AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohan Kunnummal: 68 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ರೋಹನ್

Deodhar Trophy final: ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಬ್ಯಾಟಿಂಗ್​ನಿಂದ ದಕ್ಷಿಣ ವಲಯ ತಂಡವು ಈ ಪಂದ್ಯದಲ್ಲಿ ಅತ್ಯುತ್ತಮ ಆರಂಭ ಪಡೆಯಿತು.

Rohan Kunnummal: 68 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ರೋಹನ್
Rohan Kunnummal
TV9 Web
| Edited By: |

Updated on: Aug 03, 2023 | 6:45 PM

Share

ಪುದುಚೇರಿಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ದೇವಧರ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹನ್ ಕುನ್ನುಮ್ಮಲ್ (Rohan Kunnummal) ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಪೂರ್ವ ವಲಯ ವಿರುದ್ಧದ ಈ ಪಂದ್ಯದಲ್ಲಿ ದಕ್ಷಿಣ ವಲಯ ಪರ ಆರಂಭಿಕನಾಗಿ ಕಣಕ್ಕಿಳಿದ ರೋಹನ್ ಕೇವಲ 68 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ದಕ್ಷಿಣ ವಲಯ ತಂಡವು ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ವಲಯ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು. ಅಲ್ಲದೆ ರೋಹನ್ ಕುನ್ನುಮ್ಮಲ್ ಜೊತೆ ಇನಿಂಗ್ಸ್ ಆರಂಭಿಸಿದ ಮಯಾಂಕ್ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು.

ಮಯಾಂಕ್​ ಜೊತೆಗೂಡಿ ಮೊದಲ ವಿಕೆಟ್​ಗೆ 181 ರನ್​ ಪೇರಿಸಿದ ರೋಹನ್ ಕುನ್ನುಮ್ಮಲ್ ಪೂರ್ವ ವಲಯ ಬೌಲರ್​ಗಳ ಬೆಂಡೆತ್ತಿದ್ದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಕೇರಳದ ಈ ಯುವ ಬ್ಯಾಟರ್ ಕೇವಲ 68 ಎಸೆತಗಳಲ್ಲಿ ಶತಕ ಪೂರೈಸಿದರು.

ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಲು ಹೋದ ರೋಹನ್ 75 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 107 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಮಯಾಂಕ್ ಅಗರ್ವಾಲ್ 83 ಎಸೆತಗಳಲ್ಲಿ 63 ರನ್​ಗಳ ಕೊಡುಗೆ ನೀಡಿದರು.

ಬೃಹತ್ ಮೊತ್ತ ಪೇರಿಸಿದ ದಕ್ಷಿಣ ವಲಯ:

ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಬ್ಯಾಟಿಂಗ್​ನಿಂದ ದಕ್ಷಿಣ ವಲಯ ತಂಡವು ಈ ಪಂದ್ಯದಲ್ಲಿ ಅತ್ಯುತ್ತಮ ಆರಂಭ ಪಡೆಯಿತು. ಇವರ ಬಳಿಕ ಕಣಕ್ಕಿಳಿದ ಎನ್​ ಜಗದೀಸನ್ (60) ಕೂಡ ಅರ್ಧಶತಕ ಸಿಡಿಸಿದರು. ಪರಿಣಾಮ ನಿಗದಿತ 50 ಓವರ್​ಗಳಲ್ಲಿ ದಕ್ಷಿಣ ವಲಯ ತಂಡವು 8 ವಿಕೆಟ್ ನಷ್ಟಕ್ಕೆ 328 ರನ್​ ಪೇರಿಸಿದೆ. ಈ ಮೂಲಕ ಪೂರ್ವ ವಲಯ ತಂಡಕ್ಕೆ 329 ರನ್​ಗಳ ಟಾರ್ಗೆಟ್ ನೀಡಿದೆ.

ರೋಹನ್ ಅಬ್ಬರ:

25 ವರ್ಷದ ರೋಹನ್ ಕುನ್ನುಮ್ಮಲ್ ದೇಶೀಯ ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಸಂಚಲನ ಸೃಷ್ಟಿಸುತ್ತಿದ್ದಾರೆ. ಈ ಬಾರಿಯ ದೇವಧರ್ ಟೂರ್ನಿಯಲ್ಲಿ 6 ಇನ್ನಿಂಗ್ಸ್‌ಗಳಲ್ಲಿ 62.20 ಸರಾಸರಿಯಲ್ಲಿ 311 ರನ್ ಗಳಿಸಿದ್ದಾರೆ. ಹಾಗೆಯೇ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಇದುವರೆಗೆ 3 ಶತಕ ಹಾಗೂ 5 ಅರ್ಧ ಶತಕಗಳನ್ನು ಸಹ ಬಾರಿಸಿದ್ದಾರೆ.

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ