AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hardik Pandya: ಹಾರ್ದಿಕ್ ಪಾಂಡ್ಯ ಸಿಕ್ಸ್ ಸಿಡಿಸಿ ಗೆಲುವು ತಂದುಕೊಟ್ಟಾಗ ದಿನೇಶ್ ಕಾರ್ತಿಕ್ ಏನು ಮಾಡಿದ್ರು ನೋಡಿ

IND vs PAK, Asia Cup 2022: ಏಷ್ಯಾಕಪ್​ನ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಪಾಂಡ್ಯ ಸಿಕ್ಸ್ ಸಿಡಿಸಿ ಜಯ ತಂದುಕೊಡುತ್ತಿದ್ದಂತೆ ನಾನ್ ಸ್ಟ್ರೈಕರ್​ನಲ್ಲಿದ್ದ ದಿನೇಶ್ ಕಾರ್ತಿಕ್ ಏನು ಮಾಡಿದರು ನೋಡಿ.

Hardik Pandya: ಹಾರ್ದಿಕ್ ಪಾಂಡ್ಯ ಸಿಕ್ಸ್ ಸಿಡಿಸಿ ಗೆಲುವು ತಂದುಕೊಟ್ಟಾಗ ದಿನೇಶ್ ಕಾರ್ತಿಕ್ ಏನು ಮಾಡಿದ್ರು ನೋಡಿ
Hardik and Dinesh Karthik IND vs PAK
TV9 Web
| Edited By: |

Updated on: Aug 29, 2022 | 8:32 AM

Share

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾನುವಾರ ರಾತ್ರಿ ನಡೆದ ಏಷ್ಯಾಕಪ್​ನ ದ್ವಿತೀಯ ಪಂದ್ಯ ಅಂದುಕೊಂಡಂತೆ ರಣರೋಚಕವಾಗಿತ್ತು. ಭಾರತಪಾಕಿಸ್ತಾನ (India vs Pakistan) ಬದ್ದವೈರಿಗಳ ನಡುವಣ ಕಾದಾಟ ಕೊನೆಯ ಓವರ್​ಗೆ ವರೆಗೂ ತುದಿಗಾಲಿನಲ್ಲಿ ನಿಲ್ಲಿಸಿತ್ತು. ಕಠಿಣ ಟಾರ್ಗೆಟ್ ಇರದಿದ್ದರೂ ಅಭಿಮಾನಿಗಳನ್ನ ಈ ಪಂದ್ಯ ಹಿಡಿದುಕೂರಿಸಿತ್ತು. ಕೊನೆಯ ಓವರ್​ನಲ್ಲಿ ಭಾರತ ಗೆಲ್ಲಲು 7 ರನ್​ಗಳ ಅವಶ್ಯಕತೆ ಇದ್ದಾಗ ರವೀಂದ್ರ ಜಡೇಜಾ (Ravindra Jadeja) ವಿಕೆಟ್ ಕಳೆದುಕೊಂಡ ಕ್ಷಣವಂತು ಪಂದ್ಯದ ಕಿಚ್ಚು ಹೆಚ್ಚಿಸಿತು. ಅಂತಿಮವಾಗಿ ಹಾರ್ದಿಕ್ ಪಾಂಡ್ಯ (Hardik Pandya) ರೋಚಕ ಸಿಕ್ಸರ್ ಸಿಡಿಸಿ ಟೀಮ್ ಇಂಡಿಯಾ 5 ವಿಕೆಟ್​ಗಳ ಗೆಲುವು ಸಾಧಿಸುವಂತೆ ಮಾಡಿದರು. ಪಾಂಡ್ಯ ಸಿಕ್ಸ್ ಸಿಡಿಸಿ ಜಯ ತಂದುಕೊಡುತ್ತಿದ್ದಂತೆ ನಾನ್ ಸ್ಟ್ರೈಕರ್​ನಲ್ಲಿದ್ದ ದಿನೇಶ್ ಕಾರ್ತಿಕ್ ಏನು ಮಾಡಿದರು ನೋಡಿ.

ಮೊಹಮ್ಮದ್ ಜವಾಜ್ ಅವರ 20ನೇ ಓವರ್​ನ 4ನೇ ಎಸೆತದ ಕ್ವಿಕ್ ಶಾರ್ಟ್ ಬಾಲ್ ಅನ್ನು ಚೆನ್ನಾಗಿ ಅರಿತ ಪಾಂಡ್ಯ ಲಾಂಗ್​ಆನ್​ನಲ್ಲಿ ಫ್ಲಾಟ್ ಸಿಕ್ಸ್ ಸಿಡಿಸಿದರು. ಭಾರತದ ಡ್ರೆಸ್ಸಿಂಗ್ ರೂಮ್ ಅಂತು ಸಂತಸದ ಅಲೆಯಲ್ಲಿ ತೇಲಿತು. ಆಟಗಾರರು ಕುಣಿದುಕುಪ್ಪಳಿಸಿದರು. ಇತ್ತ ಪಾಂಡ್ಯ ಅವರ ಪ್ರದರ್ಶನ ಕಂಡು ಸಿಕ್ಸ್ ಸಿಡಿಸುತ್ತಿದ್ದಂತೆ ನಾನ್ ಸ್ಟ್ರೈಕರ್​ನಲ್ಲಿದ್ದ ದಿನೇಶ್ ಕಾರ್ತಿಕ್ ಅವರ ಬಳಿ ತೆರಳಿ ತಲೆಬಾಗಿ ನಮಸ್ಕರಿಸಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇಲ್ಲಿದೆ ನೋಡಿ ಆ ವಿಡಿಯೋ.

ಇದನ್ನೂ ಓದಿ
Image
IND vs PAK: ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದ ಕೊನೆಯ ಓವರ್​ ಹೇಗಿತ್ತು?: ವಿಡಿಯೋ
Image
IND vs PAK: ಫಾಸ್ಟ್ ಬೌಲರ್ಸ್​ ಪರಾಕ್ರಮ; ಪಾಕ್ ವಿರುದ್ಧ ಐತಿಹಾಸಿಕ ದಾಖಲೆ ಬರೆದ ಟೀಂ ಇಂಡಿಯಾ ವೇಗಿಗಳು..!
Image
India vs Pakistan: ಏಷ್ಯಾಕಪ್​ನಲ್ಲಿ ಹೊಸ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ
Image
Virat Kohli: ಪಾಕ್ ಜೆರ್ಸಿಯಲ್ಲಿ ಕೊಹ್ಲಿ ಮಿಂಚಿಂಗ್…!

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಆರಂಭದಲ್ಲೇ ಮುಖ್ಯ ವಿಕೆಟ್ ಕಳೆದುಕೊಂಡಿತು. ನಾಯಕ ಬಾಬರ್ ಅಜಮ್ 10 ರನ್ ಗಳಿಸಿದ್ದಾಗ ಭುವನೇಶ್ವರ್​ಗೆ ವಿಕೆಟ್ ಒಪ್ಪಿಸಿದರು. ಫಖರ್ ಜಮಾನ್ ಕೂಡ 10 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು.

ಈ ಸಂದರ್ಭ ರಿಜ್ವಾನ್ ಮತ್ತು ಇಫ್ತಿಕಾರ್ ನಡುವೆ 45 ರನ್​ಗಳ ಜೊತೆಯಾಟ ನಡೆಯಿತು. ಆದರೆ 28 ರನ್ ಗಳಿಸಿದ್ದ ಇಫ್ತಿಕರ್,43 ರನ್ ಗಳಿಸಿದ್ದ ರಿಜ್ವಾನ್ ಔಟಾಗಿದ್ದು ತಂಡಕ್ಕೆ ಹಿನ್ನಡೆಯಾಯಿತು. ಅಂತಿಮವಾಗಿ ಪಾಕಿಸ್ತಾನ 19.5 ಓವರುಗಳಲ್ಲಿ 147 ರನ್ ಗಳಿಗೆ ಆಲೌಟ್ ಆಯಿತು. ಭಾರತ ಪರ ಭುವನೇಶ್ವರ್ 4 ವಿಕೆಟ್ ಪಡೆದರೆ, ಹಾರ್ದಿಕ್ 3 ವಿಕೆಟ್ ಕಿತ್ತು ಮಿಂಚಿದರು.

ಸಾಧಾರಣ ಟಾರ್ಗೆಟ್ ಬೆನ್ನಟ್ಟಿದ ಭಾರತ ಮೊದಲ ಓವರ್​ನಲ್ಲೇ ಕೆಎಲ್ ರಾಹುಲ್ ವಿಕೆಟ್ ಕಳೆದುಕೊಂಡಿತು. ರೋಹಿತ್ ಶರ್ಮಾ ಆಟ 12 ರನ್​ಗೆ ಅಂತ್ಯವಾಯಿತು. 100ನೇ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ ವಿರಾಟ್ ಕೊಹ್ಲಿ ದೊಡ್ಡ ಮೊತ್ತದ ಸೂಚನೆ ನೀಡಿದರು. ಆದರೆ 35 ರನ್ ಬಾರಿಸಿದ್ದಾಗ ಔಟಾದರು. ಸೂರ್ಯಕುಮಾರ್ 18 ರನ್ ಗಳಿಗೆ ಆಟ ಮುಗಿಸಿದರು.

ಜಡೇಜಾಹಾರ್ದಿಕ್ ಪಾಂಡ್ಯ 29 ಎಸೆತಗಳಲ್ಲಿ 52 ರನ್ ಗಳ ಜೊತೆಯಾಟ ನೀಡಿ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿದರು. ಪಾಂಡ್ಯ ಕೇವಲ 17 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಿಡಿಸಿ ಅಜೇಯ 33 ರನ್ ಬಾರಿಸಿದರೆ, ಜಡೇಜಾ 35 ರನ್ ಗಳಿಸಿದರು. ಭಾರತ 19.4 ಓವರ್​ನಲ್ಲಿ 5 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಈ ಅಮೋಘ ಪ್ರದರ್ಶನಕ್ಕಾಗಿ ಪಾಂಡ್ಯ ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಬಾಚಿಕೊಂಡರು.

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ