AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಹೆಸರಿಸಿದ ಡಿಕೆ

ODI World Cup 2027: ಐಸಿಸಿ ಪುರುಷರ ಏಕದಿನ ವಿಶ್ವಕಪ್ ಟೂರ್ನಿಯು 2027ರ ಅಕ್ಟೋಬರ್ 4 ರಿಂದ ನವೆಂಬರ್ 21 ರವರೆಗೆ ನಡೆಯಲಿದೆ. ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಗೆ ಭಾರತ ತಂಡ ಹೇಗಿರಬೇಕೆಂದು ತಿಳಿಸಿದ್ದಾರೆ ದಿನೇಶ್ ಕಾರ್ತಿಕ್.

ಏಕದಿನ ವಿಶ್ವಕಪ್​ಗೆ ಬಲಿಷ್ಠ ಭಾರತ ತಂಡ ಹೆಸರಿಸಿದ ಡಿಕೆ
Dinesh KarthikImage Credit source: rcb
ಝಾಹಿರ್ ಯೂಸುಫ್
|

Updated on: Aug 01, 2026 | 12:34 PM

Share

ಸೌತ್ ಆಫ್ರಿಕಾ, ಝಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಜಂಟಿಯಾಗಿ ಆಯೋಜನೆಯಾಗಲಿರುವ 2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ಭಾರತ ತಂಡ ಹೇಗಿರಬೇಕೆಂದು ತಿಳಿಸಿದ್ದಾರೆ ಟೀಮ್ ಇಂಡಿಯಾದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್. ಆರ್‌ಸಿಬಿ ತಂಡದ ಮೆಂಟರ್ ಡಿಕೆ ಮುಂಬರುವ ವಿಶ್ವಕಪ್​ಗೆ 15 ಸದಸ್ಯರ ಸಂಭಾವ್ಯ ತಂಡವನ್ನು ಪ್ರಕಟಿಸಿದ್ದಾರೆ. ಅನುಭವಿ ಹಾಗೂ ಯುವ ಆಟಗಾರರನ್ನು ಒಳಗೊಂಡಿರುವ ಈ ತಂಡದಲ್ಲಿ ಸ್ಥಾನ ಪಡೆದಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

  • ಆರಂಭಿಕ ಆಟಗಾರರು: ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್.
  • ಮಧ್ಯಮ ಕ್ರಮಾಂಕ: ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್
  • ವಿಕೆಟ್ ಕೀಪರ್‌ಗಳು: ಕೆ.ಎಲ್ ರಾಹುಲ್, ಇಶಾನ್ ಕಿಶನ್.
  • ಆಲ್-ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ನಿತೀಶ್ ಕುಮಾರ್ ರೆಡ್ಡಿ
  • ಸ್ಪಿನ್ ಬೌಲರ್: ಕುಲ್ದೀಪ್ ಯಾದವ್.
  • ವೇಗದ ಬೌಲರ್​ಗಳು: ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಭುವನೇಶ್ವರ ಕುಮಾರ್.

ದಿನೇಶ್ ಕಾರ್ತಿಕ್ ಹೆಸರಿಸಿರುವ 15 ಸದಸ್ಯರುಗಳ ತಂಡದಲ್ಲಿ ಅನುಭವಿ ಆಟಗಾರರ ದಂಡೇ ಇದೆ. ಇವರಲ್ಲಿ ಕೆಲವರು ಪ್ರಸ್ತುತ ಟೀಮ್ ಇಂಡಿಯಾದ ಭಾಗವಾಗಿಲ್ಲ ಎಂಬುದು ವಿಶೇಷ. ಹೀಗಾಗಿಯೇ ಡಿಕೆ ಹೆಸರಿಸಿರುವ ಈ ತಂಡವು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ರೋಹಿತ್-ವಿರಾಟ್ ಫಿಟ್‌ನೆಸ್ ಮೇಲೆ ಭರವಸೆ:

2027ರ ಹೊತ್ತಿಗೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರಿಗೂ ವಯಸ್ಸು 38 ದಾಟಲಿದ್ದರೂ, ಅವರ ಅನುಭವ ತಂಡಕ್ಕೆ ಅತಿ ಅಗತ್ಯ ಎಂದು ಕಾರ್ತಿಕ್ ನಂಬಿದ್ದಾರೆ.

“ರೋಹಿತ್ ಮತ್ತು ವಿರಾಟ್ ತಂಡದಲ್ಲಿದ್ದರೆ ಯಾವುದೇ ಆತಂಕ ಇರುವುದಿಲ್ಲ, ಒತ್ತಡದ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ಅವರಿಗೆ ಚೆನ್ನಾಗಿ ತಿಳಿದಿದೆ,” ಎಂದು ಈ ಹಿಂದೆ ಕಾರ್ತಿಕ್ ಅಭಿಪ್ರಾಯಪಟ್ಟಿದ್ದಾರೆ.

ಭುವಿ, ಶಮಿ ಅಚ್ಚರಿಯ ಆಯ್ಕೆ!

ದಿನೇಶ್ ಕಾರ್ತಿಕ್ ಅವರ ತಂಡದಲ್ಲಿ ಅತ್ಯಂತ ದೊಡ್ಡ ಅಚ್ಚರಿಯೆಂದರೆ ಅನುಭವಿ ವೇಗಿಗಳಾದ ಭುವನೇಶ್ವರ ಕುಮಾರ್ ಹಾಗೂ ಮೊಹಮ್ಮದ್ ಶಮಿಯ ಸೇರ್ಪಡೆ. ದೀರ್ಘಕಾಲದಿಂದ ಏಕದಿನ ಕ್ರಿಕೆಟ್‌ನಿಂದ ದೂರವಿರುವ ‘ಭುವಿ’ ಅವರ ಸ್ವಿಂಗ್ ಬೌಲಿಂಗ್ ಸೌತ್ ಆಫ್ರಿಕಾದ ಪಿಚ್‌ಗಳಲ್ಲಿ ನೆರವಾಗಲಿದೆ ಎಂಬುದು ಡಿಕೆ ಲೆಕ್ಕಾಚಾರ.

ಹಾಗೆಯೇ ಟೀಮ್ ಇಂಡಿಯಾದಿಂದ ಈಗಾಗಲೇ ಹೊರಬಿದ್ದಿರುವ ಮೊಹಮ್ಮದ್ ಶಮಿ ಅವರ ಅನುಭವ ವಿಶ್ವಕಪ್​ನಂತಹ ಟೂರ್ನಿಗಳಲ್ಲಿ ಅತ್ಯಗತ್ಯ ಎಂದು ದಿನೇಶ್ ಕಾರ್ತಿಕ್ ಹೇಳಿದ್ದಾರೆ.

ಅಂದರೆ ದಿನೇಶ್ ಕಾರ್ತಿಕ್ ಅವರ ಪ್ರಕಾರ, ಏಕದಿನ ವಿಶ್ವಕಪ್​ನಂತಹ ದೊಡ್ಡ ಟೂರ್ನಿ ಗೆಲ್ಲಬೇಕಿದ್ದರೆ ಅನುಭವಿ ಆಟಗಾರರು ಅತ್ಯಗತ್ಯ. ಅದರಲ್ಲೂ ಅನುಭವಿ ಬೌಲರ್​ಗಳು ತಂಡದಲ್ಲಿ ಇರಬೇಕೆಂದು ತಿಳಿಸಿದ್ದಾರೆ. ಹೀಗಾಗಿಯೇ ಡಿಕೆ ತಮ್ಮ ತಂಡದಲ್ಲಿ ವೇಗದ ಬೌಲರ್​ಗಳಾಗಿ ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ಭುವನೇಶ್ವರ ಕುಮಾರ್ ಅವರನ್ನು ಆಯ್ಕೆ ಮಾಡಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ದಿನೇಶ್ ಕಾರ್ತಿಕ್ ಆರಿಸಿರುವ ಈ 15 ಸದಸ್ಯರ ಬಲಿಷ್ಠ ಪಡೆ ಕೇವಲ ಕಾಗದದ ಮೇಲಷ್ಟೇ ಅಲ್ಲ, ಮೈದಾನದಲ್ಲೂ ಎದುರಾಳಿಗಳಿಗೆ ನಡುಕ ಹುಟ್ಟಿಸಬಲ್ಲ ಸಾಮರ್ಥ್ಯ ಹೊಂದಿದೆ. ಗಿಲ್ ಅವರ ಯುವ ನಾಯಕತ್ವ, ರೋಹಿತ್-ವಿರಾಟ್ ಅವರ ಅಪಾರ ಅನುಭವ ಹಾಗೂ ಬುಮ್ರಾ-ಶಮಿ ಅವರ ವೇಗದ ದಾಳಿ ತಂಡದ ಅತಿ ದೊಡ್ಡ ಬಲವಾಗಿದೆ. ಈ ಸಮತೋಲಿತ ಸಂಯೋಜನೆಯೊಂದಿಗೆ ಕಣಕ್ಕಿಳಿದರೆ, 2027ರ ವಿಶ್ವಕಪ್‌ನಲ್ಲಿ ಭಾರತ ತಂಡ ಟ್ರೋಫಿ ಎತ್ತಿ ಹಿಡಿಯುವುದು ಬಹುತೇಕ ಖಚಿತ ಎಂದೇ ಹೇಳಬಹುದು.

ಇದನ್ನೂ ಓದಿ: ಭಾರತ vs ಬ್ರೆಝಿಲ್ ಪಂದ್ಯಕ್ಕೆ ಡೇಟ್ ಫಿಕ್ಸ್​!

DK’s ಏಕದಿನ ವಿಶ್ವಕಪ್ ಭಾರತ ತಂಡ: ಶುಭ್‌ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್ (ಕೆಎಲ್ ರಾಹುಲ್), ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ ಮತ್ತು ಭುವನೇಶ್ವರ ಕುಮಾರ್.

Follow Us
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ