Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

Team India: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೈದಾನಕ್ಕಿಳಿದ ತಕ್ಷಣ ದಿನೇಶ್ ಕಾರ್ತಿಕ್, ಲಾಲಾ ಅಮರನಾಥ್ ಹಾಗೂ ದಿಲೀಪ್ ವೆಂಗ್​ಸರ್ಕಾರ್ ಅವರಿರುವ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್
dinesh karthikImage Credit source: sportzpic
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jun 11, 2022 | 3:06 PM

ಐಪಿಎಲ್​ನಲ್ಲಿ ಆರ್​ಸಿಬಿ ಪರ ಅಬ್ಬರಿಸುವ ಮೂಲಕ ಮೂರು ವರ್ಷಗಳ ಟೀಮ್ ಇಂಡಿಯಾಗೆ (Team India) ಕಂಬ್ಯಾಕ್ ಮಾಡಿದ ದಿನೇಶ್ ಕಾರ್ತಿಕ್ (Dinesh Karthik) ಇದೀಗ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. 2006 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಮೊದಲ ಟಿ20 ಪಂದ್ಯವಾಡಿದ್ದ ಡಿಕೆ, 3 ವರ್ಷಗಳ ಬಳಿಕ ಕಂಬ್ಯಾಕ್ ಮಾಡಿದ್ದು ಕೂಡ ತಂಡದ ವಿರುದ್ದ ಎಂಬುದು ವಿಶೇಷ. ಈ ಮೂಲಕ ಟೀಮ್ ಇಂಡಿಯಾ ಪರ 15 ವರ್ಷಗಳ ಕಾಲ ಆಡಿದ ಆಟಗಾರರ ಪಟ್ಟಿಗೆ ದಿನೇಶ್ ಕಾರ್ತಿಕ್ ಕೂಡ ಸೇರ್ಪಡೆಯಾಗಿದ್ದಾರೆ. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 15 ವರ್ಷ ಪೂರೈಸಿದ ಮೊದಲ ಆಟಗಾರ ಎಂಬ ದಾಖಲೆ ಇದೀಗ ದಿನೇಶ್ ಕಾರ್ತಿಕ್ ಪಾಲಾಗಿದೆ.

2006 ರಿಂದ ಶುರುವಾದ ದಿನೇಶ್ ಕಾರ್ತಿಕ್ ಅವರ ಟಿ20 ಕ್ರಿಕೆಟ್ ಕೆರಿಯರ್​ ಇದೀಗ 2022 ಕ್ಕೆ ಬಂದು ನಿಂತಿದೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 15 ವರ್ಷಗಳನ್ನು ಪೂರೈಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಡಿಕೆ ಪಾತ್ರರಾಗಿದ್ದಾರೆ. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ‘ಮ್ಯಾನ್ ಆಫ್ ದಿ ಮ್ಯಾಚ್’ ಪಡೆದ ಮೊದಲ ಆಟಗಾರ ಎಂಬ ದಾಖಲೆಯನ್ನೂ ಹೊಂದಿದ್ದಾರೆ. ಇದರ ಜೊತೆ ಇದೀಗ 15 ವರ್ಷ ಚುಟುಕು ಕ್ರಿಕೆಟ್​ ಆಡಿದ ವಿಶೇಷ ದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ.

ತಮ್ಮ 15 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ದಿನೇಶ್ ಕಾರ್ತಿಕ್ ಕೇವಲ 33 ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ 33 ಪಂದ್ಯಗಳ 17 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ಮೂಲಕ 33.33 ಸರಾಸರಿಯೊಂದಿಗೆ ಒಟ್ಟು 400 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಟಿ20 ಯಲ್ಲಿ ಡಿಕೆ 15 ವರ್ಷಗಳನ್ನು ಪೂರೈಸಿದರೂ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಹಾಗೆಯೇ 27 ಇನಿಂಗ್ಸ್​ಗಳಲ್ಲಿ 15 ಬಾರಿ ನಾಟೌಟ್ ಆಗಿ ಉಳಿದಿದ್ದರು. ಅಲ್ಲದೆ ಈ ಇನಿಂಗ್ಸ್​ಗಳಲ್ಲಿ 42 ಫೋರ್ ಹಾಗೂ 15 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಇದೀಗ ಐಪಿಎಲ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಹೊಸ ಫಿನಿಶರ್ ರೂಪದಲ್ಲಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿರುವ 37 ವರ್ಷದ ದಿನೇಶ್ ಕಾರ್ತಿಕ್ ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ. ಒಂದು ವೇಳೆ ಈ ಸರಣಿಯಲ್ಲಿ ಡಿಕೆ ಅದ್ಭುತ ಪ್ರದರ್ಶನ ನೀಡಿದರೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗುವುದು ಖಚಿತ ಎನ್ನಬಹುದು.

ದಿಗ್ಗಜರ ಕ್ಲಬ್​ಗೆ ಡಿಕೆ ಎಂಟ್ರಿ: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೈದಾನಕ್ಕಿಳಿದ ತಕ್ಷಣ ದಿನೇಶ್ ಕಾರ್ತಿಕ್, ಲಾಲಾ ಅಮರನಾಥ್ ಹಾಗೂ ದಿಲೀಪ್ ವೆಂಗ್​ಸರ್ಕಾರ್ ಅವರಿರುವ ಲೆಜೆಂಡ್ಸ್ ಕ್ಲಬ್​ನಲ್ಲಿ ಸ್ಥಾನ ಪಡೆದರು. ಲಾಲಾ ಅಮರನಾಥ್ 1948 ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 15 ವರ್ಷಗಳನ್ನು ಪೂರೈಸಿದ ಮೊದಲ ಭಾರತೀಯರಾಗಿದ್ದರು. ಇದರ ನಂತರ, ದಿಲೀಪ್ ವೆಂಗ್​ಸರ್ಕಾರ್ ಏಕದಿನ ಕ್ರಿಕೆಟ್‌ನಲ್ಲಿ 15 ವರ್ಷಗಳನ್ನು ಪೂರೈಸಿದ ಮೊದಲ ಭಾರತೀಯರಾಗಿ ದಾಖಲೆ ಬರೆದಿದ್ದರು. ಇದೀಗ ದಿನೇಶ್ ಕಾರ್ತಿಕ್ ಟಿ20 ನಲ್ಲಿ 15 ವರ್ಷಗಳನ್ನು ಪೂರೈಸಿದ ಮೊದಲ ಆಟಗಾರರಾಗಿ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!