AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್

Vijay hazare Trophy: ವಿಜಯ ಹಝಾರೆ ಟೂರ್ನಿಯಲ್ಲಿ ಗ್ರೂಪ್-ಎ ನಲ್ಲಿ ಕಣಕ್ಕಿಳಿಯುತ್ತಿರುವ ಕರ್ನಾಟಕ ತಂಡವು ಮೊದಲ ಮೂರು ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಕೇರಳ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 4 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್
Devdutt Padikkal
ಝಾಹಿರ್ ಯೂಸುಫ್
|

Updated on: Dec 31, 2025 | 2:22 PM

Share

ಅಹಮದಾಬಾದ್​ನ ರೈಲ್ವೇಸ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ. ಪುದುಚೇರಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು.

ಆರಂಭದಿಂದಲೇ ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್​ಗೆ ಪೇರಿಸಿದ್ದು ಬರೋಬ್ಬರಿ 228 ರನ್​ಗಳು. ಇದರ ನಡುವೆ 116 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 113 ರನ್ ಬಾರಿಸಿ ದೇವದತ್ ಪಡಿಕ್ಕಲ್ ಔಟಾದರು.

ಇದಾಗ್ಯೂ ಮತ್ತೊಂದೆಡೆ ಇನಿಂಗ್ಸ್ ಕಟ್ಟುವ ಕಾಯಕ ಮುಂದುವರೆಸಿದ ಮಯಾಂಕ್ ಅಗರ್ವಾಲ್ 124 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್​ಗಳನ್ನು ಬಾರಿಸಿದರು. ಈ ಮೂಲಕ 132 ರನ್​ಗಳನ್ನು ಬಾರಿಸಿ ಮಯಾಂಕ್​​ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಕರುಣ್ ನಾಯರ್ ತಮ್ಮ ಅನುಭವಯನ್ನು ಧಾರೆಯೆದರು. ಈ ಮೂಲಕ 34 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿದರು.

ಇನ್ನು ಸ್ಮರಣ್ ರವಿಚಂದ್ರನ್ 21 ರನ್​ಗಳ ಕೊಡುಗೆ ನೀಡಿದರೆ, ಅಭಿನವ್ ಮನೋಹರ್ 6 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 21 ರನ್ ಬಾರಿಸಿದರು. ಈ ಮೂಲಕ ಕರ್ನಾಟಕ ತಂಡವು 50 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 363 ರನ್​ ಕಲೆಹಾಕಿದೆ.

ಪುದುಚೇರಿ (ಪ್ಲೇಯಿಂಗ್ XI): ಸಿದಕ್ ಸಿಂಗ್, ವಿಶಾಲ್ ಖೋಖರ್, ಅಜಯ್ ರೊಹೆರಾ (ವಿಕೆಟ್ ಕೀಪರ್), ನೆಯಾನ್ ಶ್ಯಾಮ್ ಕಂಗಾಯನ್, ಜಶ್ವಂತ್ ಶ್ರೀರಾಮ್, ಮೋಹಿತ್ ಕಾಳೆ, ಪಾರ್ಥ್ ವಘಾನಿ, ಅಮಾನ್ ಖಾನ್ (ನಾಯಕ), ಜಯಂತ್ ಯಾದವ್, ಸಾಗರ್ ಉದೇಶಿ, ವಿಕನೇಶ್ವರನ್ ಮರಿಮುತ್ತು.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಕರ್ನಾಟಕ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್), ಶ್ರೇಯಸ್ ಗೋಪಾಲ್, ಅಭಿನವ್ ಮನೋಹರ್, ಶ್ರೀಶ ಆಚಾರ್, ಅಭಿಲಾಷ್ ಶೆಟ್ಟಿ, ವಿಧ್ವತ್ ಕಾವೇರಪ್ಪ, ಮನ್ವಂತ್ ಕುಮಾರ್.

ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಅಭಿಮಾನಿಗಳ ಜೊತೆ ‘ಮಾರ್ಕ್’ ನೋಡಿದ ಸುದೀಪ್; ಥಿಯೇಟರ್ ಮುಂದೆ ಜನಸಾಗರ
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ?
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಮಹಿಳಾ ಸುರಕ್ಷತೆಗಾಗಿ ಬೆಂಗಳೂರು ಪೊಲೀಸರಿಂದ 50 ಕಡೆ ಮಹಿಳಾ ಸಹಾಯ ಕೇಂದ್ರ
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಸುದೀಪ್ ಬಳಿಕ ಪೈರಸಿ ವಿರುದ್ಧ ಧ್ವನಿ ಎತ್ತಿದ ಜಗ್ಗೇಶ್; ಕಾರಣ ಏನು?
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
ಆನೇಕಲ್: ಸ್ಲೀಪರ್ ಕೋಚ್ ಬಸ್​ಗಳ ನಡುವೆ ಭೀಕರ ಅಪಘಾತ
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
‘ಕ್ಷಣ ಕ್ಷಣಕ್ಕೂ ಕೊಡ್ತೀವಿ, ತಗೋತಾ ಇರ್ಬೇಕು’; ಗಿಲ್ಲಿಗೆ ಅಶ್ವಿನಿ ಚಾಲೆಂಜ್
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ
ಕಾರ್ಮಿಕರ ಹೊತ್ತೊಯ್ಯುತ್ತಿದ್ದ 2 ಲೋಕೊ ರೈಲುಗಳು ಡಿಕ್ಕಿ, 60 ಜನರಿಗೆ ಗಾಯ