AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಸ್‌ಕೆ ಹೆಡ್ ಕೋಚ್ ಆಯ್ಕೆ: ಧೋನಿ ಜೊತೆ ಶೀಘ್ರದಲ್ಲೇ ಸಭೆ

ಐಪಿಎಲ್ 2027 ರ ಹೊಸ್ತಿಲಿನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪಾಳಯದಲ್ಲಿ ಸಂಚಲನ ಮೂಡಿಸುವಂತಹ ಬೆಳವಣಿಗೆಗಳು ಜರುಗುತ್ತಿವೆ. ಸಿಎಸ್‌ಕೆ ಯಶಸ್ಸಿನ ಹಿಂದಿನ ಪ್ರಮುಖ ಶಕ್ತಿಯಾಗಿದ್ದ ಹೆಡ್ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರ ನಿರ್ಗಮನದ ಬಳಿಕ, ಹೊಸ ತರಬೇತುದಾರನ ಪಟ್ಟ ಯಾರಿಗೆ ಸಿಗಲಿದೆ ಎಂಬ ಕುತೂಹಲ ಇಡೀ ಕ್ರಿಕೆಟ್ ಲೋಕವನ್ನು ಆವರಿಸಿದೆ.

ಸಿಎಸ್‌ಕೆ ಹೆಡ್ ಕೋಚ್ ಆಯ್ಕೆ: ಧೋನಿ ಜೊತೆ ಶೀಘ್ರದಲ್ಲೇ ಸಭೆ
ಎಂಎಸ್ ಧೋನಿImage Credit source: IPL
ಝಾಹಿರ್ ಯೂಸುಫ್
|

Updated on: Sep 13, 2026 | 2:01 PM

Share

ಐಪಿಎಲ್ 2027 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್  ಫ್ರಾಂಚೈಸಿಯಲ್ಲಿ ಮಹತ್ವದ ಬದಲಾವಣೆ ಕಂಡು ಬರಲಿದೆ. ಇದರ ಭಾಗವಾಗಿ ಈಗಾಗಲೇ ತಂಡದ ದೀರ್ಘಕಾಲದ ಮುಖ್ಯ ಕೋಚ್ ಸ್ಟೀಫನ್ ಫ್ಲೆಮಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ನಿರ್ಗಮನದ ನಂತರ, ತಂಡದ ಮುಂದಿನ ಹೆಡ್ ಕೋಚ್ ಯಾರಾಗಲಿದ್ದಾರೆ ಎಂಬ ಕುತೂಹಲ ಕ್ರಿಕೆಟ್ ವಲಯದಲ್ಲಿ ತೀವ್ರಗೊಂಡಿದ್ದು, ಇದಕ್ಕೆ ಶೀಘ್ರದಲ್ಲೇ ಉತ್ತರ ದೊರೆಯುವ ಸಾಧ್ಯತೆಯಿದೆ. ಏಕೆಂದರೆ ಪ್ರಸ್ತುತ ಅಮೆರಿಕದಲ್ಲಿರುವ ಮಹೇಂದ್ರ ಸಿಂಗ್ ಧೋನಿ ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದು, ತವರಿಗೆ ಆಗಮಿಸಿದ ಬೆನ್ನಲ್ಲೇ ಸಿಎಸ್‌ಕೆ ಮ್ಯಾನೇಜ್‌ಮೆಂಟ್ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ವಿದೇಶಿ ಕೋಚ್ ಮೇಲೆ ಕಣ್ಣಿಟ್ಟ ಸಿಎಸ್‌ಕೆ!

ಸಿಎಸ್‌ಕೆ ಆಡಳಿತ ಮಂಡಳಿಯು ಈಗಾಗಲೇ ಒಬ್ಬ ಪ್ರಮುಖ ವಿದೇಶಿ ಕೋಚ್ ಅಭ್ಯರ್ಥಿಯನ್ನು ಶಾರ್ಟ್‌ಲಿಸ್ಟ್ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಟ್ವಿಸ್ಟ್ ಏನೆಂದರೆ ಈ ವಿದೇಶಿ ಅಭ್ಯರ್ಥಿಯು ಸಿಎಸ್‌ಕೆ ಮಾತ್ರವಲ್ಲದೆ ಮತ್ತೊಂದು ಐಪಿಎಲ್ ಫ್ರಾಂಚೈಸಿ ಜೊತೆಯೂ ಮಾತುಕತೆಯಲ್ಲಿದ್ದಾರೆ. ಹೀಗಾಗಿ, ಈ ಹೈ-ಪ್ರೊಫೈಲ್ ಕೋಚ್ ಅನ್ನು ತನ್ನದಾಗಿಸಿಕೊಳ್ಳಲು ಸಿಎಸ್‌ಕೆ ತೆರೆಮರೆಯ ಕಸರತ್ತು ನಡೆಸುತ್ತಿದೆ.

ಧೋನಿ ಒಲವು ದೇಶಿ ಕೋಚ್ ಕಡೆಗೆ!

ಮ್ಯಾನೇಜ್‌ಮೆಂಟ್ ವಿದೇಶಿ ತರಬೇತುದಾರರ ಕಡೆ ಒಲವು ತೋರುತ್ತಿದ್ದರೆ, ಮಾಜಿ ನಾಯಕ ಎಂ.ಎಸ್. ಧೋನಿ ಅವರು ಭಾರತೀಯ ಕೋಚಿಂಗ್ ಸ್ಟಾಫ್ ಹೊಂದಲು ಆಸಕ್ತಿ ತೋರಿಸಿದ್ದಾರೆ ಎನ್ನಲಾಗಿದೆ. ಧೋನಿಯವರ ಈ ಯೋಚನೆಗೆ ಪೂರಕವಾಗಿ ಮಾಜಿ ಭಾರತೀಯ ಬ್ಯಾಟ್ಸ್‌ಮನ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾಜಿ ಕೋಚ್ ಹೇಮಂಗ್ ಬದಾನಿ ಅವರ ಹೆಸರು ಮುಂಚೂಣಿಗೆ ಬಂದಿದೆ. ಧೋನಿ ಭಾಗವಹಿಸಲಿರುವ ಮುಂಬರುವ ಸಭೆಯಲ್ಲಿ ದೇಶಿ ವರ್ಸಸ್ ವಿದೇಶಿ ಕೋಚ್ ಆಯ್ಕೆಯ ಗೊಂದಲಕ್ಕೆ ಅಂತಿಮ ತೆರೆ ಬೀಳಲಿದೆ.

ಹರಾಜು ಮತ್ತು ರಿಟೆನ್ಷನ್ ತಂತ್ರಗಳು:

ಸೆಪ್ಟೆಂಬರ್ 22ರ ಸುಮಾರಿಗೆ ನಡೆಯಲಿರುವ ಈ ಹೈ-ವೋಲ್ಟೇಜ್ ಮೀಟಿಂಗ್‌ನಲ್ಲಿ ಕೇವಲ ಕೋಚ್ ಆಯ್ಕೆ ಮಾತ್ರವಲ್ಲದೆ, ಮುಂಬರುವ ಐಪಿಎಲ್ ಮೆಗಾ ಹರಾಜಿನ ಬಗ್ಗೆಯೂ ಚರ್ಚೆಯಾಗಲಿದೆ. ತಂಡದಲ್ಲಿ ಯಾವ ಆಟಗಾರರನ್ನು ಉಳಿಸಿಕೊಳ್ಳಬೇಕು ಮತ್ತು ಹರಾಜಿನಲ್ಲಿ ಯಾರನ್ನು ಗುರಿಯಾಗಿಸಬೇಕು ಎಂಬುದರ ಸಂಪೂರ್ಣ ಬ್ಲೂಪ್ರಿಂಟ್ ಅನ್ನು ಧೋನಿ ಮತ್ತು ಮ್ಯಾನೇಜ್‌ಮೆಂಟ್ ಸಿದ್ಧಪಡಿಸಲಿದೆ.

ಇದನ್ನೂ ಓದಿ: ದಾದಾ, ಯುವಿ, ವಾಸ್… ಡೆಲ್ಲಿ ಕ್ಯಾಪಿಟಲ್ಸ್ ಹೊಸ ‘ಮಾಸ್ಟರ್ ಮೈಂಡ್ಸ್’

ಒಟ್ಟಾರೆಯಾಗಿ ಹೇಳುವುದಾದರೆ, ಐಪಿಎಲ್ 2027ರ ಸೀಸನ್‌ಗೂ ಮುನ್ನ ಚೆನ್ನೈ ಸೂಪರ್ ಕಿಂಗ್ಸ್ ಪಾಳಯದಲ್ಲಿ ದೊಡ್ಡ ಮಟ್ಟದ ಮರುಸಂಘಟನೆ ನಡೆಯುತ್ತಿರುವುದು ಸ್ಪಷ್ಟವಾಗಿದೆ. ಹೊಸ ಹೆಡ್ ಕೋಚ್ ಆಯ್ಕೆ ಮತ್ತು ಮಿನಿ ಹರಾಜಿನ ತಂತ್ರಗಳು ಸಿಎಸ್‌ಕೆ ತಂಡದ ಭವಿಷ್ಯದ ದಾರಿಯನ್ನು ನಿರ್ಧರಿಸಲಿವೆ. ಸೆಪ್ಟೆಂಬರ್ 22ರಂದು ನಡೆಯಲಿರುವ ಎಂ.ಎಸ್. ಧೋನಿ ಹಾಗೂ ಮ್ಯಾನೇಜ್‌ಮೆಂಟ್ ನಡುವಿನ ಸಭೆಯು ಈ ಎಲ್ಲಾ ಕುತೂಹಲಗಳಿಗೆ ಅಧಿಕೃತ ತೆರೆ ಎಳೆಯಲಿದ್ದು, ‘ಯಲ್ಲೋ ಆರ್ಮಿ’ಯ ಮುಂದಿನ ನಡೆ ಏನೆಂಬುದನ್ನು ಕಾದು ನೋಡಬೇಕಿದೆ.

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ