AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕರ್ಷಕ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

IND vs SL XI: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ XI ತಂಡವು ಮೊದಲ ಇನಿಂಗ್ಸ್​ನಲ್ಲಿ 8 ವಿಕೆಟ್ ಕಳೆದುಕೊಂಡು 363 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿರುವ ಟೀಮ್ ಇಂಡಿಯಾ 32 ಓವರ್​ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 127 ರನ್​ಗಳಿಸಿದೆ.

ಆಕರ್ಷಕ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್
Devdutt Paddikal
ಝಾಹಿರ್ ಯೂಸುಫ್
|

Updated on:Aug 08, 2026 | 1:57 PM

Share

ಭಾರತ ಹಾಗೂ ಶ್ರೀಲಂಕಾ ನಡುವಿನ ಮುಂಬರುವ ಟೆಸ್ಟ್ ಸರಣಿಗೆ ಸಿದ್ಧತೆಯಾಗಿ ಕೊಲಂಬೋದ ಎನ್‌ಸಿಸಿ ಮೈದಾನದಲ್ಲಿ ನಡೆಯುತ್ತಿರುವ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದೇವದತ್ ಪಡಿಕ್ಕಲ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಶ್ರೀಲಂಕಾ ಕ್ರಿಕೆಟ್ ಪ್ರೆಸಿಡೆಂಟ್ಸ್ ಇಲೆವೆನ್ (SLC XI) ವಿರುದ್ಧದ ಈ ಪಂದ್ಯದ ಎರಡನೇ ದಿನದಾಟದಲ್ಲಿ ಪಡಿಕ್ಕಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ಆರಂಭಿಕ ಆಘಾತಕ್ಕೆ ಪಡಿಕ್ಕಲ್ ಆಸರೆ:

ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಖಾತೆ ತೆರೆಯುವ ಮುನ್ನವೇ ಶೂನ್ಯಕ್ಕೆ ಔಟಾಗಿ ಪೆವಿಲಿಯನ್ ಸೇರಿದರು. ಈ ವೇಳೆ ಮೂರನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ದೇವದತ್ ಪಡಿಕ್ಕಲ್, ಮತ್ತೊಬ್ಬ ಕನ್ನಡಿಗ ಕೆ.ಎಲ್. ರಾಹುಲ್ ಜೊತೆಗೂಡಿ ಇನ್ನಿಂಗ್ಸ್ ಕಟ್ಟಿದರು.

ಎದುರಾಳಿ ಬೌಲರ್‌ಗಳನ್ನು ಅತ್ಯಂತ ನಿರಾಳವಾಗಿ ಎದುರಿಸಿದ ಪಡಿಕ್ಕಲ್, ಕೇವಲ 61 ಎಸೆತಗಳಲ್ಲಿ 6 ಬೌಂಡರಿಗಳ ನೆರವಿನಿಂದ ತಮಗೆ ಸಿಕ್ಕ ಅವಕಾಶವನ್ನು ಭರ್ಜರಿ ಅರ್ಧಶತಕವನ್ನಾಗಿ ಪರಿವರ್ತಿಸಿದರು.

ಇದೀಗ ಆಕರ್ಷಕ ಅರ್ಧಶತಕದೊಂದಿಗೆ ಬ್ಯಾಟಿಂಗ್ ಮುಂದುವರೆಸಿರುವ ದೇವದತ್ ಪಡಿಕ್ಕಲ್ ಮೊದಲ ಟೆಸ್ಟ್​ನಲ್ಲಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಈ ಹಿಂದೆ ಟೀಮ್ ಇಂಡಿಯಾ ಪರ ಸಾಯಿ ಸುದರ್ಶನ್ ಮೂರನೇ ಕ್ರಮಾಂಕದಲ್ಲಿ ಆಡುತ್ತಿದ್ದರು.

ಬೆರಳಿನ ಗಾಯದ ಕಾರಣ ಸಾಯಿ ಸುದರ್ಶನ್ ಅಭ್ಯಾಸ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಇತ್ತ ಸಿಕ್ಕ ಅವಕಾಶವನ್ನು ಬಳಿಸಿಕೊಂಡಿರುವ ದೇವದತ್ ಪಡಿಕ್ಕಲ್ ಆಕರ್ಷಕ ಅರ್ಧಶತಕ ಸಿಡಿಸಿದ್ದಾರೆ. ಹೀಗಾಗಿ ಆಗಸ್ಟ್ 15 ರಿಂದ ಶುರುವಾಗಲಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಕೂಡ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಮೊದಲ ಇನಿಂಗ್ಸ್​:

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ XI ತಂಡವು ಮೊದಲ ಇನಿಂಗ್ಸ್​ನಲ್ಲಿ 8 ವಿಕೆಟ್ ಕಳೆದುಕೊಂಡು 363 ರನ್​ಗಳಿಸಿ ಡಿಕ್ಲೇರ್ ಘೋಷಿಸಿದೆ. ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿರುವ ಟೀಮ್ ಇಂಡಿಯಾ 32 ಓವರ್​ಗಳ ಮುಕ್ತಾಯದ ವೇಳೆಗೆ 2 ವಿಕೆಟ್ ಕಳೆದುಕೊಂಡು 127 ರನ್​ಗಳಿಸಿದೆ.

ಶ್ರೀಲಂಕಾ  XI ತಂಡ (SLC XI): ಸೋನಾಲ್ ದಿನುಷಾ (ನಾಯಕ), ನಿಶಾನ್ ಮದುಷ್ಕ, ಅಂಜಲಾ ಬಂಡಾರ (ವಿಕೆಟ್ ಕೀಪರ್), ರವಿಂದು ರಶಾಂಥ, ಪಸಿಂದು ಸೂರಿಯಬಂಡಾರ, ಪವನ್ ರತ್ನಾಯಕೆ, ಅಹಾನ್ ವಿಕ್ರಮಸಿಂಘೆ, ನಿಪುನ್ ಧನಂಜಯ, ಲಹೀರು ಕುಮಾರ, ವಿಶ್ವ ಫೆರ್ನಾಂಡೋ, ಅಸಂಕ ಮನೋಜ್, ಇಸಿತ ವಿಜೇಸುಂದರ, ರಮೇಶ್ ಮೆಂಡಿಸ್, ಕೇಸರ ನುವಂತ ಮತ್ತು ದಿಲುಮ್ ಸುದೀರ.

ಇದನ್ನೂ ಓದಿ: 5000 ಏಕದಿನ ಪಂದ್ಯಗಳು: ಒಡಿಐ ಕ್ರಿಕೆಟ್​ನಲ್ಲಿ ಭಾರತೀಯದ್ದೇ ಅಧಿಪತ್ಯ!

ಭಾರತ ಟೆಸ್ಟ್ ತಂಡ: ಶುಭ್‌ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ರಿಷಭ್ ಪಂತ್, ಧ್ರುವ್ ಜುರೆಲ್, ಯಶಸ್ವಿ ಜೈಸ್ವಾಲ್, ದೇವದತ್ ಪಡಿಕ್ಕಲ್, ಸಾಯಿ ಸುದರ್ಶನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮಾನವ್ ಸುತಾರ್, ಸರಂಶ್ ಜೈನ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಗುರ್ನೂರ್ ಬ್ರಾರ್, ಆಖಿಬ್ ನಬಿ.

Published On - 1:56 pm, Sat, 8 August 26

Follow Us
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
‘ಟಾಕ್ಸಿಕ್’ ಟ್ರೇಲರ್ ಲಾಂಚ್​ಗೆ ಬಂದ ಲೇಡೀಸ್ ಆ್ಯಂಡ್ ಲೇಡೀಸ್
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
ತುಮಕೂರು ಪಡಿತರದಾರರಿಗೆ ಸರ್ಕಾರ ಶಾಕ್: 14 ಸಾವಿರ ಬಿಪಿಎಲ್ ಕಾರ್ಡ್ ರದ್ದು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
: ಕಂದಕಕ್ಕೆ ಉರುಳಿದ ಬಸ್, 7 ಪ್ರಯಾಣಿಕರು ಸಾವು
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಹಾವನೂರು ಬಡಾವಣೆ ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆ!
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಜೋರಾದ ಖಾತೆ ಹಂಚಿಕೆ ಕಸರತ್ತು: ಸಿದ್ದರಾಮಯ್ಯ ಜೊತೆ ಡಿಕೆಶಿ ಗಂಭೀರ ಚರ್ಚೆ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಮೆಟ್ರೋ ಕಾಮಗಾರಿ ವೇಳೆ ನೆಲಕ್ಕೆ ಬಿದ್ದ ಬೃಹತ್ ಶೀಟ್: ತಪ್ಪಿದ ಭಾರಿ ದುರಂತ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ಕರ್ನಾಟಕ ಎಸ್‌ಐಆರ್ ಅವಧಿ ಆಗಸ್ಟ್ 8ರ ಬದಲು ಆಗಸ್ಟ್ 17ರ ತನಕ ವಿಸ್ತರಣೆ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ