AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohan Kunnummal: 68 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ರೋಹನ್

Deodhar Trophy final: ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಬ್ಯಾಟಿಂಗ್​ನಿಂದ ದಕ್ಷಿಣ ವಲಯ ತಂಡವು ಈ ಪಂದ್ಯದಲ್ಲಿ ಅತ್ಯುತ್ತಮ ಆರಂಭ ಪಡೆಯಿತು.

Rohan Kunnummal: 68 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ರೋಹನ್
Rohan Kunnummal
TV9 Web
| Edited By: |

Updated on: Aug 03, 2023 | 6:45 PM

Share

ಪುದುಚೇರಿಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ದೇವಧರ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹನ್ ಕುನ್ನುಮ್ಮಲ್ (Rohan Kunnummal) ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಪೂರ್ವ ವಲಯ ವಿರುದ್ಧದ ಈ ಪಂದ್ಯದಲ್ಲಿ ದಕ್ಷಿಣ ವಲಯ ಪರ ಆರಂಭಿಕನಾಗಿ ಕಣಕ್ಕಿಳಿದ ರೋಹನ್ ಕೇವಲ 68 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ದಕ್ಷಿಣ ವಲಯ ತಂಡವು ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ವಲಯ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು. ಅಲ್ಲದೆ ರೋಹನ್ ಕುನ್ನುಮ್ಮಲ್ ಜೊತೆ ಇನಿಂಗ್ಸ್ ಆರಂಭಿಸಿದ ಮಯಾಂಕ್ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು.

ಮಯಾಂಕ್​ ಜೊತೆಗೂಡಿ ಮೊದಲ ವಿಕೆಟ್​ಗೆ 181 ರನ್​ ಪೇರಿಸಿದ ರೋಹನ್ ಕುನ್ನುಮ್ಮಲ್ ಪೂರ್ವ ವಲಯ ಬೌಲರ್​ಗಳ ಬೆಂಡೆತ್ತಿದ್ದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಕೇರಳದ ಈ ಯುವ ಬ್ಯಾಟರ್ ಕೇವಲ 68 ಎಸೆತಗಳಲ್ಲಿ ಶತಕ ಪೂರೈಸಿದರು.

ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಲು ಹೋದ ರೋಹನ್ 75 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 107 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಮಯಾಂಕ್ ಅಗರ್ವಾಲ್ 83 ಎಸೆತಗಳಲ್ಲಿ 63 ರನ್​ಗಳ ಕೊಡುಗೆ ನೀಡಿದರು.

ಬೃಹತ್ ಮೊತ್ತ ಪೇರಿಸಿದ ದಕ್ಷಿಣ ವಲಯ:

ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಬ್ಯಾಟಿಂಗ್​ನಿಂದ ದಕ್ಷಿಣ ವಲಯ ತಂಡವು ಈ ಪಂದ್ಯದಲ್ಲಿ ಅತ್ಯುತ್ತಮ ಆರಂಭ ಪಡೆಯಿತು. ಇವರ ಬಳಿಕ ಕಣಕ್ಕಿಳಿದ ಎನ್​ ಜಗದೀಸನ್ (60) ಕೂಡ ಅರ್ಧಶತಕ ಸಿಡಿಸಿದರು. ಪರಿಣಾಮ ನಿಗದಿತ 50 ಓವರ್​ಗಳಲ್ಲಿ ದಕ್ಷಿಣ ವಲಯ ತಂಡವು 8 ವಿಕೆಟ್ ನಷ್ಟಕ್ಕೆ 328 ರನ್​ ಪೇರಿಸಿದೆ. ಈ ಮೂಲಕ ಪೂರ್ವ ವಲಯ ತಂಡಕ್ಕೆ 329 ರನ್​ಗಳ ಟಾರ್ಗೆಟ್ ನೀಡಿದೆ.

ರೋಹನ್ ಅಬ್ಬರ:

25 ವರ್ಷದ ರೋಹನ್ ಕುನ್ನುಮ್ಮಲ್ ದೇಶೀಯ ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಸಂಚಲನ ಸೃಷ್ಟಿಸುತ್ತಿದ್ದಾರೆ. ಈ ಬಾರಿಯ ದೇವಧರ್ ಟೂರ್ನಿಯಲ್ಲಿ 6 ಇನ್ನಿಂಗ್ಸ್‌ಗಳಲ್ಲಿ 62.20 ಸರಾಸರಿಯಲ್ಲಿ 311 ರನ್ ಗಳಿಸಿದ್ದಾರೆ. ಹಾಗೆಯೇ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಇದುವರೆಗೆ 3 ಶತಕ ಹಾಗೂ 5 ಅರ್ಧ ಶತಕಗಳನ್ನು ಸಹ ಬಾರಿಸಿದ್ದಾರೆ.

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್