AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಇದು ಯಾವ ಶಾಟ್?: ಕಾರ್ತಿಕ್ ಬ್ಯಾಟಿಂಗ್ ಕಂಡು ತಲೆ ಕೆಡಿಸಿಕೊಂಡ ನೆಟ್ಟಿಗರು: ವಿಡಿಯೋ

India vs West Indies: ನಾಯಕ ರೋಹಿತ್ ಶರ್ಮಾ (Rohit Sharma) ಅವರ ಆಕರ್ಷಕ ಅರ್ಧಶತಕದ ಜೊತೆ ದಿನೇಶ್ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ವೆಸ್ಟ್​ ಇಂಡೀಸ್​ಗೆ ಗೆಲ್ಲಲು ಸವಾಲಿನ ಟಾರ್ಗೆಟ್ ನೀಡಿತು. ಇದರಲ್ಲಿ ಡಿಕೆ ಪಾತ್ರ ತುಂಬಾನೆ ಮಹತ್ವದ್ದಾಗಿತ್ತು.

Dinesh Karthik: ಇದು ಯಾವ ಶಾಟ್?: ಕಾರ್ತಿಕ್ ಬ್ಯಾಟಿಂಗ್ ಕಂಡು ತಲೆ ಕೆಡಿಸಿಕೊಂಡ ನೆಟ್ಟಿಗರು: ವಿಡಿಯೋ
Dinesh Karthik IND vs WI 1st T20I
TV9 Web
| Edited By: |

Updated on: Jul 30, 2022 | 8:56 AM

Share

ಏಕದಿನ ಬಳಿಕ ಇದೀಗ ವೆಸ್ಟ್​ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲೂ ಭಾರತ (India vs West Indies) ಪರಾಕ್ರಮ ಮೆರೆದಿದೆ. ಟ್ರಿನಿಡಾಟ್​ನ ಬ್ರಿಯನ್ ಲಾರ ಸ್ಟೇಡಿಯಂನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಬರೋಬ್ಬರಿ 68 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆದುಕೊಂಡಿದೆ. ನಾಯಕ ರೋಹಿತ್ ಶರ್ಮಾ (Rohit Sharma) ಅವರ ಆಕರ್ಷಕ ಅರ್ಧಶತಕದ ಜೊತೆ ದಿನೇಶ್ ಕಾರ್ತಿಕ್ (Dinesh Karthik) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಭಾರತ ಸವಾಲಿನ ಟಾರ್ಗೆಟ್ ನೀಡಿತು. ಆದರೆ, ವೆಸ್ಟ್ ಇಂಡೀಸ್ ಭಾರತದ ಸಂಘಟಿತ ಬೌಲಿಂಗ್ ದಾಳಿಗೆ ತತ್ತರಿಸಿ ಅಲ್ಪ ಮೊತ್ತವನ್ನಷ್ಟೆ ಗಳಿಸಿ ಭಾರೀ ಮುಖಭಂಗ ಅನುಭವಿಸಿದೆ. ಭಾರತದ ಮೊತ್ತ 190ಕ್ಕೆ ಬರಲು ಮುಖ್ಯ ಕಾರಣ ಡಿಕೆ.

ಹೌದು, ಪ್ರಮುಖ ಬ್ಯಾಟರ್​ಗಳು ಪೆವಿಲಿಯನ್ ಸೇರಿಕೊಂಡ ಬಳಿಕ ದಿನೇಶ್ ಕಾರ್ತಿಕ್ ಆರಂಭದಲ್ಲಿ ಎಚ್ಚರಿಕೆಯಿಂದ ಬ್ಯಾಟ್ ಬೀಸಿದರು. ಅಂತಿಮ ಎರಡು ಓವರ್​ಗಳಲ್ಲಿ ಮನಬಂದಂತೆ ಬ್ಯಾಟ್ ಬೀಸಿದ ಇವರು ಕೇವಲ 19 ಎಸೆತಗಳಲ್ಲಿ 4 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 41 ರನ್ ಚಚ್ಚಿದರು. ಅದರಲ್ಲೂ ಕೊನೆಯ 20ನೇ ಓವರ್​ನ ಒಬೆಡ್ ಮೆಖಾಯ್ ಅವರ 4ನೇ ಎಸೆತದಲ್ಲಿ ಕಾರ್ತಿಕ್ ಹೊಡೆದ ಶಾಟ್ ಎಲ್ಲರ ಹುಬ್ಬೇರುವಂತೆ ಮಾಡಿತು.

ಇದನ್ನೂ ಓದಿ
Image
PV Sindhu: ಮೊದಲ ಮ್ಯಾಚ್​ನಲ್ಲೇ ಪಾಕ್ ಆಟಗಾರ್ತಿಗೆ ಮಣ್ಣು ಮುಕ್ಕಿಸಿದ ಪಿವಿ ಸಿಂಧು: ಭರ್ಜರಿ ಗೆಲುವು
Image
CWG 2022: ಕ್ರಿಕೆಟ್​ನಲ್ಲಿ ಸೋತರೂ ಕಾಮನ್​ವೆಲ್ತ್​​ನಲ್ಲಿ ಮೊದಲ ದಿನ ಭಾರತ ಭರ್ಜರಿ ಆರಂಭ
Image
Ind vs Aus: 49 ರನ್​ಗಳಿಗೆ 5 ವಿಕೆಟ್‌ ಉರುಳಿದರೂ ಭಾರತಕ್ಕೆ ಸೋಲು; ಕಣ್ಣೀರಿಟ್ಟ ಹರ್ಮನ್‌ಪ್ರೀತ್‌-ರೇಣುಕಾ..!
Image
CWG 2022: ಟೇಬಲ್ ಟೆನಿಸ್‌ನಲ್ಲಿ ಶುಭಾರಂಭ ಮಾಡಿದ ಭಾರತ; ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ಮನಿಕಾ ಬಾತ್ರಾ..!

ಕಾರ್ತಿಕ್ ರಿವರ್ಸ್​ ಸ್ವೀಪ್​ಗೆಂದು ಕಾದು ಕುಳಿತಿದ್ದರು. ಆದರೆ, ಚೆಂಡು ಔಟ್​ಸೈಡ್ ಆಫ್ ಸ್ಟೆಂಪ್ ಕಡೆ ಬಂತು. ಆದರೂ ಅದನ್ನು ರಿವರ್ಸ್​ ಸ್ವೀಪ್ ಮಾಡಲು ಯತ್ನಿಸಿದರು. ಅದು ಸಾಧ್ಯವಾಗಲಿಲ್ಲ. ಅತ್ತ ಲೆಗ್ ಸ್ಟಂಪ್ ಕಡೆ ಕೂಡ ತಿರುಗಿದರು. ಎಡ್ಜ್ ಕೂಡ ಆಗಲಿಲ್ಲ. ಆದರೆ, ಅದೇಗೊ ಬಾಲ್ ಬ್ಯಾಟ್​ನ ಒಂದು ಬದಿಗೆ ತಾಗಿ ಫೈನ್​ಲೆಗ್ ಕಡೆ ಸಾಗಿತು. ಇದನ್ನು ಕಂಡ ಅಭಿಮಾನಿಗಳು ಇದು ಕಾರ್ತಿಕ್ ಅವರ ಯಾವ ಶಾಟ್ ಎಂದು ತಮಾಷೆಯಾಗಿ ಕೇಳುತ್ತಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಉತ್ತಮ ಆರಂಭ ಪಡೆದುಕೊಂಡಿದ್ದು ಬಿಟ್ಟರೆ ನಂತರ ಮಧ್ಯಮ ಕ್ರಮಾಂಕದಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿತು. ರಾಹುಲ್ ಅನುಪಸ್ಥಿತಿಯಲ್ಲಿ ನಾಯಕ ರೋಹಿತ್ ಶರ್ಮಾ ಜೊತೆ ಸೂರ್ಯಕುಮಾರ್ ಯಾದವ್ ಇನ್ನಿಂಗ್ಸ್​ ಆರಂಭಿಸಿದರು. ಈ ಜೋಡಿ 4.4 ಓವರ್​ನಲ್ಲಿ 44 ರನ್​ ಬಾರಿಸಿತು. ಸೂರ್ಯ 16 ಎಸೆತಗಳಲ್ಲಿ 24 ರನ್ ಗಳಿಸಿ ಔಟಾದರು. ಇದರ ಬೆನ್ನಲ್ಲೇ ಶ್ರೇಯಸ್ ಅಯ್ಯರ್ ಕೂಡ ಶೂನ್ಯಕ್ಕೆ ನಿರ್ಗಮಿಸಿದರು.

ರಿಷಭ್ ಪಂತ್ (14) ಹಾಗೂ ಹಾರ್ದಿಕ್ ಪಾಂಡ್ಯ (1) ಆಟ ಕೂಡ ನಡೆಯಲಿಲ್ಲ. ಇದರ ನಡುವೆ ಏಕಾಂಗಿಯಾಗಿ ರನ್ ಕಲೆಹಾಕುತ್ತಿದ್ದ ರೋಹಿತ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಆದರೆ, 44 ಎಸೆತಗಳಲ್ಲಿ 7 ಫೋರ್, 2 ಸಿಕ್ಸರ್ ಬಾರಿಸಿ 64 ರನ್ ಗಳಿಸಿ ಹಿಟ್​ಮ್ಯಾನ್ ಕೂಡ ಬ್ಯಾಟ್ ಕೆಳಗಿಟ್ಟರು. ರವೀಂದ್ರ ಜಡೇಜಾ 16 ರನ್ ಗಳಿಸಿದರಷ್ಟೆ. ಅಂತಿಮ ಹಂತದಲ್ಲಿ ಕ್ರೀಸ್​ಗೆ ಬಂದ ಕಾರ್ತಿಕ್ ಸ್ಫೋಟಕ ಬ್ಯಾಟಿಂಗ್ ನಡಸಿ ತಂಡಕ್ಕೆ ಆಸರೆಯಾದರು. ಶ್ರೀಆರ್. ಅಶ್ವಿನ್ (13*) ಕೂಡ ಇವರಿಗೆ ಸಾಥ್ ನೀಡಿದರು. ಪರಿಣಾಮ ಭಾರತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು.

ಟಾರ್ಗೆಟ್ ಬೆನ್ನಟ್ಟಿದ ವೆಸ್ಟ್ ಇಂಡೀಸ್ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡದ ಪರ ಶಮರ್ ಬ್ರೂಕ್ಸ್ 20 ಹಾಗೂ ಬೌಲರ್ ಕೀಮೊ ಪೌಲ್ 19 ರನ್ ಗಳಿಸಿದ್ದೇ ಹೆಚ್ಚು. ಭಾರತ ಪರ ಅರ್ಶ್​ದೀಪ್ ಸಿಂಗ್, ಆರ್. ಅಶ್ವಿನ್ ಮತ್ತು ರವಿ ಬಿಷ್ಟೋಯ್ ತಲಾ 2 ವಿಕೆಟ್ ಕಿತ್ತರೆ, ಭುವನೇಶ್ವರ್ ಕುಮಾರ್ ಮತ್ತು ಜಡೇಜಾ 1 ವಿಕೆಟ್ ಪಡೆದರು.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​