂಡವನ್ನು ಆಲೌಟ್​ ಮಾಡುವಲ್ಲಿ ಯಶಸ್ವಿಯಾದರು. ದಕ್ಷಿಣ ವಲಯ ಪರ ವಾಸುಕಿ ಕೌಶಿಕ್ ಹಾಗೂ ಸಾಯಿ ಕಿಶೋರ್ 3 ವಿಕೆಟ್ ಪಡೆದರೆ, ವಿಧ್ವತ್ ಕಾವೇರಪ್ಪ 2 ವಿಕೆಟ್ ಕಬಳಿಸಿದರು.

ಇನ್ನು 230 ರನ್​ಗಳ ಸುಲಭ ಗುರಿ ಬೆನ್ನತ್ತಿದ ದಕ್ಷಿಣ ವಲಯ ತಂಡಕ್ಕೆ ಮಯಾಂಕ್ ಅಗರ್ವಾಲ್ ಉತ್ತಮ ಆರಂಭ ಒದಗಿಸಿದ್ದರು. ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಮಯಾಂಕ್ 88 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 84 ರನ್ ಚಚ್ಚಿದರು.

ಹಾಗೆಯೇ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 67 ಎಸೆತಗಳಲ್ಲಿ 53 ರನ್​ ಬಾರಿಸಿದರು. ಮತ್ತೊಂದೆಡೆ ಎನ್​ ಜಗದೀಸನ್ 32 ರನ್​ಗಳ ಕೊಡುಗೆ ನೀಡಿದರು. ಪರಿಣಾಮ 44.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ ದಕ್ಷಿಣ ವಲಯ ತಂಡವು 230 ರನ್​ಗಳ ಗುರಿ ಮುಟ್ಟಿತು. ಈ ಮೂಲಕ ದೇವಧರ್ ಟ್ರೋಫಿಯಲ್ಲಿ ಸತತ 4ನೇ ಗೆಲುವನ್ನು ತನ್ನದಾಗಿಸಿಕೊಂಡು ದಕ್ಷಿಣ ವಲಯ ತಂಡವು ಜಯದ ನಾಗಲೋಟ ಮುಂದುವರೆಸಿದೆ.

ಪೂರ್ವ ವಲಯ ಪ್ಲೇಯಿಂಗ್ 11: ಅಭಿಮನ್ಯು ಈಶ್ವರನ್ , ವಿರಾಟ್ ಸಿಂಗ್ , ಸುಭ್ರಾಂಶು ಸೇನಾಪತಿ , ಸೌರಭ್ ತಿವಾರಿ (ನಾಯಕ) , ರಿಯಾನ್ ಪರಾಗ್ , ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್) , ಶಹಬಾಝ್ ಅಹ್ಮದ್ , ಮಣಿಶಂಕರ್ ಮುರಾಸಿಂಗ್ , ಅವಿನೋವ್ ಚೌಧರಿ , ಆಕಾಶ್ ದೀಪ್ , ಮುಖ್ತಾರ್ ಹುಸೇನ್.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ದಕ್ಷಿಣ ವಲಯ ಪ್ಲೇಯಿಂಗ್ 11: ರೋಹನ್ ಕುನ್ನುಮ್ಮಳ್, ಮಯಾಂಕ್ ಅಗರ್ವಾಲ್ (ನಾಯಕ) , ಎನ್​ ಜಗದೀಸನ್ (ವಿಕೆಟ್ ಕೀಪರ್) , ಸಾಯಿ ಸುದರ್ಶನ್ , ಅರುಣ್ ಕಾರ್ತಿಕ್ , ವಾಷಿಂಗ್ಟನ್ ಸುಂದರ್ , ಸಾಯಿ ಕಿಶೋರ್ , ರೋಹಿತ್ ರಾಯುಡು , ವಾಸುಕಿ ಕೌಶಿಕ್ , ವಿಜಯ್​ಕುಮಾರ್ ವೈಶಾಕ್ , ವಿಧ್ವತ್ ಕಾವೇರಪ್ಪ.

ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ