Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ದಿನೇಶ್ ಕಾರ್ತಿಕ್ ಸಿಡಿಲಬ್ಬರ, ಆದರೂ ಸೋತ ತಮಿಳುನಾಡು

Dinesh Karthik: ಈ ಪಂದ್ಯದಲ್ಲಿ ಅರ್ಧಶತಕ ಬಾರಿಸುವುದರೊಂದಿಗೆ ದಿನೇಶ್ ಕಾರ್ತಿಕ್ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7500+ ರನ್​ಗಳನ್ನು ಪೂರೈಸಿದರು. ಒಟ್ಟು 256 ಲೀಸ್ಟ್ ಎ ಪಂದ್ಯಗಳನ್ನಾಡಿರುವ ಡಿಕೆ 12 ಶತಕ ಹಾಗೂ 41 ಅರ್ಧಶತಕಗಳೊಂದಿಗೆ ಇದುವರೆಗೆ 7,569 ರನ್ ಕಲೆಹಾಕಿದ್ದಾರೆ.

Dinesh Karthik: ದಿನೇಶ್ ಕಾರ್ತಿಕ್ ಸಿಡಿಲಬ್ಬರ, ಆದರೂ ಸೋತ ತಮಿಳುನಾಡು
Dinesh Karthik
Follow us
TV9 Web
| Updated By: ಝಾಹಿರ್ ಯೂಸುಫ್

Updated on: Dec 02, 2023 | 4:45 PM

ದೇಶೀಯ ಅಂಗಳದಲ್ಲಿ ನಡೆಯುತ್ತಿರುವ ವಿಜಯ್ ಹಜಾರೆ ಟೂರ್ನಿಯಲ್ಲಿ ತಮಿಳುನಾಡು ತಂಡದ ನಾಯಕ ದಿನೇಶ್ ಕಾರ್ತಿಕ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಭರ್ಜರಿ ಬ್ಯಾಟಿಂಗ್ ಹೊರತಾಗಿಯೂ ಈ ಪಂದ್ಯದಲ್ಲಿ ಪಂಜಾಬ್ ತಂಡ ಗೆದ್ದಿರುವುದು ವಿಶೇಷ. ಮುಂಬೈನ ಶರದ್ ಪವಾರ್ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ತಮಿಳುನಾಡು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಪರ ಆರಂಭಿಕನಾಗಿ ಕಣಕ್ಕಿಳಿದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಪ್ರಭ್​ಸಿಮ್ರಾನ್ ಸಿಂಗ್ 39 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 58 ರನ್ ಬಾರಿಸಿ ಮಿಂಚಿದರು. ಇನ್ನು ಮಧ್ಯಮ ಕ್ರಮಾಂಕದಲ್ಲಿ ನಾಯಕ ಮಂದೀಪ್ ಸಿಂಗ್ 88 ಎಸೆತಗಳಲ್ಲಿ 68 ರನ್​ಗಳ ಕೊಡುಗೆ ನೀಡಿದರು.

ಆದರೆ ಪಂಜಾಬ್ ತಂಡ ಉಳಿದ ಬ್ಯಾಟರ್​ಗಳು ತಮಿಳುನಾಡು ಬೌಲರ್​ಗಳನ್ನು ಎದುರಿಸುವಲ್ಲಿ ತಡಕಾಡಿದರು. ಪರಿಣಾಮ 45.2 ಓವರ್​ಗಳಲ್ಲಿ 251 ರನ್​ಗಳಿಸಿ ಪಂಜಾಬ್ ತಂಡ ಆಲೌಟ್ ಆಯಿತು.

50 ಓವರ್​ಗಳಲ್ಲಿ 252 ರನ್​ಗಳ ಸುಲಭ ಗುರಿ ಪಡೆದ ತಮಿಳುನಾಡು ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ತಂಡದ ಮೊತ್ತ 40 ಆಗುವಷ್ಟರಲ್ಲಿ ಅಗ್ರ ಕ್ರಮಾಂಕದ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ ಕಣಕ್ಕಿಳಿದ ನಾಯಕ ದಿನೇಶ್ ಕಾರ್ತಿಕ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು. ಪಂಜಾಬ್ ಬೌಲರ್​ಗಳನ್ನು ಮನಸೊ ಇಚ್ಛೆ ದಂಡಿಸಿದ ಡಿಕೆ 4 ಭರ್ಜರಿ ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 82 ಎಸೆತಗಳಲ್ಲಿ 93 ರನ್ ಬಾರಿಸಿದರು. ಇತ್ತ ಶತಕದಂಚಿಗೆ ತಲುಪಿದ್ದ ಡಿಕೆಯನ್ನು ಸಿದ್ಧಾರ್ಥ್ ಕೌಲ್ ಕ್ಲೀನ್ ಬೌಲ್ಡ್​ ಮಾಡಿದರು.

ದಿನೇಶ್ ಕಾರ್ತಿಕ್ ಔಟ್ ಆಗುತ್ತಿದ್ದಂತೆ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡ ತಮಿಳುನಾಡು ತಂಡ 34.2 ಓವರ್​ಗಳಲ್ಲಿ 175 ರನ್​ಗಳಿಸಿ ಆಲೌಟ್ ಆಯಿತು. ಪಂಜಾಬ್ ಪರ ಸಿದ್ಧಾರ್ಥ್ ಕೌಲ್ 9 ಓವರ್​ಗಳಲ್ಲಿ 50 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು. ಈ ಮೂಲಕ ಪಂಜಾಬ್ ತಂಡ 76 ರನ್​ಗಳ ಭರ್ಜರಿ ಜಯ ಸಾಧಿಸಿತು.

ವಿಶೇಷ ಸಾಧನೆ ಮಾಡಿದ ಡಿಕೆ:

ಈ ಪಂದ್ಯದಲ್ಲಿ ಅರ್ಧಶತಕ ಬಾರಿಸುವುದರೊಂದಿಗೆ ದಿನೇಶ್ ಕಾರ್ತಿಕ್ ಲೀಸ್ಟ್ ಎ ಕ್ರಿಕೆಟ್​ನಲ್ಲಿ 7500+ ರನ್​ಗಳನ್ನು ಪೂರೈಸಿದರು. ಒಟ್ಟು 256 ಲೀಸ್ಟ್ ಎ ಪಂದ್ಯಗಳನ್ನಾಡಿರುವ ಡಿಕೆ 12 ಶತಕ ಹಾಗೂ 41 ಅರ್ಧಶತಕಗಳೊಂದಿಗೆ ಇದುವರೆಗೆ 7,569 ರನ್ ಕಲೆಹಾಕಿದ್ದಾರೆ.

ಪಂಜಾಬ್ ಪ್ಲೇಯಿಂಗ್ 11: ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) , ಅಭಿಷೇಕ್ ಶರ್ಮಾ , ಅನ್ಮೋಲ್ಪ್ರೀತ್ ಸಿಂಗ್ , ಮಂದೀಪ್ ಸಿಂಗ್ (ನಾಯಕ) , ನೆಹಾಲ್ ವಧೇರಾ , ಸನ್ವಿರ್ ಸಿಂಗ್ , ಪ್ರೀತ್ ದತ್ತಾ , ರಮಣದೀಪ್ ಸಿಂಗ್ , ಮಯಾಂಕ್ ಮಾರ್ಕಂಡೆ , ಸಿದ್ದಾರ್ಥ್ ಕೌಲ್ , ಬಲ್ತೇಜ್ ಸಿಂಗ್.

ಇದನ್ನೂ ಓದಿ: IPL 2024 Auction: 2 ಕೋಟಿ ರೂ. ಮೂಲ ಬೆಲೆ ಘೋಷಿಸಿದ 25 ಆಟಗಾರರು..!

ತಮಿಳುನಾಡು ಪ್ಲೇಯಿಂಗ್ 11: ಸಾಯಿ ಸುದರ್ಶನ್ , ಎನ್ ಜಗದೀಸನ್ , ಬಾಬಾ ಅಪರಾಜಿತ್ , ವಿಜಯ್ ಶಂಕರ್ , ಬಾಬಾ ಇಂದ್ರಜಿತ್ , ದಿನೇಶ್ ಕಾರ್ತಿಕ್ (ನಾಯಕ) , ಶಾರುಖ್ ಖಾನ್ , ಆರ್​. ಸಾಯಿ ಕಿಶೋರ್ , ವರುಣ್ ಚಕ್ರವರ್ತಿ , ಸಂದೀಪ್ ವಾರಿಯರ್ , ಟಿ ನಟರಾಜನ್.

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ