AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದಕ್ಕೆ ಆರ್​ಸಿಬಿಗೆ ಧನ್ಯವಾದ ಹೇಳಿದ ದಿನೇಶ್ ಕಾರ್ತಿಕ್

Ind vs SA T20I Series: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗುವ ಮೂಲಕ ಬರೋಬ್ಬರಿ ಮೂರು ವರ್ಷಗಳ ನಂತರ ದಿನೇಶ್ ಕಾರ್ತಿಕ್​ಗೆ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್​ನ ಬಾಗಿಲು ತೆರೆದಿದ್ದು, ಸಂಭ್ರಮ ಹಂಚಿಕೊಂಡಿದ್ದಾರೆ. ಆರ್​ಸಿಬಿ ಹಂಚಿಕೊಂಡಿರುವ ವಿಡಿಯೋದಲ್ಲಿ ಈ ಬಗ್ಗೆ ಕಾರ್ತಿಕ್ ಮಾತನಾಡಿದ್ದಾರೆ.

Dinesh Karthik: ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದಕ್ಕೆ ಆರ್​ಸಿಬಿಗೆ ಧನ್ಯವಾದ ಹೇಳಿದ ದಿನೇಶ್ ಕಾರ್ತಿಕ್
Dinesh Karthik
Follow us
TV9 Web
| Updated By: Vinay Bhat

Updated on: May 24, 2022 | 12:25 PM

ಜೂನ್ 9 ರಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ಕ್ರಿಕೆಟ್ ತಂಡವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಬಿಸಸಿಸಿಐ (BCCI) ಭಾನುವಾರ ಪ್ರಕಟ ಮಾಡಿತ್ತು. ಅಂದುಕೊಂಡಂತೆ ಪ್ರಮುಖ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು ಜೊತೆಗೆ ಕೆಲ ಅಚ್ಚರಿ ಆಯ್ಕೆಗಳು ಕೂಡ ನಡೆದಿದೆ. ಟೀಮ್ ಇಂಡಿಯಾ (Team India) ಖಾಯಂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್​ಪ್ರೀತ್ ಬುಮ್ರಾ ಅವರಿಗೆ ರೆಸ್ಟ್ ನೀಡಲಾಗಿದೆ. ಹೀಗಾಗಿ ಕೆಎಲ್ ರಾಹುಲ್ ಅವರನ್ನು ಹಂಗಾಮಿ ನಾಯಕರಾಗಿ ಮತ್ತು ರಿಷಬ್ ಪಂತ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ವಿಶೇಷ ಎಂದರೆ ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಫಿನಿಶರ್ ಆಗಿ ಬೊಂಬಾಟ್ ಪ್ರದರ್ಶನ ನೀಡುತ್ತಿರುವ ದಿನೇಶ್ ಕಾರ್ತಿಕ್ (Dinesh Karthik) ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದಾರೆ. ಬರೋಬ್ಬರಿ ಮೂರು ವರ್ಷಗಳ ನಂತರ ಕಾರ್ತಿಕ್​ಗೆ ಮತ್ತೆ ಅಂತರರಾಷ್ಟ್ರೀಯ ಕ್ರಿಕೆಟ್​ನ ಬಾಗಿಲು ತೆರೆದಿದ್ದು, ಸಂಭ್ರಮ ಹಂಚಿಕೊಂಡಿದ್ದಾರೆ. ಅವರು ಏನು ಹೇಳಿದ್ದಾರೆ ಕೇಳಿ.

ಆರ್​ಸಿಬಿ ಹಂಚಿಕೊಂಡಿರುವ ವಿಡಿಯೋದಲ್ಲಿ ಈ ಬಗ್ಗೆ ಸಂತಸ ಹಂಚಿಕೊಂಡಿರುವ ಕಾರ್ತಿಕ್, “ನಾನು ತುಂಬಾ ಸಂತೋಷವಾಗಿದ್ದೇನೆ. ತುಂಬಾ ತೃಪ್ತಿ ಹೊಂದಿದ್ದೇನೆ. ಇದು ನನ್ನ ಅತ್ಯಂತ ವಿಶೇಷವಾದ ಕಮ್​ಬ್ಯಾಕ್ ಆಗಿದೆ. ಏಕೆಂದರೆ ಬಹಳಷ್ಟು ಜನರು ನನ್ನನ್ನು ತ್ಯಜಿಸಿದ್ದಾರೆ. ನಾನು ಸತತವಾಗಿ ಅಭ್ಯಾಸ ನಡೆಸಿದ್ದೆ. ನಾನು ಮಾಡಲು ಬಯಸಿದ ಪಾತ್ರವನ್ನು ನಿರ್ವಹಿಸಲು ಅವರು ನನಗೆ ಮತ್ತೊಂದು ಅವಕಾಶ ನೀಡಿದ್ದಾರೆಂದು ಭಾವಿಸುತ್ತೇನೆ. ಅನೇಕ ವಿಧಗಳಲ್ಲಿ ನಾನು ಆರ್​ಸಿಬಿಗೆ ಋಣಿಯಾಗಿದ್ದೇನೆ, ನನ್ನನ್ನು ಆಕ್ಷನ್​ನಲ್ಲಿ ಖರೀದಿಸಿ ಮತ್ತು ನನಗೆ ಆ ಪಾತ್ರವನ್ನು ನೀಡಿದೆ. ನನ್ನ ಮೇಲೆ ನಂಬಿಕೆಯಿಟ್ಟ ಕಾರಣ ನಾನು ಇಂದು ಇಲ್ಲಿಗೆ ಬಂದು ನಿಂತಿದ್ದೇನೆ. ಆರ್​ಸಿಬಿ ತಂಡಕ್ಕಾಗಿ ನನ್ನ ಕೈಲಾದಷ್ಟು ಸಹಾಯ ಮಾಡುತ್ತೇನೆ. ಇದು ತುಂಬಾ ಸಂತೋಷದ ಭಾವನೆಯಾಗಿದೆ,” ಎಂದು ಕಾರ್ತಿಕ್ ಹೇಳಿದ್ದಾರೆ.

GT vs RR: ಕೋಲ್ಕತ್ತಾ ಹವಾಮಾನ ಹೇಗಿದೆ?: ಕ್ವಾಲಿಫೈಯರ್ 1 ಪಂದ್ಯ ಮಳೆಯಿಂದ ರದ್ದಾದರೆ ಏನಾಗಲಿದೆ?

ಇದನ್ನೂ ಓದಿ
Image
GT vs RR: ಐಪಿಎಲ್​​ನಲ್ಲಿಂದು ಗುಜರಾತ್-ರಾಜಸ್ಥಾನ್ ನಡುವೆ ಮೊದಲ ಕ್ವಾಲಿಫೈಯರ್: ಗೆದ್ದ ತಂಡ ಫೈನಲ್​ಗೆ ಲಗ್ಗೆ
Image
Women’s T20 Challenge 2022: ಪೂಜಾ ಮಾರಕ ದಾಳಿಗೆ ನಲುಗಿದ ಟ್ರೇಲ್‌ಬ್ಲೇಜರ್ಸ್: ಸೂಪರ್‌ನೋವಾಸ್ 49 ರನ್​ಗಳ ಭರ್ಜರಿ ಜಯ
Image
IPL 2022: ಇಡೀ ಸೀಸನ್​ನಲ್ಲಿ ಒಂದೇ ಒಂದು ಅವಕಾಶ ಪಡೆಯದ ಅರ್ಜುನ್ ತೆಂಡೂಲ್ಕರ್​ಗೆ ಅಕ್ಕನ ಭಾವನಾತ್ಮಕ ಸಾಂತ್ವನ
Image
GT vs RR Prediction Playing XI: ಗುಜರಾತ್ ಮತ್ತು ರಾಜಸ್ಥಾನದ ಮುಂದೆ ಒಂದೇ ಪ್ರಶ್ನೆ.. ಮೂರನೇ ವೇಗಿ ಯಾರು?

ಇನ್ನು ಬಿಸಿಸಿಐ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತನ್ನನ್ನು ಆಯ್ಕೆ ಮಾಡುತ್ತಿದ್ದಂತೆ ಟ್ವೀಟ್ ಮಾಡಿದ್ದ ಕಾರ್ತಿಕ್, “ನೀವು ನಿಮ್ಮನ್ನು ನಂಬಿದರೆ, ಎಲ್ಲವೂ ಸರಿಯಾಗಿ ಸಾಗುತ್ತದೆ. ನಿಮ್ಮೆಲ್ಲರ ಬೆಂಬಲ ಮತ್ತು ನಂಬಿಕೆಗೆ ಧನ್ಯವಾದಗಳು… ಕಠಿಣ ಪರಿಶ್ರಮ ಮುಂದುವರಿಯುತ್ತದೆ…,” ಎಂದು ಬರೆದುಕೊಂಡಿದ್ದಾರೆ. ದಿನೇಶ್ ಕಾರ್ತಿಕ್ ಇದ್ದ ತಂಡದಲ್ಲೇ ರಿಷಭ್ ಪಂತ್ ಕೂಡ ಇದ್ದಾರೆ. ಇದರಿಂದ ಕಾರ್ತಿಕ್ ಪ್ಲೇಯಿಂಗ್ ಇಲೆವೆನ್ನಲ್ಲಿ ಸ್ಥಾನ ಪಡೆಯುತ್ತಾರಾ ಎಂಬ ಅನುಮಾನ ಮೂಡಿದೆ. ಎಲ್ಲದರೂ ಅವಕಾಶ ಸಿಕ್ಕರೆ ಆ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಂಡರೆ ಟಿ20 ವಿಶ್ವಕಪ್​ನಲ್ಲಿ ಸ್ಥಾನ ಪಡೆಯುವುದು ಖಚಿತ.

ರುತುರಾಜ್‌ ಗಾಯಕ್ವಾಡ್‌ ಹಾಗೂ ಇಶಾನ್‌ ಕಿಶನ್‌ ಅವರು ಭಾರತ ತಂಡದಲ್ಲಿ ತಮ್ಮ ಸ್ಥಾನ ಪಡೆದಿದ್ದಾರೆ. ಇವರೊಂದಿಗೆ ಐಪಿಎಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾದ ಆಲ್ರೌಂಡರ್‌ ವೆಂಕಟೇಶ್‌ ಅಯ್ಯರ್‌ ಸಹ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಶ್ರೇಯಸ್‌ ಅಯ್ಯರ್‌, ದೀಪಕ್‌ ಹೂಡ ಕೂಡ ಕಮ್​ಬ್ಯಾಕ್ ಮಾಡಿದ್ದಾರೆ. ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್ ಆಯ್ಕೆಯಾಗಿದ್ದಾರೆ. ಜೂನ್ 9 ರಿಂದ ಆರಂಭಗೊಳ್ಳುವ ಮೊದಲ ಟಿ20 ಪಂದ್ಯವು ದೆಹಲಿಯಲ್ಲಿ ನಡೆಯಲಿದ್ದು, ಜೂನ್ 12 ಎರಡನೇ ಟಿ20 ಕಟಕ್, ಜೂನ್ 14 ಮೂರನೇ ಟಿ20 ವಿಶಾಖಪಟ್ಟಣಂ, ಜೂನ್ 17 ನಾಲ್ಕನೇ ಟಿ20 ರಾಜ್‌ಕೋಟ್‌, ಜೂನ್ 19 ಐದನೇ ಟಿ20 ಬೆಂಗಳೂರಿನಲ್ಲಿ ನಡೆಯಲಿದೆ.

ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾ:

ಕೆಎಲ್ ರಾಹುಲ್ (ನಾಯಕ), ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ