Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್​ನಲ್ಲಿ ಸ್ಥಾನಪಡೆಯಲು ದಿನೇಶ್ ಕಾರ್ತಿಕ್ ಸ್ಫೋಟಕ ಆಟ? ಹಿಂಟ್ ಕೊಟ್ಟ ರೋಹಿತ್

ದಿನೇಶ್ ಕಾರ್ತಿಕ್ (Dinesh Karthik) ಅವರು ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪರ ಆಟ ಆಡುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಅವರು ಉತ್ತಮವಾಗಿ ಆಡಿರಲಿಲ್ಲ. ಆದಾಗ್ಯೂ ಅವರಿಗೆ ಈ ವರ್ಷ ಚಾನ್ಸ್ ನೀಡಲಾಯಿತು. ಈ ಸೀಸನ್​ನಲ್ಲಿ ಅವರು ಅದ್ಭುತ ಆಟ ಪ್ರದರ್ಶನ ನೀಡುತ್ತಿದ್ದಾರೆ. ದಿನೇಶ್ ಕಾರ್ತಿಕ್ ಸ್ಫೋಟಕ ಆಟ ಗಮನ ಸೆಳೆದಿದೆ. ಮುಂಬೈ ವಿರುದ್ಧದದ ಪಂದ್ಯದಲ್ಲಿ ಕೇವಲ 23 ಬಾಲ್​ಗೆ 53 ರನ್​ಗಳನ್ನು ಅವರು ಸಿಡಿಸಿದ್ದಾರೆ. ಇದರಲ್ಲಿ ಐದು ಫೋರ್ ಹಾಗೂ ನಾಲ್ಕು ಸಿಕ್ಸ್ ಇದೆ. ಅವರ ಸ್ಟ್ರೈಕ್ ರೇಟ್ […]

ವಿಶ್ವಕಪ್​ನಲ್ಲಿ ಸ್ಥಾನಪಡೆಯಲು ದಿನೇಶ್ ಕಾರ್ತಿಕ್ ಸ್ಫೋಟಕ ಆಟ? ಹಿಂಟ್ ಕೊಟ್ಟ ರೋಹಿತ್
ರೋಹಿತ್-ಕಾರ್ತಿಕ್
Follow us
ರಾಜೇಶ್ ದುಗ್ಗುಮನೆ
|

Updated on:Apr 12, 2024 | 10:48 AM

ದಿನೇಶ್ ಕಾರ್ತಿಕ್ (Dinesh Karthik) ಅವರು ಐಪಿಎಲ್​ನಲ್ಲಿ ಆರ್​ಸಿಬಿ ತಂಡದ ಪರ ಆಟ ಆಡುತ್ತಿದ್ದಾರೆ. ಕಳೆದ ಸೀಸನ್​ನಲ್ಲಿ ಅವರು ಉತ್ತಮವಾಗಿ ಆಡಿರಲಿಲ್ಲ. ಆದಾಗ್ಯೂ ಅವರಿಗೆ ಈ ವರ್ಷ ಚಾನ್ಸ್ ನೀಡಲಾಯಿತು. ಈ ಸೀಸನ್​ನಲ್ಲಿ ಅವರು ಅದ್ಭುತ ಆಟ ಪ್ರದರ್ಶನ ನೀಡುತ್ತಿದ್ದಾರೆ. ದಿನೇಶ್ ಕಾರ್ತಿಕ್ ಸ್ಫೋಟಕ ಆಟ ಗಮನ ಸೆಳೆದಿದೆ. ಮುಂಬೈ ವಿರುದ್ಧದದ ಪಂದ್ಯದಲ್ಲಿ ಕೇವಲ 23 ಬಾಲ್​ಗೆ 53 ರನ್​ಗಳನ್ನು ಅವರು ಸಿಡಿಸಿದ್ದಾರೆ. ಇದರಲ್ಲಿ ಐದು ಫೋರ್ ಹಾಗೂ ನಾಲ್ಕು ಸಿಕ್ಸ್ ಇದೆ. ಅವರ ಸ್ಟ್ರೈಕ್ ರೇಟ್ 230 ಇದೆ. ಸ್ಫೋಟಕ ಆಟ ನೋಡಿ ರೋಹಿತ್ ಶರ್ಮಾ ಅವರು ದಿನೇಶ್ ಕಾರ್ತಿಕ್ ಕಾಲೆಳೆದಿದ್ದಾರೆ.

ದಿನೇಶ್ ಕಾರ್ತಿಕ್ ಅವರು ಆರ್​ಸಿಬಿ ತಂಡಕ್ಕೆ ಆಸರೆ ಆಗುತ್ತಿದ್ದಾರೆ. ಮುಂಬೈ ವಿರುದ್ಧ ಸ್ಫೋಟಕ ಆಟ ತೋರಿದ್ದಾರೆ. ನಿನ್ನೆ ಜಸ್ಪ್ರೀತ್ ಬೂಮ್ರಾ ಬೌಲಿಂಗ್​ನಲ್ಲಿ ಸಿಕ್ಸ್ ಹೊಡೆದ ಏಕೈಕ ಆರ್​ಸಿಬಿ ಆಟಗಾರ ಎನ್ನುವ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ. ಅವರ ಸ್ಫೋಟಕ ಬ್ಯಾಟಿಂಗ್ ನೋಡಿ ರೋಹಿತ್ ಶರ್ಮಾ ಕೂಡ ಮೆಚ್ಚಿಕೊಂಡಿದ್ದಾರೆ. ಅಲ್ಲದೆ, ಅವರ ಕಾಳೆಯುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ‘ಅವರೇ ಕಾರಣ’; ಸತತ ನಾಲ್ಕನೇ ಸೋಲಿನ ಬಳಿಕ ಆರ್​ಸಿಬಿ ನಾಯಕ ಫಾಪ್ ದೂರಿದ್ದು ಯಾರನ್ನು?

‘ಕಾರ್ತಿಕ್ ತಲೆಯಲ್ಲಿ ವಿಶ್ವಕಪ್ ಓಡುತ್ತಿದೆ. ಅವರಿಗೆ ವಿಶ್ವಕಪ್ ಆಡಬೇಕು’ ಎಂದು ರೋಹಿತ್ ಹೇಳಿದ್ದಾರೆ. ಇದು ಸ್ಟಂಪ್ ಮೈಕ್​ ಮೂಲಕ ಕೇಳಿಸಿದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ರೋಹಿತ್ ಹಾಗೂ ಕಾರ್ತಿಕ್ ಮಧ್ಯೆ ಒಳ್ಳೆಯ ಬಾಂಧವ್ಯ ಇದೆ. ಇಬ್ಬರೂ ಖುಷಿಖುಷಿಯಿಂದ ಮಾತನಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: RCB: ಆರ್​ಸಿಬಿ ಸೋಲಿಗೆ ಕಾರಣವಾಯ್ತಾ ಕಳಪೆ ಅಂಪೈರಿಂಗ್? ಇಲ್ಲಿದೆ ಸಾಕ್ಷಿ

ಆರ್​ಸಿಬಿ 196 ರನ್​ ಗಳಿಸಿದ ಹೊರತಾಗಿಯೂ ಅದು ತಂಡಕ್ಕೆ ಆಸರೆ ಆಗಿಲ್ಲ. ದಿನೇಶ್ ಕಾರ್ತಿಕ್ ಜೊತೆ ಫಾಪ್ ಡುಪ್ಲೆಸಿಸ್ ಹಾಗೂ ರಜತ್ ಪಟಿದಾರ್ ಕೂಡ ಅರ್ಧಶತಕ ಬಾರಿಸಿದ್ದರು. ಆದರೆ, ಮುಂಬೈ ಇಂಡಿಯನ್ಸ್ ಅವರು ಆರ್​​ಸಿಬಿ ಬೌಲರ್​ಗಳ ಬೆವರಿಳಿಸಿದರು. ಕೇವಲ 15 ಓವರ್ 3 ಬಾಲ್​ಗೆ 197 ರನ್​ಗಳ ಟಾರ್ಗೆಟ್ ಚೇಸ್ ಮಾಡಿದರು. ಇಶನ್ ಕಿಶನ್ ಹಾಗೂ ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿ ತಂಡಕ್ಕೆ ಆಸರೆ ಆದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:33 am, Fri, 12 April 24

ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
‘ವಾಮನ’ ಸಿನಿಮಾನಲ್ಲಿ ದರ್ಶನ್​ಗೆ ಇಷ್ಟವಾದ ಅಂಶಗಳೇನು?
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ