AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಮುಂದಿನ ಪಂದ್ಯದಲ್ಲೂ DK ಗೆ ಚಾನ್ಸ್ ಸಿಗೋದು ಡೌಟ್..!

Dinesh Karthik: ಪಾಕ್ ವಿರುದ್ಧ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್​ ಅನ್ನೇ ಟೀಮ್ ಇಂಡಿಯಾ ಮತ್ತೆ ಆಡಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಸೋತರೂ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿತ್ತು.

Dinesh Karthik: ಮುಂದಿನ ಪಂದ್ಯದಲ್ಲೂ DK ಗೆ ಚಾನ್ಸ್ ಸಿಗೋದು ಡೌಟ್..!
Dinesh Karthik
TV9 Web
| Edited By: |

Updated on:Sep 05, 2022 | 7:31 PM

Share

Asia Cup 2022: ಏಷ್ಯಾಕಪ್​ನ ಸೂಪರ್-4 ಹಂತದಲ್ಲಿ ಪಾಕಿಸ್ತಾನ್ ವಿರುದ್ದ ಸೋಲುಂಡಿರುವ ಟೀಮ್ ಇಂಡಿಯಾ (Team India) ಇದೀಗ 2ನೇ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದೆ. ಮಂಗಳವಾರ (ಸೆ.6) ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಆದರೆ ಅತ್ತ ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಸೂಪರ್​-4 ನಲ್ಲಿ ಶುಭಾರಂಭ ಮಾಡಿದೆ. ಇತ್ತ ಟೀಮ್ ಇಂಡಿಯಾ ಪಾಕ್ ವಿರುದ್ದ ಸೋತು ಲಂಕಾ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಇದಾಗ್ಯೂ ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆ ತುಂಬಾ ಕಡಿಮೆ ಎನ್ನಬಹುದು. ಒಂದು ವೇಳೆ ಅವೇಶ್ ಖಾನ್ ತಂಡಕ್ಕೆ ಮರಳಿದರೆ, ರವಿ ಬಿಷ್ಣೋಯ್ ಅಥವಾ ಚಹಾಲ್ ತಂಡದಿಂದ ಸ್ಥಾನ ಕಳೆದುಕೊಳ್ಳಬಹುದು.

ಇದಾಗ್ಯೂ ದಿನೇಶ್ ಕಾರ್ತಿಕ್​ಗೆ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗುವುದು ಅನುಮಾನ. ಏಕೆಂದರೆ ಟೀಮ್ ಇಂಡಿಯಾದಲ್ಲಿ ಯಾವುದೇ ಎಡಗೈ ಬ್ಯಾಟ್ಸ್​ಮನ್​ ಇಲ್ಲ. ಲೆಫ್ಟ್ ಹ್ಯಾಂಡ್ ಆಲ್​ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡ ಹಿನ್ನೆಲೆಯಲ್ಲಿ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ. ಜಡೇಜಾ ಅವರ ಅನುಪಸ್ಥಿತಿಯ ಕಾರಣ ಪಾಕ್ ವಿರುದ್ಧ ಟೀಮ್ ಇಂಡಿಯಾ ಮಹತ್ವದ ಬದಲಾವಣೆ ಮಾಡಿಕೊಂಡಿತ್ತು.

ಅದರಂತೆ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಟ್ಟು ಎಡಗೈ ದಾಂಡಿಗ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿತ್ತು. ಏಕೆಂದರೆ ಟೀಮ್ ಇಂಡಿಯಾ ಬಳಗದಲ್ಲಿರುವ ಏಕೈಕ ಎಡಗೈ ಬ್ಯಾಟ್ಸ್​ಮನ್ ಎಂದರೆ ರಿಷಭ್ ಪಂತ್. ಹಾಗಾಗಿ ಮಧ್ಯಮ ಕ್ರಮಾಂಕದಲ್ಲಿ ಲೆಫ್ಟ್ ಹ್ಯಾಂಡ್ ಬ್ಯಾಟ್ಸ್​ಮನ್​ ಅನ್ನು ಕಣಕ್ಕಿಳಿಸಲು ದಿನೇಶ್ ಕಾರ್ತಿಕ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಾಗಿತ್ತು.

ಇದೀಗ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲೂ ಎಡಗೈ ದಾಂಡಿಗನಾಗಿ ರಿಷಭ್ ಪಂತ್ ಅವರೊಬ್ಬರೇ ಟೀಮ್ ಇಂಡಿಯಾ ಮುಂದಿರುವ ಆಯ್ಕೆ. ಹೀಗಾಗಿ ಈ ಪಂದ್ಯದಲ್ಲೂ ದಿನೇಶ್ ಕಾರ್ತಿಕ್​ಗೆ ಚಾನ್ಸ್ ಸಿಗುವುದು ಅನುಮಾನ. ಅದರಂತೆ ಶ್ರೀಲಂಕಾ ವಿರುದ್ಧದ ಪಂದ್ಯದ ವೇಳೆಯೂ ಡಿಕೆ ಬೆಂಚ್ ಕಾಯಬೇಕಾಗಿ ಬರಬಹುದು.

ಅಲ್ಲದೆ ಪಾಕ್ ವಿರುದ್ಧ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್​ ಅನ್ನೇ ಟೀಮ್ ಇಂಡಿಯಾ ಮತ್ತೆ ಆಡಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಸೋತರೂ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಅದೇ ಬಳಗವನ್ನೇ ಲಂಕಾ ವಿರುದ್ಧ ಕೂಡ ಕಣಕ್ಕಿಳಿಸುವ ಮೂಲಕ ಜಯದ ಲಯಕ್ಕೆ ಮರಳಲು ಟೀಮ್ ಇಂಡಿಯಾ ಯೋಜನೆ ರೂಪಿಸಬಹುದು.

ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌.

ಮೀಸಲು ಆಟಗಾರರು: ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

Published On - 7:31 pm, Mon, 5 September 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ