AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಮುಂದಿನ ಪಂದ್ಯದಲ್ಲೂ DK ಗೆ ಚಾನ್ಸ್ ಸಿಗೋದು ಡೌಟ್..!

Dinesh Karthik: ಪಾಕ್ ವಿರುದ್ಧ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್​ ಅನ್ನೇ ಟೀಮ್ ಇಂಡಿಯಾ ಮತ್ತೆ ಆಡಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಸೋತರೂ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿತ್ತು.

Dinesh Karthik: ಮುಂದಿನ ಪಂದ್ಯದಲ್ಲೂ DK ಗೆ ಚಾನ್ಸ್ ಸಿಗೋದು ಡೌಟ್..!
Dinesh Karthik
TV9 Web
| Edited By: |

Updated on:Sep 05, 2022 | 7:31 PM

Share

Asia Cup 2022: ಏಷ್ಯಾಕಪ್​ನ ಸೂಪರ್-4 ಹಂತದಲ್ಲಿ ಪಾಕಿಸ್ತಾನ್ ವಿರುದ್ದ ಸೋಲುಂಡಿರುವ ಟೀಮ್ ಇಂಡಿಯಾ (Team India) ಇದೀಗ 2ನೇ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದೆ. ಮಂಗಳವಾರ (ಸೆ.6) ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಆದರೆ ಅತ್ತ ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಸೂಪರ್​-4 ನಲ್ಲಿ ಶುಭಾರಂಭ ಮಾಡಿದೆ. ಇತ್ತ ಟೀಮ್ ಇಂಡಿಯಾ ಪಾಕ್ ವಿರುದ್ದ ಸೋತು ಲಂಕಾ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಇದಾಗ್ಯೂ ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆ ತುಂಬಾ ಕಡಿಮೆ ಎನ್ನಬಹುದು. ಒಂದು ವೇಳೆ ಅವೇಶ್ ಖಾನ್ ತಂಡಕ್ಕೆ ಮರಳಿದರೆ, ರವಿ ಬಿಷ್ಣೋಯ್ ಅಥವಾ ಚಹಾಲ್ ತಂಡದಿಂದ ಸ್ಥಾನ ಕಳೆದುಕೊಳ್ಳಬಹುದು.

ಇದಾಗ್ಯೂ ದಿನೇಶ್ ಕಾರ್ತಿಕ್​ಗೆ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗುವುದು ಅನುಮಾನ. ಏಕೆಂದರೆ ಟೀಮ್ ಇಂಡಿಯಾದಲ್ಲಿ ಯಾವುದೇ ಎಡಗೈ ಬ್ಯಾಟ್ಸ್​ಮನ್​ ಇಲ್ಲ. ಲೆಫ್ಟ್ ಹ್ಯಾಂಡ್ ಆಲ್​ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡ ಹಿನ್ನೆಲೆಯಲ್ಲಿ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ. ಜಡೇಜಾ ಅವರ ಅನುಪಸ್ಥಿತಿಯ ಕಾರಣ ಪಾಕ್ ವಿರುದ್ಧ ಟೀಮ್ ಇಂಡಿಯಾ ಮಹತ್ವದ ಬದಲಾವಣೆ ಮಾಡಿಕೊಂಡಿತ್ತು.

ಅದರಂತೆ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಟ್ಟು ಎಡಗೈ ದಾಂಡಿಗ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿತ್ತು. ಏಕೆಂದರೆ ಟೀಮ್ ಇಂಡಿಯಾ ಬಳಗದಲ್ಲಿರುವ ಏಕೈಕ ಎಡಗೈ ಬ್ಯಾಟ್ಸ್​ಮನ್ ಎಂದರೆ ರಿಷಭ್ ಪಂತ್. ಹಾಗಾಗಿ ಮಧ್ಯಮ ಕ್ರಮಾಂಕದಲ್ಲಿ ಲೆಫ್ಟ್ ಹ್ಯಾಂಡ್ ಬ್ಯಾಟ್ಸ್​ಮನ್​ ಅನ್ನು ಕಣಕ್ಕಿಳಿಸಲು ದಿನೇಶ್ ಕಾರ್ತಿಕ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಾಗಿತ್ತು.

ಇದೀಗ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲೂ ಎಡಗೈ ದಾಂಡಿಗನಾಗಿ ರಿಷಭ್ ಪಂತ್ ಅವರೊಬ್ಬರೇ ಟೀಮ್ ಇಂಡಿಯಾ ಮುಂದಿರುವ ಆಯ್ಕೆ. ಹೀಗಾಗಿ ಈ ಪಂದ್ಯದಲ್ಲೂ ದಿನೇಶ್ ಕಾರ್ತಿಕ್​ಗೆ ಚಾನ್ಸ್ ಸಿಗುವುದು ಅನುಮಾನ. ಅದರಂತೆ ಶ್ರೀಲಂಕಾ ವಿರುದ್ಧದ ಪಂದ್ಯದ ವೇಳೆಯೂ ಡಿಕೆ ಬೆಂಚ್ ಕಾಯಬೇಕಾಗಿ ಬರಬಹುದು.

ಅಲ್ಲದೆ ಪಾಕ್ ವಿರುದ್ಧ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್​ ಅನ್ನೇ ಟೀಮ್ ಇಂಡಿಯಾ ಮತ್ತೆ ಆಡಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಸೋತರೂ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಅದೇ ಬಳಗವನ್ನೇ ಲಂಕಾ ವಿರುದ್ಧ ಕೂಡ ಕಣಕ್ಕಿಳಿಸುವ ಮೂಲಕ ಜಯದ ಲಯಕ್ಕೆ ಮರಳಲು ಟೀಮ್ ಇಂಡಿಯಾ ಯೋಜನೆ ರೂಪಿಸಬಹುದು.

ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌.

ಮೀಸಲು ಆಟಗಾರರು: ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

Published On - 7:31 pm, Mon, 5 September 22

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ