AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್

Vijay hazare Trophy: ವಿಜಯ ಹಝಾರೆ ಟೂರ್ನಿಯಲ್ಲಿ ಗ್ರೂಪ್-ಎ ನಲ್ಲಿ ಕಣಕ್ಕಿಳಿಯುತ್ತಿರುವ ಕರ್ನಾಟಕ ತಂಡವು ಮೊದಲ ಮೂರು ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಕೇರಳ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 4 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್
Devdutt Padikkal
ಝಾಹಿರ್ ಯೂಸುಫ್
|

Updated on: Dec 31, 2025 | 2:22 PM

Share

ಅಹಮದಾಬಾದ್​ನ ರೈಲ್ವೇಸ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ. ಪುದುಚೇರಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು.

ಆರಂಭದಿಂದಲೇ ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್​ಗೆ ಪೇರಿಸಿದ್ದು ಬರೋಬ್ಬರಿ 228 ರನ್​ಗಳು. ಇದರ ನಡುವೆ 116 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 113 ರನ್ ಬಾರಿಸಿ ದೇವದತ್ ಪಡಿಕ್ಕಲ್ ಔಟಾದರು.

ಇದಾಗ್ಯೂ ಮತ್ತೊಂದೆಡೆ ಇನಿಂಗ್ಸ್ ಕಟ್ಟುವ ಕಾಯಕ ಮುಂದುವರೆಸಿದ ಮಯಾಂಕ್ ಅಗರ್ವಾಲ್ 124 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್​ಗಳನ್ನು ಬಾರಿಸಿದರು. ಈ ಮೂಲಕ 132 ರನ್​ಗಳನ್ನು ಬಾರಿಸಿ ಮಯಾಂಕ್​​ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಕರುಣ್ ನಾಯರ್ ತಮ್ಮ ಅನುಭವಯನ್ನು ಧಾರೆಯೆದರು. ಈ ಮೂಲಕ 34 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿದರು.

ಇನ್ನು ಸ್ಮರಣ್ ರವಿಚಂದ್ರನ್ 21 ರನ್​ಗಳ ಕೊಡುಗೆ ನೀಡಿದರೆ, ಅಭಿನವ್ ಮನೋಹರ್ 6 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 21 ರನ್ ಬಾರಿಸಿದರು. ಈ ಮೂಲಕ ಕರ್ನಾಟಕ ತಂಡವು 50 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 363 ರನ್​ ಕಲೆಹಾಕಿದೆ.

ಪುದುಚೇರಿ (ಪ್ಲೇಯಿಂಗ್ XI): ಸಿದಕ್ ಸಿಂಗ್, ವಿಶಾಲ್ ಖೋಖರ್, ಅಜಯ್ ರೊಹೆರಾ (ವಿಕೆಟ್ ಕೀಪರ್), ನೆಯಾನ್ ಶ್ಯಾಮ್ ಕಂಗಾಯನ್, ಜಶ್ವಂತ್ ಶ್ರೀರಾಮ್, ಮೋಹಿತ್ ಕಾಳೆ, ಪಾರ್ಥ್ ವಘಾನಿ, ಅಮಾನ್ ಖಾನ್ (ನಾಯಕ), ಜಯಂತ್ ಯಾದವ್, ಸಾಗರ್ ಉದೇಶಿ, ವಿಕನೇಶ್ವರನ್ ಮರಿಮುತ್ತು.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಕರ್ನಾಟಕ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್), ಶ್ರೇಯಸ್ ಗೋಪಾಲ್, ಅಭಿನವ್ ಮನೋಹರ್, ಶ್ರೀಶ ಆಚಾರ್, ಅಭಿಲಾಷ್ ಶೆಟ್ಟಿ, ವಿಧ್ವತ್ ಕಾವೇರಪ್ಪ, ಮನ್ವಂತ್ ಕುಮಾರ್.

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ