Dinesh Karthik: 4,4,6,6,1: ಫಿನಿಶರ್ ದಿನೇಶ್ ಕಾರ್ತಿಕ್ ಸ್ಫೋಟಕ ಆಟ ಕಂಡು ಅಭಿಮಾನಿಗಳು ಏನಂದ್ರು ನೋಡಿ

IND vs SA: ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲೂ ದಿನೇಶ್ ಕಾರ್ತಿಕ್ (Dinesh Karthik) ಮಾತ್ರ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಕೇವಲ 21 ಎಸೆತಗಳಲ್ಲಿ 2 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 30 ರನ್ ಚಚ್ಚಿದರು. ಇದರಿಂದಲೇ ಭಾರತದ ಸ್ಕೋರ್ 140 ರನ್ ಗಡಿ ದಾಟಿತು ಎನ್ನಬಹುದು.

Dinesh Karthik: 4,4,6,6,1: ಫಿನಿಶರ್ ದಿನೇಶ್ ಕಾರ್ತಿಕ್ ಸ್ಫೋಟಕ ಆಟ ಕಂಡು ಅಭಿಮಾನಿಗಳು ಏನಂದ್ರು ನೋಡಿ
Dinesh Karthik IND vs SA 2nd T20I
Follow us
| Updated By: Vinay Bhat

Updated on: Jun 13, 2022 | 10:38 AM

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ ಸ್ಫೋಟಕ ಆಟವಾಡಿದ್ದ ಭಾರತ (India vs South Africa) ದ್ವಿತೀಯ ಪಂದ್ಯದಲ್ಲಿ ಸಂಪೂರ್ಣ ವೈಫಲ್ಯ ಅನುಭವಿಸಿತು. 200ಕ್ಕೂ ಅಧಿಕ ರನ್ ಸಿಡಿಸಿದ್ದ ಟೀಮ್ ಇಂಡಿಯಾ ಎರಡನೇ ಟಿ20 ಪಂದ್ಯದಲ್ಲಿ ಗಳಿಸಿದ್ದು ಕೇವಲ 148 ರನ್. ಈ ಟಾರ್ಗೆಟ್ ಆಫ್ರಿಕಾನ್ನರಿಗೆ ದೊಡ್ಡ ಸವಾಲಾಗಿ ಪರಿಣಮಿಸಲೇ ಇಲ್ಲ. ಆರಂಭದಲ್ಲಿ ವಿಕೆಟ್ ಕಳೆದುಕೊಂಡರೂ ನಂತರ ಹೆನ್ರಿಚ್ ಕ್ಲಾಸೆನ್ ಅವರು ಪಂತ್ ಪಡೆಯ ಬೆವರಿಳಿಸಿ ಬಿಟ್ಟರು. ಭಾರತ ಪರ ಬ್ಯಾಟಿಂಗ್​ನಲ್ಲಿ ಶ್ರೇಯಸ್ ಅಯ್ಯರ್ (Shreyas Iyer) 35 ಎಸೆತಗಳಲ್ಲಿ 40 ರನ್​ಗಳ ಕಾಣಿಕೆ ನೀಡಿದರೆ, ದಿನೇಶ್ ಕಾರ್ತಿಕ್ (Dinesh Karthik) ಮಾತ್ರ ತಮ್ಮ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. 37 ವರ್ಷ ಪ್ರಾಯದ ಕಾರ್ತಿಕ್ ಕೇವಲ 21 ಎಸೆತಗಳಲ್ಲಿ 2 ಫೋರ್, 2 ಸಿಕ್ಸರ್ ಸಿಡಿಸಿ ಅಜೇಯ 30 ರನ್ ಚಚ್ಚಿದರು. ಇದರಿಂದಲೇ ಭಾರತದ ಸ್ಕೋರ್ 140 ರನ್ ಗಡಿ ದಾಟಿತು ಎನ್ನಬಹುದು.

ಅಂತಿಮ ಹಂತದಲ್ಲಿ ಭಾರತದ ವಿಕೆಟ್​ಗಳು ಸರಾಗವಾಗಿ ಕಳೆದುಕೊಳ್ಳುತ್ತಿದ್ದ ಕಾರಣ ದಿನೇಶ್ ಕಾರ್ತಿಕ್ ಕೊನೆಯ ಓವರ್ ವರೆಗೂ ಸಾಗೋಣ ಎಂಬ ಕಾರಣಕ್ಕೆ ನಿಧಾನಗತಿಯ ಆಟಕ್ಕೆ ಮುಂದಾದರು. ಮೊದಲ 16 ಎಸೆತಗಳಲ್ಲಿ ಡಿಕೆ ಕಲೆಹಾಕಿದ್ದು ಕೇವಲ 9 ರನ್​ಗಳನ್ನಷ್ಟೆ. ಇವರಿಗೆ ಹರ್ಷಲ್ ಪಟೇಲ್ ಕೂಡ ಉತ್ತಮ ಸಾಥ್ ನೀಡಿದರು ಎಂಬುದನ್ನು ಮರೆಯುವಂತಿಲ್ಲ. ಕೊನೆಯ ಓವರ್​ಗೂ ಮುನ್ನ ದಿನೇಶ್ 18 ಎಸೆತಗಳಲ್ಲಿ 17 ರನ್ ಗಳಿಸಿದ್ದರು.

ಇದನ್ನೂ ಓದಿ
Image
IND vs SA: ಟೀಮ್ ಇಂಡಿಯಾ ಸೋಲಿಗೆ ಕಾರಣವಾಗಿದ್ದೇ ಈ ಮೂರು ಅಂಶಗಳು
Image
IPL 2023: ಐಪಿಎಲ್​ ಪ್ರತಿ ಪಂದ್ಯದ ಪ್ರಸಾರ ಹಕ್ಕು 105 ಕೋಟಿಗೆ ಮಾರಾಟ: ಇನ್ನೂ ಮುಗಿದಿಲ್ಲ..!
Image
Team India: ಟೀಮ್ ಇಂಡಿಯಾದ ಅತ್ಯಂತ ಕಿರಿಯ ನಾಯಕ ಯಾರು ಗೊತ್ತಾ?
Image
India vs South Africa 2nd T20 Highlights: ಮತ್ತೆ ಎಡವಿದ ಭಾರತ; 2ನೇ ಟಿ20ಯಲ್ಲೂ ಆಫ್ರಿಕಾಗೆ ಸುಲಭ ಜಯ

Rishabh Pant: ಸತತ 2ನೇ ಸೋಲಿನ ಬಳಿಕ ಶಾಕಿಂಗ್ ಹೇಳಿಕೆ ನೀಡಿದ ರಿಷಭ್ ಪಂತ್: ಏನಂದ್ರು ಗೊತ್ತೇ?

20ನೇ ಓವರ್​ನ ಡ್ವೇನ್ ಪ್ರೆಟೋರಿಯಸ್ ಬೌಲಿಂಗ್​ನ ಮೊದಲ ಎಸೆತದಲ್ಲಿ ಹರ್ಷಲ್ ಫೋರ್ ಬಾರಿಸಿದರೆ, ಎರಡನೇ ಎಸೆತ ಡಾಟ್ ಆಯಿತು. ಮೂರನೇ ಎಸೆತದಲ್ಲಿ ಸಿಂಗಲ್ ರನ್ ಕಲೆಹಾಕಿದರು. ಮುಂದಿನ ಮೂರು ಎಸೆತದಲ್ಲಿ ಕಾರ್ತಿಕ್ 13 ರನ್ ಸಿಡಿಸಿದರು. 4ನೇ ಎಸೆತದಲ್ಲಿ ಮಿಡ್ ಆಫ್ ಮೂಲಕ ಸಿಕ್ಸರ್ ಬಾರಿಸಿದರೆ, 5ನೇ ಎಸೆತದಲ್ಲಿ ನೇರವಾಗಿ ಮತ್ತೊಂದು ಸಿಕ್ಸರ್ ಚಚ್ಚಿದರು. ಕೊನೆಯ ಎಸೆತದಲ್ಲಿ ಸರಿಯಾಗಿ ಕನೆಕ್ಟ್ ಆಗದ ಕಾರಣ ಒಂದು ರನ್ ಮೂಡಿಬಂತು. ಹೀಗೆ ಕೊನೆಯ ಓವರ್​ನಲ್ಲಿ ಒಟ್ಟಾರೆಯಾಗಿ 20 ರನ್​ಗಳು ಹರಿದುಬಂದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲಿಗೆ ಫೀಲ್ಡಿಂಗ್ ಅನ್ನು ಆಯ್ಕೆ ಮಾಡಿಕೊಂಡಿತು. ಪಂದ್ಯದ ಮೊದಲ ಓವರ್‌ ನಲ್ಲಿಯೇ ರುತುರಾಜ್ ಗಾಯಕವಾಡ್ ಔಟಾದರು. ಇಶಾನ್‌ ಕಿಶನ್‌ ಮೊದಲ ಪಂದ್ಯದ ಲಯದಲ್ಲೇ ಸಾಗಿದರು. ಇಶಾನ್‌ ಗಳಿಕೆ 21 ಎಸೆತಗಳಿಂದ 34 ರನ್‌ (4 ಬೌಂಡರಿ, 3 ಸಿಕ್ಸರ್‌). ಬೆನ್ನಲ್ಲೇ ರಿಷಭ್‌ ಪಂತ್‌ ಕೂಡ (5) ಪೆವಿಲಿಯನ್‌ ಸೇರಿಕೊಂಡರು. ಹಾರ್ದಿಕ್‌ ಪಾಂಡ್ಯ ಮೇಲಿನ ನಿರೀಕ್ಷೆ ಹುಸಿಯಾಯಿತುದಿನೇಶ್‌ ಕಾರ್ತಿಕ್‌-ಹರ್ಷಲ್‌ ಪಟೇಲ್‌ ಕೊನೆಯ 3 ಓವರ್‌ಗಳಲ್ಲಿ 36 ರನ್‌ ಪೇರಿಸಿ ಮೊತ್ತವನ್ನು 148ಕ್ಕೆ ಏರಿಸುವಲ್ಲಿ ಯಶಸ್ವಿಯಾದರು.

149 ರನ್‌ಗಳ ಪೈಪೋಟಿ ಮೊತ್ತ ಕಲೆಹಾಕಿದ ಸೌತ್‌ ಆಫ್ರಿಕಾ ಸಹ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಆರಂಭಿಕರಾಗಿ ಬಂದ ರೀಜಾ಼ ಹೆಂಡ್ರಿಕ್ಸ್‌(4), ಡ್ವೇನ್‌ ಪ್ರಿಟೋರಿಯಸ್‌(4) ಹಾಗೂ ದುಸೇನ್‌(1) ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು. ಪರಿಣಾಮ 29 ರನ್‌ಗಳಿಗೆ 3 ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿತು. ಈ ಹಂತದಲ್ಲಿ ಬಂದ ಹೆನ್ರಿಚ್‌ ಕ್ಲಾಸೇನ್‌ 81 ರನ್‌(46 ಬಾಲ್‌, 7 ಬೌಂಡರಿ, 5 ಸಿಕ್ಸ್‌) ಸ್ಪೋಟಕ ಬ್ಯಾಟಿಂಗ್‌ ಪ್ರದರ್ಶಿಸಿದರು. ಭಾರತದ ಬೌಲರ್‌ಗಳ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ ಕ್ಲಾಸೇನ್‌, ಬಿರುಸಿನ ಅರ್ಧಶತಕ ಸಿಡಿಸಿ ತಂಡದ ಗೆಲುವಿನ ರೂವಾರಿಯಾದರು. ಕೊನೆ ಹಂತದಲ್ಲಿ ಡೇವಿಡ್‌ ಮಿಲ್ಲರ್‌ ಅಜೇಯ 20 ರನ್‌ಗಳಿಸಿ ತಂಡವನ್ನ ಗೆಲುವಿನ ದಡಸೇರಿಸುವಲ್ಲಿ ಯಶಸ್ವಿಯಾದರು.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು