AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಟಿ20 ವಿಶ್ವಕಪ್​ಗೆ ಆಯ್ಕೆಯಾದ ತಕ್ಷಣ ದಿನೇಶ್ ಕಾರ್ತಿಕ್ ಮಾಡಿದ ಟ್ವೀಟ್ ಏನು ನೋಡಿ

India Squad for the 2022 T20 World cup: 2007 ರಲ್ಲಿ ನಡೆದ ಟಿ20 ವಿಶ್ವಕಪ್​ನ ಉದ್ಘಾಟನಾ ಟೂರ್ನಿಯಲ್ಲಿ ಭಾರತ ತಂಡದ ಭಾಗವಾಗಿದ್ದ ದಿನೇಶ್ ಕಾರ್ತಿಕ್ ಕೂಡ 2022 ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾದ 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

Dinesh Karthik: ಟಿ20 ವಿಶ್ವಕಪ್​ಗೆ ಆಯ್ಕೆಯಾದ ತಕ್ಷಣ ದಿನೇಶ್ ಕಾರ್ತಿಕ್ ಮಾಡಿದ ಟ್ವೀಟ್ ಏನು ನೋಡಿ
Dinesh Karthik
TV9 Web
| Updated By: Vinay Bhat|

Updated on:Sep 13, 2022 | 7:52 AM

Share

ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (ICC T20 World Cup)​ ಟೂರ್ನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ರೋಹಿತ್ ಶರ್ಮಾ (Rohit Sharma) ತಂಡವನ್ನು ಮುನ್ನಡೆಸುತ್ತಿದ್ದು ಕೆಎಲ್ ರಾಹುಲ್ ಉಪ ನಾಯಕನಾಗಿದ್ದಾರೆ. ಕೆಲವೊಂದು ಅಚ್ಚರಿಯ ಆಯ್ಕೆಗಳು ಕೂಡ ನಡೆದಿದೆ. ಇಂಜುರಿಯಿಂದ ಜಸ್​ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಕಮ್​ಬ್ಯಾಕ್ ಮಾಡಿದ್ದು 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದರ ಜೊತೆಗೆ 2007 ರಲ್ಲಿ ನಡೆದ ಟಿ20 ವಿಶ್ವಕಪ್​ನ ಉದ್ಘಾಟನಾ ಟೂರ್ನಿಯಲ್ಲಿ ಭಾರತ ತಂಡದ ಭಾಗವಾಗಿದ್ದ ದಿನೇಶ್ ಕಾರ್ತಿಕ್ (Dinesh Karthik) ಕೂಡ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.

ಈ ಮೂಲಕ ಕಾರ್ತಿಕ್ ಬಹಳ ಸಮಯದ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಬಗ್ಗೆ ಖುಷಿ ವ್ಯಕ್ತಪಡಿಸಿರುವ ಕಾರ್ತಿಕ್ ಟ್ವಿಟರ್​ನಲ್ಲಿ ಕನಸುಗಳು ನನಸಾಗುತ್ತವೆಎಂದು ಬರೆದು ಬ್ಲೂ ಹಾರ್ಟ್ ಎಮೋಜಿಯೊಂದಿಗೆ ಹಂಚಿಕೊಂಡಿದ್ದಾರೆ. ಇದು ದಿನೇಶ್ ಕಾರ್ತಿಕ್‌ಗೆ ಮಾತ್ರವಲ್ಲ ಅವರ ಆಟವನ್ನು ಮೆಚ್ಚಿಕೊಂಡ ಅಭಿಮಾನಿಗಳಿಗೂ ಖುಷಿ ನೀಡಿದೆ.

ಇದನ್ನೂ ಓದಿ
Image
ICC Award: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದು ಇತಿಹಾಸ ಸೃಷ್ಟಿಸಿದ ಜಿಂಬಾಬ್ವೆ ಆಟಗಾರ..!
Image
ರಿಜ್ವಾನ್ ಬದಲಿಗೆ ಸರ್ಫರಾಜ್​ಗೆ ಅವಕಾಶ; ಪಾಕ್ ತಂಡದ ಅರ್ಧದಷ್ಟು ಆಟಗಾರರಿಗೆ ಕೋಕ್..!
Image
ರಾಂಚಿ ಕ್ರಿಕೆಟ್ ಕ್ರೀಡಾಂಗಣದ ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಕೋಚ್; ಸ್ಥಿತಿ ಗಂಭೀರ
Image
ENG vs SA: 3 ದಿನಗಳಲ್ಲೇ ಓವಲ್ ಟೆಸ್ಟ್ ಗೆದ್ದ ಇಂಗ್ಲೆಂಡ್; 2-1 ರಿಂದ ಸರಣಿ ಸೋತ ಸೌತ್ ಆಫ್ರಿಕಾ

ಟೀಮ್ ಇಂಡಿಯಾಕ್ಕೆ ಕಮ್​ಬ್ಯಾಕ್ ಮಾಡಬೇಕು, 2022 ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯಬೇಕು ಎಂಬುದು ನನ್ನ ಕನಸು ಎಂದು ಕಾರ್ತಿಕ್ ಈ ಹಿಂದೆಯೇ ಹೇಳಿದ್ದರು. ಇದಕ್ಕಾಗಿ ತರಬೇತಿಯನ್ನು ಕೂಡ ಪಡೆದುಕೊಂಡಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿ ಆರ್​ಸಿಬಿ ತಂಡದ ಪರವಾಗಿ ಆಡಿದ್ದ ದಿನೇಶ್ ಕಾರ್ತಿಕ್‌ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ತಮಗೆ ನೀಡಿದ್ದ ಫಿನಿಶರ್ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.

ಐಪಿಎಲ್​ 2022 ರಲ್ಲಿ ನೀಡಿದ ಅಮೋಘ ಪ್ರದರ್ಶನದಿಂದ ಬಿಸಿಸಿಐ ಇವರನ್ನು ಟೀಮ್ ಇಂಡಿಯಾಕ್ಕೆ ಮತ್ತೆ ಆಯ್ಕೆ ಮಾಡಿತು. ಈ ಮೂಲಕ ಮೂರು ವರ್ಷಗಳ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಾಪಸ್ ಮರಳಿದರು. ರಾಷ್ಟ್ರೀಯ ತಂಡದಲ್ಲೂ ಕಾರ್ತಿಕ್ ಅಬ್ಬರಿಸಿದರು. ಇದೀಗ ಪಟ್ಟ ಶ್ರಮಕ್ಕೆ ಫಲ ಸಿಕ್ಕಿದ್ದು ಟಿ20 ವಿಶ್ವಕಪ್​ಗೆ ಆಯ್ಕೆ ಆಗಿದ್ದಾರೆ. ಇಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ನೋಡಬೇಕಿದೆ.

ಜಡೇಜಾ ಔಟ್:

ಏಷ್ಯಾ ಕಪ್ ಟೂರ್ನಿಯ ಮಧ್ಯೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಲ್​ರೌಂಡರ್ ರವೀಂದ್ರ ಜಡೇಜಾ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ಸರ್ಜರಿಗೆ ಒಳಗಾಗಿರುವ ಜಡೇಜಾ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ವಿಶ್ವಕಪ್​ಗೆ ಇನ್ನೂ ಕೇವಲ 5 ವಾರಗಳು ಬಾಕಿ ಇರುವ ಕಾರಣ ಜಡೇಜಾ ಲಭ್ಯತೆ ಅನುಮಾನದ ಕಾರಣ ಅವರ ಬದಲಾಗಿ ಅಕ್ಷರ್ ಪಟೇಲ್​ಗೆ ಅವಕಾಶ ನೀಡಲಾಗಿದೆ. ಅಂತೆಯೆ ಅರ್ಷ್​ದೀಪ್​ ಸಿಂಗ್​ಗೆ ಅವಕಾಶ ನೀಡಲಾಗಿದ್ದು ಆವೇಶ್ ಖಾನ್ ಅವರನ್ನು ಹೊರಗಿಡಲಾಗಿದೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್​ಪ್ರೀತ್ ತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್​ದೀಪ್ ಸಿಂಗ್.

ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ದೀಪಕ್ ಚಹಾರ್.

Published On - 7:52 am, Tue, 13 September 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?