AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SL: ಶ್ರೀಲಂಕಾದಲ್ಲಿ ಐತಿಹಾಸಿದ ಶತಕ ಬಾರಿಸಿದ ಧ್ರುವ್ ಜುರೇಲ್

Dhruv Jurel Century: ಕೊಲಂಬೊ ಟೆಸ್ಟ್‌ನಲ್ಲಿ ಟೀಂ ಇಂಡಿಯಾದಿಂದ ಎರಡು ಭರ್ಜರಿ ಶತಕಗಳು ಸಿಡಿದಿವೆ. ಮೊದಲ ದಿನ ಕನ್ನಡಿಗ ದೇವದತ್ ಪಡಿಕ್ಕಲ್ ತಮ್ಮ ಎರಡನೇ ಟೆಸ್ಟ್ ಶತಕ ಬಾರಿಸಿದರೆ, ಎರಡನೇ ದಿನ ಧ್ರುವ್ ಜುರೇಲ್ ತಮ್ಮ ಚೊಚ್ಚಲ ಲಂಕಾ ನೆಲದ ಟೆಸ್ಟ್ ಶತಕ ದಾಖಲಿಸಿದ್ದಾರೆ. ಜುರೇಲ್ ಪಂತ್ ಜೊತೆ ಶತಕದ ಜೊತೆಯಾಟವಾಡಿ, ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 480 ರನ್ ದಾಟಲು ನೆರವಾದರು.

IND vs SL: ಶ್ರೀಲಂಕಾದಲ್ಲಿ ಐತಿಹಾಸಿದ ಶತಕ ಬಾರಿಸಿದ ಧ್ರುವ್ ಜುರೇಲ್
Dhruv Jurel
ಪೃಥ್ವಿಶಂಕರ
|

Updated on:Aug 24, 2026 | 4:49 PM

Share

ಕೊಲಂಬೊ ಟೆಸ್ಟ್​ನಲ್ಲಿ ಟೀಂ ಇಂಡಿಯಾದಿಂದ ಎರಡನೇ ಶತಕ ಸಿಡಿದಿದೆ. ಈ ಟೆಸ್ಟ್ ಪಂದ್ಯದ ಮೊದಲ ದಿನದಂದು ಕನ್ನಡಿಗ ದೇವದತ್ ಪಡಿಕ್ಕಲ್ ತಮ್ಮ ಟೆಸ್ಟ್ ವೃತ್ತಿಜೀವನದ ಎರಡನೇ ಶತಕ ಬಾರಿಸಿದರೆ, ಇದೀಗ ಎರಡನೇ ದಿನದಂದು ಧ್ರುವ್ ಜುರೇಲ್ ಕೂಡ ತಮ್ಮ ಟೆಸ್ಟ್ ವೃತ್ತಿಜೀವನದ ಎರಡನೇ ಶತಕ ಬಾರಿಸಿ ಮಿಂಚಿದ್ದಾರೆ. ಜುರೇಲ್ ಅವರ ಈ ಶತಕದ ನೆರವಿನಿಂದ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್​ನಲ್ಲಿ 480 ರನ್​ಗಳ ಗಡಿ ದಾಟಿದೆ. ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್​ನಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ಜುರೇಲ್, ಇದೀಗ ಎರಡನೇ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಲಂಕಾ ನೆಲದಲ್ಲಿ ತಮ್ಮ ಚೊಚ್ಚಲ ಟೆಸ್ಟ್ ಶತಕವನ್ನು ದಾಖಲಿಸಿದ್ದಾರೆ. ಶತಕದ ಇನ್ನಿಂಗ್ಸ್ ಆಡುವ ಜೊತೆಗೆ ಜುರೇಲ್, ಪಂತ್ ಅವರೊಂದಿಗೆ ಶತಕದ ಜೊತೆಯಾಟವನ್ನು ಕಟ್ಟುವ ಮೂಲಕ ತಂಡ ಬೃಹತ್ ಮೊತ್ತ ಕಲೆಹಾಕಲು ನೆರವಾಗಿದ್ದಾರೆ.

ಜುರೆಲ್ ಅವರ ಶತಕ ಐತಿಹಾಸಿಕವಾಗಿದ್ದು, ಶ್ರೀಲಂಕಾ ನೆಲದಲ್ಲಿ ಭಾರತೀಯ ವಿಕೆಟ್‌ಕೀಪರ್‌ನಿಂದ ಬಂದ ಮೊದಲ ಟೆಸ್ಟ್ ಶತಕ ಇದಾಗಿದೆ. ಈ ಮೊದಲು 2010 ರಲ್ಲಿ ಶ್ರೀಲಂಕಾದಲ್ಲಿ ಧೋನಿ ಬಾರಿಸಿದ್ದ 76 ರನ್​ಗಳು ಭಾರತದ ವಿಕೆಟ್ ಕೀಪರ್ ಲಂಕಾ ನೆಲದಲ್ಲಿ ಕಲೆಹಾಕಿದ್ದ ಅತ್ಯಧಿಕ ಮೊತ್ತವಾಗಿತ್ತು. ಅಲ್ಲದೆ ಶ್ರೀಲಂಕಾದಲ್ಲಿ ಭಾರತೀಯ ಆಟಗಾರನೊಬ್ಬ ಏಳನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡಿ ಶತಕ ಬಾರಿಸಿದ ದಾಖಲೆ ಕೂಡ ಧ್ರುವ್ ಜುರೆಲ್ ಲಾಲಾಗಿದೆ.

Published On - 4:41 pm, Mon, 24 August 26

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ