AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devdutt Padikkal: ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

Devdutt Padikkal: ಪಂಜಾಬ್ ತಂಡ ಆಲೌಟ್ ಆದ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಮಯಾಂಕ್ ಅಗರ್ವಾಲ್ (0) ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ರವಿಕುಮಾರ್ ಸಮರ್ಥ್ (38) ಹಾಗೂ ದೇವದತ್ ಪಡಿಕ್ಕಲ್ 2ನೇ ವಿಕೆಟ್​ಗೆ 76 ರನ್​ಗಳ ಜೊತೆಯಾಟವಾಡಿದರು. ಆ ಬಳಿಕ ಬಂದ ನಿಕಿನ್ ಜೋಸ್ ಕೇವಲ 8 ರನ್​ಗಳಿಸಿ ನಿರ್ಗಮಿಸಿದರು.

Devdutt Padikkal: ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್
Devdutt Padikkal
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jan 06, 2024 | 1:30 PM

ಹುಬ್ಬಳ್ಳಿಯ ಕೆಎಸ್​ಸಿಎ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಕರ್ನಾಟಕ ತಂಡದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ವಾಸುಕಿ ಕೌಶಿಕ್ ಅವರ ಮಾರಕ ದಾಳಿಗೆ ತತ್ತರಿಸಿದ ಪಂಜಾಬ್ ತಂಡವು ಕೇವಲ 89 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ನೆಹಾಲ್ ವಧೇರ 44 ರನ್​ಗಳ ಕೊಡುಗೆ ನೀಡಿದರು.

ಇದಾಗ್ಯೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕರ್ನಾಟಕ ಬೌಲರ್​ಗಳು ಕೇವಲ 152 ರನ್​ಗಳಿಗೆ ಪಂಜಾಬ್ ತಂಡವನ್ನು ಆಲೌಟ್ ಮಡುವಲ್ಲಿ ಯಶಸ್ವಿಯಾದರು. ಕರ್ನಾಟಕ ಪರ 15 ಓವರ್​ಗಳನ್ನು ಎಸೆದ ವಾಸುಕಿ ಕೌಶಿಕ್ ಕೇವಲ 41 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದರು.

ದೇವದತ್ ಭರ್ಜರಿ ಶತಕ:

ಪಂಜಾಬ್ ತಂಡ ಆಲೌಟ್ ಆದ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಮಯಾಂಕ್ ಅಗರ್ವಾಲ್ (0) ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ರವಿಕುಮಾರ್ ಸಮರ್ಥ್ (38) ಹಾಗೂ ದೇವದತ್ ಪಡಿಕ್ಕಲ್ 2ನೇ ವಿಕೆಟ್​ಗೆ 76 ರನ್​ಗಳ ಜೊತೆಯಾಟವಾಡಿದರು. ಆ ಬಳಿಕ ಬಂದ ನಿಕಿನ್ ಜೋಸ್ ಕೇವಲ 8 ರನ್​ಗಳಿಸಿ ನಿರ್ಗಮಿಸಿದರು.

ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ ದೇವದತ್ ಪಡಿಕ್ಕಲ್ 115 ಎಸೆತಗಳಲ್ಲಿ ಶತಕ ಪೂರೈಸಿದರು. ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಪಡಿಕ್ಕಲ್​ಗೆ ಮನೀಶ್ ಪಾಂಡೆ ಉತ್ತಮ ಸಾಥ್ ನೀಡಿದರು.

ಪರಿಣಾಮ ಪಡಿಕ್ಕಲ್ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅದರಂತೆ 216 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 24 ಫೋರ್​ಗಳೊಂದಿಗೆ 193 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಕೇವಲ 7 ರನ್​ಗಳಿಂದ ದ್ವಿಶತಕ ವಂಚಿತರಾದರು.

ಪಾಂಡೆ ಪವರ್​:

ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದ ಮನೀಶ್ ಪಾಂಡೆ ಕೂಡ ಭರ್ಜರಿ ಫಾರ್ಮ್​ ಪ್ರದರ್ಶಿಸಿದರು. ಪರಿಣಾಮ ಪಾಂಡೆ ಬ್ಯಾಟ್​ನಿಂದ ಕೇವಲ 142 ಎಸೆತಗಳಲ್ಲಿ ಸೆಂಚುರಿ ಮೂಡಿಬಂತು. 79 ಓವರ್​ಗಳ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು 4 ವಿಕೆಟ್ ಕಳೆದುಕೊಂಡು 358 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಮನೀಶ್ ಪಾಂಡೆ (104) ಹಾಗೂ ಶ್ರೀನಿವಾಸ್ ಶರತ್ (9) ಬ್ಯಾಟಿಂಗ್ ಮಾಡುತ್ತಿದ್ದಾರೆ.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ರವಿಕುಮಾರ್ ಸಮರ್ಥ್ , ಮನೀಶ್ ಪಾಂಡೆ , ನಿಕಿನ್ ಜೋಸ್ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಶುಭಾಂಗ್ ಹೆಗ್ಡೆ , ವಿಜಯ್ ಕುಮಾರ್ ವೈಶಾಕ್ , ರೋಹಿತ್ ಕುಮಾರ್ , ವಿಧ್ವತ್ ಕಾವೇರಪ್ಪ , ವಾಸುಕಿ ಕೌಶಿಕ್.

ಇದನ್ನೂ ಓದಿ: David Warner: ದಾಖಲೆಯೊಂದಿಗೆ ವಿದಾಯ ಹೇಳಿದ ಡೇವಿಡ್ ವಾರ್ನರ್

ಪಂಜಾಬ್ ಪ್ಲೇಯಿಂಗ್ 11: ಪ್ರಭ್‌ಸಿಮ್ರಾನ್ ಸಿಂಗ್ , ಅಭಿಷೇಕ್ ಶರ್ಮಾ , ಮನ್‌ದೀಪ್ ಸಿಂಗ್ (ನಾಯಕ) , ನೆಹಾಲ್ ವಧೇರ , ನಮನ್ ಧೀರ್ , ಗೀತಾಂಶ್ ಖೇರಾ (ವಿಕೆಟ್ ಕೀಪರ್) , ಬಲ್ತೇಜ್ ಸಿಂಗ್ , ಮಯಾಂಕ್ ಮಾರ್ಕಾಂಡೆ , ಪ್ರೀತ್ ದತ್ತಾ , ಸಿದ್ದಾರ್ಥ್ ಕೌಲ್ , ಅರ್ಷದೀಪ್ ಸಿಂಗ್.

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ