AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deodhar Trophy 2023: ಮಯಾಂಕ್ ಮಿಂಚಿಂಗ್: ದಕ್ಷಿಣ ವಲಯ ತಂಡಕ್ಕೆ ರೋಚಕ ಜಯ

West Zone vs South Zone: ಈ ಪಂದ್ಯದಲ್ಲಿ 115 ಎಸೆತಗಳನ್ನು ಎದುರಿಸಿದ ಮಯಾಂಕ್ ಅಗರ್ವಾಲ್ 98 ರನ್​ಗೆ ವಿಕೆಟ್ ಒಪ್ಪಿಸಿ ಶತಕ ವಂಚಿತರಾದರು.

Deodhar Trophy 2023: ಮಯಾಂಕ್ ಮಿಂಚಿಂಗ್: ದಕ್ಷಿಣ ವಲಯ ತಂಡಕ್ಕೆ ರೋಚಕ ಜಯ
Mayank Agarwal
TV9 Web
| Updated By: ಝಾಹಿರ್ ಯೂಸುಫ್|

Updated on: Jul 26, 2023 | 4:54 PM

Share

Deodhar Trophy 2023: ಪುದುಚೇರಿಯ ಕ್ರಿಕೆಟ್​ ಅಸೋಷಿಯೇಷನ್ ಸ್ಟೇಡಿಯಂನಲ್ಲಿ ನಡೆದ ದೇವಧರ್ ಟ್ರೋಫಿಯ 6ನೇ ಪಂದ್ಯದಲ್ಲಿ ದಕ್ಷಿಣ ವಲಯ ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಶ್ಚಿಮ ವಲಯ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್​ ಮಾಡಿದ ದಕ್ಷಿಣ ವಲಯ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ರೋಹನ್ ಕುನ್ನುಮ್ಮಲ್ (5) ಅರ್ಝಾನ್ ಎಸೆತದಲ್ಲಿ ಕ್ಯಾಚ್ ನೀಡಿದರು. ಆ ಬಳಿಕ ಬಂದ ದೇವದತ್ ಪಡಿಕ್ಕಲ್ (2) ಬಂದ ವೇಗದಲ್ಲೇ ಹಿಂತಿರುಗಿದರು. ಇನ್ನು ವಿಕೆಟ್ ಕೀಪರ್ ಬ್ಯಾಟರ್ ಎನ್​ ಜಗದೀಸನ್ (6) ಹಾಗೂ ರಿಕಿ ಭುಯಿ (3) ಕೂಡ ಬೇಗನೆ ನಿರ್ಗಮಿಸಿದರು.

ಆದರೆ ಮತ್ತೊಂದೆಡೆ ಮಯಾಂಕ್ ಅಗರ್ವಾಲ್ ಕ್ರೀಸ್ ಕಚ್ಚಿ ನಿಂತಿದ್ದರು. ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಮಯಾಂಕ್ ಒಂದೊಂದು ರನ್​ಗಳೊಂದಿಗೆ ಸ್ಕೋರ್ ಪೇರಿಸುತ್ತಾ ಸಾಗಿದರು. ಪರಿಣಾಮ 6 ವಿಕೆಟ್ ನಷ್ಟಕ್ಕೆ ದಕ್ಷಿಣ ವಲಯ ತಂಡವು 142 ರನ್​ಗಳಿಸಲು ಸಾಧ್ಯವಾಯಿತು.

ಇದಾದ ಬಳಿಕ ಬಿರುಸಿನ ಆಟಕ್ಕೆ ಮುಂದಾದ ಮಯಾಂಕ್ ಅಗರ್ವಾಲ್​ರನ್ನು ಔಟ್ ಮಾಡುವಲ್ಲಿ ಪಾರ್ಥ್ ಭುತ್ ಯಶಸ್ವಿಯಾದರು. ಇತ್ತ 115 ಎಸೆತಗಳನ್ನು ಎದುರಿಸಿದ ಮಯಾಂಕ್ 9 ಫೋರ್​ಗಳೊಂದಿಗೆ 98 ರನ್​ಗೆ ವಿಕೆಟ್​ ಒಪ್ಪಿಸಿ 2 ರನ್​ಗಳಿಂದ ಶತಕ ವಂಚಿತರಾದರು.

ಇನ್ನು ಅಂತಿಮ ಹಂತದಲ್ಲಿ ಬೌಲರ್​ಗಳಾದ ವಿಜಯಕುಮಾರ್ ವೈಶಾಕ್ (20) ಹಾಗೂ ವಿಧ್ವತ್ ಕಾವೇರಪ್ಪ (19) ಅಮೂಲ್ಯ ಕೊಡುಗೆ ನೀಡುವ ಮೂಲಕ ತಂಡದ ಮೊತ್ತವನ್ನು 200ರ ಗಡಿದಾಟಿಸಿದರು. ಇದಾಗ್ಯೂ 46.1 ಓವರ್​ಗಳಲ್ಲಿ 206 ರನ್​ಗಳಿಗೆ ದಕ್ಷಿಣ ವಲಯ ತಂಡವನ್ನು ಆಲೌಟ್ ಮಾಡುವಲ್ಲಿ ಪಶ್ಚಿಮ ವಲಯ ಬೌಲರ್​ಗಳು ಯಶಸ್ವಿಯಾದರು.

207 ರನ್​ಗಳ ಸುಲಭ ಗುರಿ ಬೆನ್ನತ್ತಿದ ಪಶ್ಚಿಮ ವಲಯ ಕೂಡ ಉತ್ತಮ ಆರಂಭ ಪಡೆಯಲಿಲ್ಲ. ಆರಂಭಿಕ ಆಟಗಾರ ಪ್ರಿಯಾಂಕ್ ಪಾಂಚಾಲ್ (0) ರನೌಟ್ ಆದರು. ಇದರ ಬೆನ್ನಲ್ಲೇ ಹಾರ್ವಿಕ್ ದೇಸಾಯಿಗೆ ಕನ್ನಡಿಗ ವಿ.ಕೌಶಿಕ್ ಪೆವಿಲಿಯನ್ ಹಾದಿ ತೋರಿಸಿದರು.

ಇನ್ನು ರಾಹುಲ್ ತ್ರಿಪಾಠಿ (15) ಯನ್ನು ಎಲ್​ಬಿ ಬಲೆಗೆ ಬೀಳಿಸಿ ವಿಧ್ವತ್ ಕಾವೇರಪ್ಪ 3ನೇ ಯಶಸ್ಸು ತಂದುಕೊಟ್ಟರು. ಇನ್ನು ಅಂಕಿ ಬಾವ್ನೆ (17) ರನೌಟ್ ಆಗಿ ಹೊರನಡೆದರು. ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಸರ್ಫರಾಝ್ ಖಾನ್ ತಂಡಕ್ಕೆ ಆಸರೆಯಾಗಿ ನಿಂತರು. 42 ಎಸೆತಗಳಲ್ಲಿ 2 ಭರ್ಜರಿ ಸಿಕ್ಸ್ 5 ಫೋರ್​ಗಳೊಂದಿಗೆ 42 ರನ್ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಸರ್ಫರಾಝ್​ರನ್ನು ಔಟ್ ಮಾಡುವಲ್ಲಿ ಕೊನೆಗೂ ವಿಜಯಕುಮಾರ್ ವೈಶಾಕ್ ಯಶಸ್ವಿಯಾದರು.

ಸರ್ಫರಾಝ್ ಖಾನ್ ವಿಕೆಟ್ ಸಿಗುತ್ತಿದ್ದಂತೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ದಕ್ಷಿಣ ವಲಯ ಬೌಲರ್​ಗಳು ಪಶ್ಚಿಮ ವಲಯ ಬ್ಯಾಟರ್​ಗಳ ಮೇಲೆ ಒತ್ತಡ ಹೇರುವಲ್ಲಿ ಸಫಲರಾದರು. ಈ ಹಂತದಲ್ಲಿ ಅತಿತ್ ಶೇಠ್ 40 ರನ್​ ಬಾರಿಸಿ ಮಿಂಚಿದರು. ಆದರೆ ವಾಷಿಂಗ್ಟನ್ ಸುಂದರ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಅತಿತ್ ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದರು.

ಈ ವಿಕೆಟ್​ನೊಂದಿಗೆ ದಕ್ಷಿಣ ವಲಯ ತಂಡವು ಗೆಲುವನ್ನು ಖಚಿತಪಡಿಸಿಕೊಂಡಿತು. ಅಂತಿಮವಾಗಿ ಪಶ್ಚಿಮ ವಲಯ ತಂಡವನ್ನು 36.2 ಓವರ್​ಗಳಲ್ಲಿ 194 ರನ್​ಗಳಿಗೆ ಆಲೌಟ್ ಮಾಡಿ, ದಕ್ಷಿಣ ವಲಯ ತಂಡವು 12 ರನ್​ಗಳ ರೋಚಕ ಜಯ ಸಾಧಿಸಿತು. ದಕ್ಷಿಣ ವಲಯ ಪರ ಸಾಯಿ ಕಿಶೋರ್ 3 ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್ 2 ವಿಕೆಟ್ ಕಬಳಿಸಿದರು.

ಪಶ್ಚಿಮ ವಲಯ ಪ್ಲೇಯಿಂಗ್ 11: ಹಾರ್ವಿಕ್ ದೇಸಾಯಿ (ವಿಕೆಟ್ ಕೀಪರ್) , ಪ್ರಿಯಾಂಕ್ ಪಾಂಚಾಲ್ (ನಾಯಕ) , ರಾಹುಲ್ ತ್ರಿಪಾಠಿ , ಸರ್ಫರಾಝ್ ಖಾನ್ , ಅಂಕಿತ್ ಬಾವ್ನೆ , ಶಿವಂ ದುಬೆ , ಅತಿತ್ ಶೇಠ್ , ಪಾರ್ಥ್ ಭುತ್ , ಶಮ್ಸ್ ಮುಲಾನಿ , ಅರ್ಜನ್ ನಾಗವಾಸ್ವಾಲ್ಲಾ , ರಾಜವರ್ಧನ್ ಹಂಗರ್ಗೇಕರ್.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ದಕ್ಷಿಣ ವಲಯ ಪ್ಲೇಯಿಂಗ್ 11: ರೋಹನ್ ಕುನ್ನುಮ್ಮಲ್ , ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ಎನ್ ಜಗದೀಸನ್ (ವಿಕೆಟ್ ಕೀಪರ್) , ಸಾಯಿ ಕಿಶೋರ್ , ವಿಧ್ವತ್ ಕಾವೇರಪ್ಪ , ವಾಷಿಂಗ್ಟನ್ ಸುಂದರ್ , ರಿಕಿ ಭುಯಿ , ವಿಜಯಕುಮಾರ್ ವೈಶಾಕ್ , ವಾಸುಕಿ ಕೌಶಿಕ್ , ಅರುಣ್ ಕಾರ್ತಿಕ್.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ