AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deodhar Trophy 2023: ದಕ್ಷಿಣ-ಪೂರ್ವ ವಲಯ ತಂಡಗಳ ನಡುವೆ ಫೈನಲ್ ಫೈಟ್

Deodhar Trophy 2023: ದಕ್ಷಿಣ ವಲಯ ಹಾಗೂ ಪೂರ್ವ ವಲಯ ತಂಡಗಳ ನಡುವಣ ಫೈನಲ್ ಪಂದ್ಯವನ್ನು ಬಿಸಿಸಿಐ ಟಿವಿಯಲ್ಲಿ ಲೈವ್ ವೀಕ್ಷಿಸಬಹುದು.

Deodhar Trophy 2023: ದಕ್ಷಿಣ-ಪೂರ್ವ ವಲಯ ತಂಡಗಳ ನಡುವೆ ಫೈನಲ್ ಫೈಟ್
ಮಯಾಂಕ್​-ಸೌರಭ್
TV9 Web
| Edited By: |

Updated on:Aug 02, 2023 | 5:22 PM

Share

Deodhar Trophy 2023: ದೇವಧರ್ ಟ್ರೋಫಿ ಟೂರ್ನಿಯು ಅಂತಿಮ ಹಂತಕ್ಕೆ ಬಂದು ನಿಂತಿದೆ. ಪುದುಚೇರಿಯ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ದಕ್ಷಿಣ ವಲಯ ಮತ್ತು ಪೂರ್ವ ವಲಯ ಮುಖಾಮುಖಿಯಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿದ್ದವು. ಅದರಂತೆ ಪ್ರತಿ ತಂಡಗಳು ತಲಾ 5 ಪಂದ್ಯಗಳನ್ನು ಆಡಲಾಗಿತ್ತು.

ಈ ಐದು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ್ದ ದಕ್ಷಿಣ ವಲಯ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಹಾಗೆಯೇ ಐದು ಮ್ಯಾಚ್​ಗಳಲ್ಲಿ 4 ರಲ್ಲಿ ಗೆಲುವು ದಾಖಲಿಸಿ​ ಪೂರ್ವ ವಲಯ ತಂಡವು ಫೈನಲ್​ಗೆ ಅರ್ಹತೆ ಪಡೆದಿದೆ. ಅದರಂತೆ ಗುರುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ದಕ್ಷಿಣ ವಲಯ ಮತ್ತು ಪೂರ್ವ ವಲಯ ತಂಡಗಳು ಸೆಣಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ದಕ್ಷಿಣ ವಲಯ ಹಾಗೂ ಪೂರ್ವ ವಲಯ ತಂಡಗಳ ನಡುವಣ ಫೈನಲ್ ಪಂದ್ಯವನ್ನು ಬಿಸಿಸಿಐ ಟಿವಿಯಲ್ಲಿ (bcci.tv) ಲೈವ್ ವೀಕ್ಷಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ಚಾನೆಲ್​ನಲ್ಲಿ ನೇರ ಪ್ರಸಾರ ಇರುವುದಿಲ್ಲ.

ದಕ್ಷಿಣ ವಲಯ ತಂಡ: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ಎನ್. ಜಗದೀಸನ್ , ಅರುಣ್ ಕಾರ್ತಿಕ್ , ರಿಕಿ ಭುಯಿ , ವಾಷಿಂಗ್ಟನ್ ಸುಂದರ್ , ವಿಜಯ್ ಕುಮಾರ್ ವೈಶಾಕ್ , ಅರ್ಜುನ್ ತೆಂಡೂಲ್ಕರ್ , ಸಾಯಿ ಕಿಶೋರ್ , ವಾಸುಕಿ ಕೌಶಿಕ್ , ವಿಧ್ವತ್ ಕಾವೇರಪ್ಪ , ರೋಹನ್ ಕುನ್ನುಮ್ಮಳ್, ಸಿಜೊಮೊನ್ ಜೋಸೆಫ್ , ಮೊಹಿತ್ ರೆಡ್ಕರ್, ರೋಹಿತ್ ರಾಯುಡು, ಸಾಯಿ ಸುದರ್ಶನ್.

ಇದನ್ನೂ ಓದಿ: Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಪೂರ್ವ ವಲಯ ತಂಡ: ಸೌರಭ್ ತಿವಾರಿ (ನಾಯಕ) , ಅಭಿಷೇಕ್ ಪೊರೆಲ್ , ಅಭಿಮನ್ಯು ಈಶ್ವರನ್ , ರಿಯಾನ್ ಪರಾಗ್ , ಸುಭ್ರಾಂಶು ಸೇನಾಪತಿ , ವಿರಾಟ್ ಸಿಂಗ್ , ಉತ್ಕರ್ಷ್ ಸಿಂಗ್ , ಶಹಬಾಝ್ ಅಹ್ಮದ್ , ಮಣಿಶಂಕರ್ ಮುರಾಸಿಂಗ್ , ಆಕಾಶ್ ದೀಪ್ , ಅವಿನೋವ್ ಚೌಧರಿ , ರಿಷವ್ ಕುಹರಾಮಿ , ಸುದೀಪ್ ಕುಮಾರ್ , ಸುದೀಪ್ ಕುಮಾರ್.

Published On - 5:21 pm, Wed, 2 August 23

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು