AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ದಿನೇಶ್ ಕಾರ್ತಿಕ್ ಆಡಿದ ಮಾತುಗಳೇನು ಕೇಳಿ

India vs West Indies T20I: ದಿನೇಶ್ ಕಾರ್ತಿಕ್ ಕೇವಲ 19 ಎಸೆತಗಳಲ್ಲಿ 41 ರನ್ ಸಿಡಿಸಿದರು. ಇವರ ಈ ಅದ್ಭುತ ಪ್ರದರ್ಶನಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಜಿಕೊಂಡರು. ಈ ಸಂದರ್ಭ ಮಾತನಾಡಿದ ಕಾರ್ತಿಕ್ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

Dinesh Karthik: ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸುವ ವೇಳೆ ದಿನೇಶ್ ಕಾರ್ತಿಕ್ ಆಡಿದ ಮಾತುಗಳೇನು ಕೇಳಿ
Dinesh Karthik post-match presentation
TV9 Web
| Updated By: Vinay Bhat|

Updated on:Jul 30, 2022 | 10:24 AM

Share

ಟೀಮ್ ಇಂಡಿಯಾ ವಿಕೆಟ್ ಕೀಪರ್ಬ್ಯಾಟರ್ ದಿನೇಶ್ ಕಾರ್ತಿಕ್ (Dinesh Karthik) ಟಿ20 ಕ್ರಿಕೆಟ್​ನಲ್ಲಿ ತಾನೊಬ್ಬ ಅತ್ಯುತ್ತಮ ಫಿನಿಶರ್ ಎಂಬುದನ್ನು ಮತ್ತೊಮ್ಮೆ ಸಾಭೀತು ಪಡಿಸಿದ್ದಾರೆ. ಐಪಿಎಲ್ 2022 ರಲ್ಲಿ ಅಮೋಘ ಪ್ರದರ್ಶನ ನೀಡಿ ಭಾರತ ಕ್ರಿಕೆಟ್ ತಂಡದಲ್ಲಿ ಎರಡನೇ ಇನ್ನಿಂಗ್ಸ್​ ಆರಂಭಿಸಿರುವ ಕಾರ್ತಿಕ್ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಶುಕ್ರವಾರ ರಾತ್ರಿ ನಡೆದ ವೆಸ್ಟ್ ಇಂಡೀಸ್ (India vs West Indies) ವಿರುದ್ಧದ ಮೊದಲ ಟಿ20 ಪಂದ್ಯದಲ್ಲೂ ಕಾರ್ತಿಕ್ ತಮ್ಮ ಮೇಲಿಟ್ಟ ನಂಬಿಕೆಯನ್ನು ಉಳಿಸಿಕೊಂಡು ಕೇವಲ 19 ಎಸೆತಗಳಲ್ಲಿ 41 ರನ್ ಸಿಡಿಸಿದರು. ಇವರ ಈ ಸ್ಫೋಟಕ ಬ್ಯಾಟಿಂಗ್ ನೆರವಿನಿಂದಲೇ ಟೀಮ್ ಇಂಡಿಯಾ (Team India) ಮೊತ್ತ 20 ಓವರ್​ನಲ್ಲಿ 190 ಕ್ಕೆ ಬಂದುನಿಂತಿತು. ಇದಕ್ಕಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಕೂಡ ಬಾಜಿಕೊಂಡರು. ಈ ಸಂದರ್ಭ ಮಾತನಾಡಿದ ಕಾರ್ತಿಕ್ ಕೆಲ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

“ನನಗೆ ನೀಡಿರುವ ಫಿನಿಶರ್ ಜವಾಬ್ದಾರಿಯನ್ನು ನಾನು ತುಂಬಾ ಆನಂದಿಸುತ್ತಿದ್ದೇನೆ. ಇದೊಂದು ಆಸಕ್ತದಾಯಕವಾದ ಪಾತ್ರ. ಇದರಲ್ಲಿ ನೀವು ಸ್ಥಿರವಾಗಿರಲು ಸಾಧ್ಯವಿಲ್ಲ, ಆದರೆ ಕೆಲ ಪಂದ್ಯಗಳಲ್ಲಿ ತಂಡಕ್ಕೆ ಪ್ರಭಾವ ಬೀರಬಹುದು. ಇದಕ್ಕಾಗಿ ತಂಡದ ನಾಯಕನ ಮತ್ತು ಕೋಚ್​ನ ಬೆಂಬಲ ಬೇಕು. ಇದು ನನಗೆ ಚೆನ್ನಾಗಿ ಸಿಗುತ್ತಿದೆ. ಪಂದ್ಯದಲ್ಲಿ ವಿಕೆಟ್ ಅನ್ನು ತಿಳಿಯುವುದು ಮುಖ್ಯ. ಕೊನೆಯ 3-4 ಓವರ್ ಬ್ಯಾಟ್ ಮಾಡಲು ಬರುವ ಬ್ಯಾಟರ್ ಚೆಂಡಿನ ಆಕಾರ, ವಿಕೆಟ್, ಚೆಂಡು ಯಾವರೀತಿ ವರ್ತಿಸುತ್ತದೆ ಎಂದು ಅರಿತುಕೊಳ್ಳಬೇಕು. ಸತತವಾಗಿ ಅಭ್ಯಾಸ ಮಾಡುವುದರಿಂದ ಈ ವಿಚಾರ ತಿಳಿಯುತ್ತದೆ,” ಎಂದು ಕಾರ್ತಿಕ್ ಹೇಳಿದ್ದಾರೆ.

ಇನ್ನು ಟೀಮ್ ಇಂಡಿಯ ನಾಯಕ ರೋಹಿತ್ ಶರ್ಮಾ ಮಾತನಾಡಿ, “ಇದು ಕೊಂಚ ಕಠಿಣ ಪಿಚ್ ಎಂಬುದು ತಿಳಿದಿತ್ತು. ಉತ್ತಮ ಆರಂಭ ಪಡೆದುಕೊಳ್ಳುವುದು ತುಂಬಾ ಕಷ್ಟ. ಹೀಗಿದ್ದರೂ ನಮ್ಮ ಬ್ಯಾಟರ್​ಗಳು ಆಡಿ ಫಿನಿಶ್ ಮಾಡಿದ್ದು ಅದ್ಭುತವಾಗಿತ್ತು. ಮೊದಲ 10 ಓವರ್ ಮುಕ್ತಾಯಗೊಂಡಾಗ ನಾವು 190ರ ಅಂಚಿಗೆ ತಲುಪುತ್ತೇವೆ ಎಂದು ಗ್ರಹಿಸಿರಲಿಲ್ಲ. ಕೆಲ ವಿಭಾಗಗಳಲ್ಲಿ ನಾವಿನ್ನೂ ಬಲಿಷ್ಠರಾಗಬೇಕು. ವೆಸ್ಟ್​ ಇಂಡೀಸ್​ನಲ್ಲಿ ಆಡುವುದು ಎಂದರೆ ನನಗೆ ತುಂಬಾ ಇಷ್ಟ. ಇಲ್ಲಿಗೆ ಯುಎಸ್​ಎ ಇಂದಲೂ ಸಾಕಷ್ಟು ಭಾರತದ ಅಭಿಮಾನಿಗಳು ಪಂದ್ಯ ನೋಡಲು ಬರುತ್ತಾರೆ, ಅದು ಖುಷಿ ನೀಡುತ್ತದೆ,” ಎಂದು ಹೇಳಿದ್ದಾರೆ.

ಇದನ್ನೂ ಓದಿ
Image
Dinesh Karthik: ಇದು ಯಾವ ಶಾಟ್?: ಕಾರ್ತಿಕ್ ಬ್ಯಾಟಿಂಗ್ ಕಂಡು ತಲೆ ಕೆಡಿಸಿಕೊಂಡ ನೆಟ್ಟಿಗರು: ವಿಡಿಯೋ
Image
PV Sindhu: ಮೊದಲ ಮ್ಯಾಚ್​ನಲ್ಲೇ ಪಾಕ್ ಆಟಗಾರ್ತಿಗೆ ಮಣ್ಣು ಮುಕ್ಕಿಸಿದ ಪಿವಿ ಸಿಂಧು: ಭರ್ಜರಿ ಗೆಲುವು
Image
CWG 2022: ಕ್ರಿಕೆಟ್​ನಲ್ಲಿ ಸೋತರೂ ಕಾಮನ್​ವೆಲ್ತ್​​ನಲ್ಲಿ ಮೊದಲ ದಿನ ಭಾರತ ಭರ್ಜರಿ ಆರಂಭ
Image
Ind vs Aus: 49 ರನ್​ಗಳಿಗೆ 5 ವಿಕೆಟ್‌ ಉರುಳಿದರೂ ಭಾರತಕ್ಕೆ ಸೋಲು; ಕಣ್ಣೀರಿಟ್ಟ ಹರ್ಮನ್‌ಪ್ರೀತ್‌-ರೇಣುಕಾ..!

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಉತ್ತಮ ಆರಂಭ ಪಡೆದುಕೊಂಡರೂ ಮಧ್ಯಮ ಕ್ರಮಾಂಕದಲ್ಲಿ ಬೇಗನೆ ವಿಕೆಟ್ ಕಳೆದುಕೊಂಡಿತು. ನಾಯಕ ರೋಹಿತ್ ಶರ್ಮಾ ಏಕಾಂಗಿಯಾಗಿ ನಿಂತು 15 ಓವರ್​ ವರೆಗೂ ಆಡಿದರು. ಹಿಟ್​ಮ್ಯಾನ್ 44 ಎಸೆತಗಳಲ್ಲಿ 7 ಫೋರ್, 2 ಸಿಕ್ಸರ್ ಬಾರಿಸಿ 64 ರನ್​ಗಳ ಕೊಡುಗೆ ನೀಡಿದರು. ಅಂತಿಮ ಹಂತದಲ್ಲಿ ಫಿನಿಶರ್ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಕಾರ್ತಿಕ್ 4 ಫೋರ್, 2 ಸಿಕ್ಸರ್​ನೊಂದಿಗೆ ಅಜೇಯ 41 ಚಚ್ಚಿ ಭಾರತ 20 ಓವರ್​ನಲ್ಲಿ 190 ರನ್ ಕಲೆಹಾಕುವಂತೆ ಮಾಡಿದರು.

191 ರನ್​ಗಳ ಗುರಿ ಬೆನ್ನಟ್ಟಿದ ವೆಸ್ಟ್​ ಇಂಡೀಸ್ ಪವರ್ ಪ್ಲೇ ಮುಗಿಯುವ ಹೊತ್ತಿಗೆನೆ ಮುಖ್ಯ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಂತರವೂ ಸರಾಗವಾಗಿ ವಿಕೆಟ್ ಕಳೆದುಕೊಂಡು ಸಾಗಿತು. ಕ್ರೀಸ್ ಕಚ್ಚಿ ಆಡುವಲ್ಲಿ ವಿಂಡೀಸ್ ಬ್ಯಾಟರ್​ಗಳು ವಿಫಲರಾದರು. ತಂಡದ ಪರ ಶಮರ್ ಬ್ರೂಕ್ಸ್ 20 ರನ್ ಗಳಿಸಿದ್ದೇ ಹೆಚ್ಚು. 20 ಓವರ್​ನಲ್ಲಿ 8 ವಿಕೆಟ್ ಕಳೆದುಕೊಂಡು 122 ರನ್ ಗಳಿಸಿತಷ್ಟೆ. ಭಾರತ ಪರ ಅರ್ಶ್​​ದೀಪ್, ಬಿಷ್ಣೋಯಿ ಹಾಗೂ ಅಶ್ವಿನ್ ತಲಾ 2 ವಿಕೆಟ್ ಪಡೆದರು.

Published On - 10:24 am, Sat, 30 July 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!