AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇವದತ್ ಪಡಿಕ್ಕಲ್​ಗೆ ಜಾಕ್​ಪಾಟ್; ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತಕ್ಕೆ ಮಾರಾಟ ಆದ ಕನ್ನಡಿಗ

Devdutt Padikkal: ದೇವದತ್ ಪಡಿಕ್ಕಲ್ ಅವರು ಮಹಾರಾಜ ಟ್ರೋಫಿ ಟಿ20 ಹರಾಜಿನಲ್ಲಿ ದುಾರಿ ಬೆಲೆಗೆ ಮಾರಾಟವಾಗಿ ಇತಿಹಾಸ ನಿರ್ಮಿಸಿದ್ದಾರೆ. ಇದು ಮಹಾರಾಜ ಟ್ರೋಫಿ ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆ. ಆರ್‌ಸಿಬಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ನಂತರ ಈ ಯಶಸ್ಸು ಪಡಿಕ್ಕಲ್‌ಗೆ ಸಿಕ್ಕಿದೆ.

ದೇವದತ್ ಪಡಿಕ್ಕಲ್​ಗೆ ಜಾಕ್​ಪಾಟ್; ಇತಿಹಾಸದಲ್ಲೇ ಅತಿ ಹೆಚ್ಚು ಮೊತ್ತಕ್ಕೆ ಮಾರಾಟ ಆದ ಕನ್ನಡಿಗ
ದೇವದತ್ ಪಡಿಕ್ಕಲ್
ರಾಜೇಶ್ ದುಗ್ಗುಮನೆ
|

Updated on:Jul 16, 2025 | 11:58 AM

Share

ಕನ್ನಡಿಗ ದೇವದತ್ ಪಡಿಕ್ಕಲ್ ಅವರು ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡಿ ಒಳ್ಳೆಯ ಪ್ರದರ್ಶನ ನೀಡಿದರು. ಗಾಯ ಆದ ಕಾರಣ ಅವರು ಸೀಸನ್​ನಿಂದ ದೂರವೇ ಇರಬೇಕಾಗಿ ಬಂತು. ಈಗ ಅವರು ‘ಮಹಾರಾಜ ಟ್ರೋಫಿ ಟಿ20’ ಆಡಲು ರೆಡಿ ಆಗಿದ್ದಾರೆ. ಯುವ ಆಟಗಾರರ ಮೇಲೆ ತಂಡಗಳು ದೊಡ್ಡ ಮೊತ್ತವನ್ನು ಸುರಿಯತ್ತಿವೆ. ದೇವದತ್​ಗೆ (Devadat Padikkal) ಈ ಬಾರಿ ಜಾಕ್​ಪಾಟ್ ಹೊಡೆದಿದೆ.

ಕಳೆದ ವರ್ಷ ರಾಜಸ್ಥಾನ್ ರಾಯಲ್ಸ್ ಪರ ದೇವದತ್ ಆಡಿದ್ದರು. ತಂಡದಿಂದ ಅವರನ್ನು ಬಿಟ್ಟ ಬಳಿಕ ಆರ್​ಸಿಬಿ ತಂಡ ಪಿಕ್ ಮಾಡಿತು. ಅಲ್ಲಿ ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಇದು ಮಹರಾಜ ಟ್ರೋಫಿ ಆಕ್ಷನ್​ಗೆ ಸಹಕಾರಿ ಆಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯಲ್ಲಿ ಮಹರಾಜ ಟ್ರೋಫಿಗೆ ಜುಲೈ 15ರಂದು ಹರಾಜು ಪ್ರಕ್ರಿಯೆ ನಡೆದಿದೆ. ದೇವದತ್ ಅವರು ಅತಿ ಹೆಚ್ಚು ಬೆಲೆಗೆ ಮಾರಾಟ ಆದ ಆಟಗಾರ ಎನಿಸಿಕೊಂಡಿದ್ದಾರೆ.

ಆರ್​ಸಿಬಿ ದೇವದತ್ ಅವರನ್ನು 3.20 ಕೋಟಿ ರೂಪಾಯಿಗೆ ಖರೀದಿ ಮಾಡಿತ್ತು. ಈಗ ‘ಹುಬ್ಬಳ್ಳಿ ಟೈಗರ್ಸ್’ 13.20 ಲಕ್ಷ ರೂಪಾಯಿಗೆ ಪಡಿಕ್ಕಲ್​ನ ಖರೀದಿಸಿದೆ. ಇಡೀ ಮಹರಾಜ ಟ್ರೋಫಿ ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ಮಾರಾಟ ಆದ ಆಟಗಾರ ಎನಿಸಿಕೊಂಡಿದ್ದಾರೆ. ಕನ್ನಡಿಗ ಮನೀಶ್ ಪಾಂಡೆಯನ್ನು ‘ಮೈಸೂರು ವಾರಿಯರ್ಸ್’ ತಂಡ 12.20 ಲಕ್ಷ ರೂಪಾಯಿಗೆ ಖರೀದಿಸಿದೆ.  ಸನ್ ರೈಸರ್ಸ್ ಹೈದರಾಬಾದ್​ನ ಅಭಿನವ್ ಮನೋಹರ್​ನ ಹುಬ್ಬಳ್ಳಿ ಟೈಗರ್ಸ್ 12.20 ಲಕ್ಷ ರೂಪಾಯಿ ಕೊಟ್ಟು ಪಡೆದುಕೊಂಡಿದೆ. ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್​ನ ‘ಮಂಗಳೂರು ಡ್ರ್ಯಾಗನ್ಸ್’ 8.60 ಲಕ್ಷ ರೂಪಾಯಿಗೆ ಪಡೆದುಕೊಂಡಿದೆ.

ಇದನ್ನೂ ಓದಿ: IPL 2025: ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿದ ದೇವದತ್ ಪಡಿಕ್ಕಲ್

ಮಹಾರಾಜ ಟ್ರೋಫಿಯಲ್ಲಿ ಪ್ರತಿ ಫ್ರಾಂಚೈಸಿಯವರು ಎರಡು ಸ್ಥಳೀಯ ಆಟಗಾರರನ್ನು ಇಟ್ಟುಕೊಳ್ಳಲೇಬೇಕು ಎಂಬ ನಿಯಮ ಇದೆ. ಅಂದರೆ ಹುಬ್ಬಳಿ ತಂಡದಲ್ಲಿ ಹುಬ್ಬಳಿ ಮೂಲದ ಇಬ್ಬರು ಆಟಗಾರರು ಇರಲೇಬೇಕು. ಸ್ಥಳೀಯ ಆಟಗಾರರಿಗೆ ಅವಕಾಶ ನೀಡಬೇಕು ಎಂಬ ಕಾರಣದಿಂದ ಈ ನಿಯಮ ತರಲಾಗಿದೆ. ಮುಚ್ಚಿದ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿವೆ. ಅಂದರೆ ಯಾವುದೇ ಅಭಿಮಾನಿಗಳಿಗೆ ಮೈದಾನದಲ್ಲಿ ವೀಕ್ಷಣೆಗೆ ಅವಕಾಶ ಇರೋದಿಲ್ಲ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:56 am, Wed, 16 July 25

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ