AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohan Kunnummal: 68 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ರೋಹನ್

Deodhar Trophy final: ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಬ್ಯಾಟಿಂಗ್​ನಿಂದ ದಕ್ಷಿಣ ವಲಯ ತಂಡವು ಈ ಪಂದ್ಯದಲ್ಲಿ ಅತ್ಯುತ್ತಮ ಆರಂಭ ಪಡೆಯಿತು.

Rohan Kunnummal: 68 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ರೋಹನ್
Rohan Kunnummal
TV9 Web
| Edited By: |

Updated on: Aug 03, 2023 | 6:45 PM

Share

ಪುದುಚೇರಿಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ದೇವಧರ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹನ್ ಕುನ್ನುಮ್ಮಲ್ (Rohan Kunnummal) ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಪೂರ್ವ ವಲಯ ವಿರುದ್ಧದ ಈ ಪಂದ್ಯದಲ್ಲಿ ದಕ್ಷಿಣ ವಲಯ ಪರ ಆರಂಭಿಕನಾಗಿ ಕಣಕ್ಕಿಳಿದ ರೋಹನ್ ಕೇವಲ 68 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ದಕ್ಷಿಣ ವಲಯ ತಂಡವು ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ವಲಯ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು. ಅಲ್ಲದೆ ರೋಹನ್ ಕುನ್ನುಮ್ಮಲ್ ಜೊತೆ ಇನಿಂಗ್ಸ್ ಆರಂಭಿಸಿದ ಮಯಾಂಕ್ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು.

ಮಯಾಂಕ್​ ಜೊತೆಗೂಡಿ ಮೊದಲ ವಿಕೆಟ್​ಗೆ 181 ರನ್​ ಪೇರಿಸಿದ ರೋಹನ್ ಕುನ್ನುಮ್ಮಲ್ ಪೂರ್ವ ವಲಯ ಬೌಲರ್​ಗಳ ಬೆಂಡೆತ್ತಿದ್ದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಕೇರಳದ ಈ ಯುವ ಬ್ಯಾಟರ್ ಕೇವಲ 68 ಎಸೆತಗಳಲ್ಲಿ ಶತಕ ಪೂರೈಸಿದರು.

ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಲು ಹೋದ ರೋಹನ್ 75 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 107 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಮಯಾಂಕ್ ಅಗರ್ವಾಲ್ 83 ಎಸೆತಗಳಲ್ಲಿ 63 ರನ್​ಗಳ ಕೊಡುಗೆ ನೀಡಿದರು.

ಬೃಹತ್ ಮೊತ್ತ ಪೇರಿಸಿದ ದಕ್ಷಿಣ ವಲಯ:

ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಬ್ಯಾಟಿಂಗ್​ನಿಂದ ದಕ್ಷಿಣ ವಲಯ ತಂಡವು ಈ ಪಂದ್ಯದಲ್ಲಿ ಅತ್ಯುತ್ತಮ ಆರಂಭ ಪಡೆಯಿತು. ಇವರ ಬಳಿಕ ಕಣಕ್ಕಿಳಿದ ಎನ್​ ಜಗದೀಸನ್ (60) ಕೂಡ ಅರ್ಧಶತಕ ಸಿಡಿಸಿದರು. ಪರಿಣಾಮ ನಿಗದಿತ 50 ಓವರ್​ಗಳಲ್ಲಿ ದಕ್ಷಿಣ ವಲಯ ತಂಡವು 8 ವಿಕೆಟ್ ನಷ್ಟಕ್ಕೆ 328 ರನ್​ ಪೇರಿಸಿದೆ. ಈ ಮೂಲಕ ಪೂರ್ವ ವಲಯ ತಂಡಕ್ಕೆ 329 ರನ್​ಗಳ ಟಾರ್ಗೆಟ್ ನೀಡಿದೆ.

ರೋಹನ್ ಅಬ್ಬರ:

25 ವರ್ಷದ ರೋಹನ್ ಕುನ್ನುಮ್ಮಲ್ ದೇಶೀಯ ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಸಂಚಲನ ಸೃಷ್ಟಿಸುತ್ತಿದ್ದಾರೆ. ಈ ಬಾರಿಯ ದೇವಧರ್ ಟೂರ್ನಿಯಲ್ಲಿ 6 ಇನ್ನಿಂಗ್ಸ್‌ಗಳಲ್ಲಿ 62.20 ಸರಾಸರಿಯಲ್ಲಿ 311 ರನ್ ಗಳಿಸಿದ್ದಾರೆ. ಹಾಗೆಯೇ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಇದುವರೆಗೆ 3 ಶತಕ ಹಾಗೂ 5 ಅರ್ಧ ಶತಕಗಳನ್ನು ಸಹ ಬಾರಿಸಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ