ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್
Vijay hazare Trophy: ವಿಜಯ ಹಝಾರೆ ಟೂರ್ನಿಯಲ್ಲಿ ಗ್ರೂಪ್-ಎ ನಲ್ಲಿ ಕಣಕ್ಕಿಳಿಯುತ್ತಿರುವ ಕರ್ನಾಟಕ ತಂಡವು ಮೊದಲ ಮೂರು ಮ್ಯಾಚ್ಗಳಲ್ಲೂ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು 5 ವಿಕೆಟ್ಗಳಿಂದ ಮಣಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಕೇರಳ ವಿರುದ್ಧ 8 ವಿಕೆಟ್ಗಳ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 4 ವಿಕೆಟ್ಗಳ ಗೆಲುವು ದಾಖಲಿಸಿದೆ.

ಅಹಮದಾಬಾದ್ನ ರೈಲ್ವೇಸ್ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ. ಪುದುಚೇರಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು.
ಆರಂಭದಿಂದಲೇ ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್ಗೆ ಪೇರಿಸಿದ್ದು ಬರೋಬ್ಬರಿ 228 ರನ್ಗಳು. ಇದರ ನಡುವೆ 116 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್ಗಳೊಂದಿಗೆ 113 ರನ್ ಬಾರಿಸಿ ದೇವದತ್ ಪಡಿಕ್ಕಲ್ ಔಟಾದರು.
ಇದಾಗ್ಯೂ ಮತ್ತೊಂದೆಡೆ ಇನಿಂಗ್ಸ್ ಕಟ್ಟುವ ಕಾಯಕ ಮುಂದುವರೆಸಿದ ಮಯಾಂಕ್ ಅಗರ್ವಾಲ್ 124 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್ಗಳನ್ನು ಬಾರಿಸಿದರು. ಈ ಮೂಲಕ 132 ರನ್ಗಳನ್ನು ಬಾರಿಸಿ ಮಯಾಂಕ್ ವಿಕೆಟ್ ಒಪ್ಪಿಸಿದರು.
ಆ ಬಳಿಕ ಬಂದ ಕರುಣ್ ನಾಯರ್ ತಮ್ಮ ಅನುಭವಯನ್ನು ಧಾರೆಯೆದರು. ಈ ಮೂಲಕ 34 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್ಗಳೊಂದಿಗೆ ಅಜೇಯ 64 ರನ್ ಬಾರಿಸಿದರು.
ಇನ್ನು ಸ್ಮರಣ್ ರವಿಚಂದ್ರನ್ 21 ರನ್ಗಳ ಕೊಡುಗೆ ನೀಡಿದರೆ, ಅಭಿನವ್ ಮನೋಹರ್ 6 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ ಅಜೇಯ 21 ರನ್ ಬಾರಿಸಿದರು. ಈ ಮೂಲಕ ಕರ್ನಾಟಕ ತಂಡವು 50 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 363 ರನ್ ಕಲೆಹಾಕಿದೆ.
ಪುದುಚೇರಿ (ಪ್ಲೇಯಿಂಗ್ XI): ಸಿದಕ್ ಸಿಂಗ್, ವಿಶಾಲ್ ಖೋಖರ್, ಅಜಯ್ ರೊಹೆರಾ (ವಿಕೆಟ್ ಕೀಪರ್), ನೆಯಾನ್ ಶ್ಯಾಮ್ ಕಂಗಾಯನ್, ಜಶ್ವಂತ್ ಶ್ರೀರಾಮ್, ಮೋಹಿತ್ ಕಾಳೆ, ಪಾರ್ಥ್ ವಘಾನಿ, ಅಮಾನ್ ಖಾನ್ (ನಾಯಕ), ಜಯಂತ್ ಯಾದವ್, ಸಾಗರ್ ಉದೇಶಿ, ವಿಕನೇಶ್ವರನ್ ಮರಿಮುತ್ತು.
ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ
ಕರ್ನಾಟಕ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್), ಶ್ರೇಯಸ್ ಗೋಪಾಲ್, ಅಭಿನವ್ ಮನೋಹರ್, ಶ್ರೀಶ ಆಚಾರ್, ಅಭಿಲಾಷ್ ಶೆಟ್ಟಿ, ವಿಧ್ವತ್ ಕಾವೇರಪ್ಪ, ಮನ್ವಂತ್ ಕುಮಾರ್.
