AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾನ್​ದಾರ್ ಶತಕ ಸಿಡಿಸಿದ ದೇವದತ್ ಪಡಿಕ್ಕಲ್

Devdutt Padikkal: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಇದೀಗ ದೇಶೀಯ ಅಂಗಳದಲ್ಲಿ ಕಣಕ್ಕಿಳಿದಿದ್ದಾರೆ. ವಿಜಯ ಹಝಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಪರ ಬ್ಯಾಟ್ ಬೀಸಿರುವ ಪಡಿಕ್ಕಲ್ ಭರ್ಜರಿ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಶಾನ್​ದಾರ್ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
Devdutt Padikkal
ಝಾಹಿರ್ ಯೂಸುಫ್
|

Updated on: Jan 11, 2025 | 12:04 PM

Share

ವಡೋದರದ ಮೋತಿ ಬಾಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬರೋಡಾ ತಂಡದ ನಾಯಕ ಕೃನಾಲ್ ಪಾಂಡ್ಯ ಕರ್ನಾಟಕ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಕೇವಲ 6 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ದೇವದತ್ ಪಡಿಕ್ಕಲ್ ಯುವ ಆಟಗಾರ ಅನೀಶ್ ಜೊತೆಗೂಡಿ ಇನಿಂಗ್ಸ್ ಕಟ್ಟಿದರು.

ಅನುಭವಿ ಬರೋಡಾ ಬೌಲರ್​​ಗಳನ್ನು ನಿರಾಯಾಸವಾಗಿ ಎದುರಿಸಿದ ಪಡಿಕ್ಕಲ್ ಮೈದಾನದ ಮೂಲೆ ಮೂಲೆಗೂ ಫೋರ್​​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 96 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಶತಕ ಪೂರೈಸಿದರು.

ಆದರೆ ಶತಕದ ಬೆನ್ನಲ್ಲೇ ಭರ್ಜರಿ ಹೊಡೆತಕ್ಕೆ ಮುಂದಾದ ದೇವದತ್ ಪಡಿಕ್ಕಲ್ (102 ರನ್, 99 ಎಸೆತ) ರಾಜ್ ಲಿಂಬಾನಿ ಎಸೆತದಲ್ಲಿ ಕ್ಯಾಚಿತ್ತು ನಿರ್ಗಮಿಸಿದರು. ಮತ್ತೊಂದೆಡೆ ಪಡಿಕ್ಕಲ್​ಗೆ ಉತ್ತಮ ಸಾಥ್ ನೀಡಿದ ಅನೀಶ್ 64 ಎಸೆತಗಳಲ್ಲಿ 54 ರನ್​ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು 41 ಓವರ್​​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿದೆ.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ದೇವದತ್ ಪಡಿಕ್ಕಲ್ , ಅನೀಶ್ ಕೆ ವಿ , ಸ್ಮರಣ್ ರವಿಚಂದ್ರನ್ , ಕೃಷ್ಣನ್ ಶ್ರೀಜಿತ್ ( ವಿಕೆಟ್ ಕೀಪರ್ ) , ಅಭಿನವ್ ಮನೋಹರ್ , ಹಾರ್ದಿಕ್ ರಾಜ್ , ಶ್ರೇಯಸ್ ಗೋಪಾಲ್ , ಅಭಿಲಾಷ್ ಶೆಟ್ಟಿ , ವಾಸುಕಿ ಕೌಶಿಕ್ , ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: 1,955 ಎಸೆತಗಳಲ್ಲಿ ಇತಿಹಾಸ ರಚಿಸಿದ ಗ್ಲೆನ್ ಮ್ಯಾಕ್ಸ್​ವೆಲ್

ಬರೋಡಾ ಪ್ಲೇಯಿಂಗ್ 11: ಶಾಶ್ವತ್ ರಾವತ್ , ನಿನಾದ್ ಅಶ್ವಿನ್ ಕುಮಾರ್ ರಥ್ವಾ , ಅತಿತ್ ಶೇಠ್ , ಶಿವಾಲಿಕ್ ಶರ್ಮಾ , ಕೃನಾಲ್ ಪಾಂಡ್ಯ (ನಾಯಕ) , ವಿಷ್ಣು ಸೋಲಂಕಿ ( ವಿಕೆಟ್ ಕೀಪರ್ ) , ಮಹೇಶ್ ಪಿಥಿಯಾ , ಭಾರ್ಗವ್ ಭಟ್ , ಭಾನು ಪಾನಿಯಾ , ರಾಜ್ ಲಿಂಬಾನಿ , ಲುಕ್ಮಾನ್ ಮೇರಿವಾಲಾ.

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ