AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಬರೀ RCB ಆಟಗಾರರನ್ನ ಮಾತ್ರ ಆಯ್ಕೆ ಮಾಡಿದ್ದೀರಿ: ಆಸ್ಟ್ರೇಲಿಯಾ ತಂಡದ ಕಾಲೆಳೆದ DK

Dinesh Karthik: ವಿಶೇಷ ಎಂದರೆ ಈ ಬಾರಿಯ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆದಿರುವ ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಸಹ ಆಟಗಾರರಾದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಜೋಶ್ ಹ್ಯಾಝಲ್​ವುಡ್​ ಅವರನ್ನು ಎದುರಿಸಲಿದ್ದಾರೆ.

Dinesh Karthik: ಬರೀ RCB ಆಟಗಾರರನ್ನ ಮಾತ್ರ ಆಯ್ಕೆ ಮಾಡಿದ್ದೀರಿ: ಆಸ್ಟ್ರೇಲಿಯಾ ತಂಡದ ಕಾಲೆಳೆದ DK
Dinesh Karthik
TV9 Web
| Edited By: |

Updated on: Sep 15, 2022 | 1:29 PM

Share

ಟೀಮ್ ಇಂಡಿಯಾದ (Team India) ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ದಿನೇಶ್ ಕಾರ್ತಿಕ್ (Dinesh Karthik) ಮಾಡಿರುವ ಟ್ವೀಟ್​ವೊಂದು ಇದೀಗ ಸಿಕ್ಕಾಪಟ್ಟೆ ವೈರಲ್ ಆಗಿದೆ. ಹೀಗೆ ವೈರಲ್ ಆಗಲು ಕಾರಣ ಡಿಕೆ ಆಸ್ಟ್ರೇಲಿಯಾ ತಂಡವನ್ನು ಕಾಲೆಳೆದಿರುವುದು. ಅಂದರೆ ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಟಿ20 ವಿಶ್ವಕಪ್ ಜೆರ್ಸಿಯನ್ನು ಅನಾವರಣಗೊಳಿಸಿದೆ. ಈ ಜೆರ್ಸಿಯ ಫೋಟೋಶೂಟ್​ನಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್, ಜೋಶ್ ಹ್ಯಾಝಲ್​ವುಡ್ ಹಾಗೂ ಮಿಚೆಲ್ ಸ್ಟಾರ್ಕ್​ ಕಾಣಿಸಿಕೊಂಡಿದ್ದರು.ಇದನ್ನೇ ಪ್ರಸ್ತಾಪಿಸಿರುವ ದಿನೇಶ್ ಕಾರ್ತಿಕ್, ಕೇವಲ ಆರ್​ಸಿಬಿ ಆಟಗಾರರನ್ನು ಮಾತ್ರವಲ್ಲ, ಇತರ ಫ್ರಾಂಚೈಸಿಗಳ ಆಟಗಾರರನ್ನು ಆಯ್ಕೆ ಮಾಡಬೇಕು ಎಂಬಾರ್ಥದಲ್ಲಿ ಕಿಚಾಯಿಸಿದ್ದಾರೆ.

ಅಂದರೆ ಇಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಜೋಶ್ ಹ್ಯಾಝಲ್​ವುಡ್​ ಪ್ರಸ್ತುತ ಆರ್​ಸಿಬಿ ತಂಡದ ಸದಸ್ಯರು. ಇನ್ನು ಮಿಚೆಲ್ ಸ್ಟಾರ್ಕ್​ ಕೊನೆಯ ಬಾರಿ ಐಪಿಎಲ್​ ಆಡಿದ್ದು ಆರ್​ಸಿಬಿ ಪರ. ಹೀಗಾಗಿಯೇ ದಿನೇಶ್ ಕಾರ್ತಿಕ್ ಆರ್​ಸಿಬಿ ಆಟಗಾರರನ್ನು ಮಾತ್ರ ಆಯ್ಕೆ ಮಾಡಿದ್ದೀರಿ. ಇನ್ನಿತರ ಫ್ರಾಂಚೈಸಿಗಳಲ್ಲಿರುವ ಆಟಗಾರರನ್ನು ಕೂಡ ಆಯ್ಕೆ ಮಾಡಿ ಎಂದು ಟ್ವಿಟರ್ ಮೂಲಕ ಕಾಲೆಳೆದಿದ್ದಾರೆ.

ಇದೀಗ ದಿನೇಶ್ ಕಾರ್ತಿಕ್ ಅವರ ಈ ಟ್ವೀಟ್​ನೊಂದಿಗೆ ಗ್ಲೆನ್ ಮ್ಯಾಕ್ಸ್​ವೆಲ್, ಜೋಶ್ ಹ್ಯಾಝಲ್​ವುಡ್ ಹಾಗೂ ಮಿಚೆಲ್ ಸ್ಟಾರ್ಕ್​ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಅನೇಕರು ಡಿಕೆಯ ಹಾಸ್ಯಪ್ರಜ್ಞೆಗೆ ಮೆಚ್ಚುಗೆಗಳನ್ನು ಸೂಚಿಸಿದ್ದಾರೆ.

ಇದನ್ನೂ ಓದಿ
Image
Team India: ಟೀಮ್ ಇಂಡಿಯಾ ಆಟಗಾರರ ಜೊತೆ ಕಾಣಿಸಿಕೊಂಡ ಸ್ಟಾರ್ ಕ್ರಿಕೆಟಿಗನ ಮಗ..!
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವಿಶೇಷ ಎಂದರೆ ಈ ಬಾರಿಯ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆದಿರುವ ದಿನೇಶ್ ಕಾರ್ತಿಕ್ ಆರ್​ಸಿಬಿ ತಂಡದ ಸಹ ಆಟಗಾರರಾದ ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಜೋಶ್ ಹ್ಯಾಝಲ್​ವುಡ್​ ಅವರನ್ನು ಎದುರಿಸಲಿದ್ದಾರೆ. ಅದರಲ್ಲೂ ಡೆತ್ ಓವರ್​ಗಳಲ್ಲಿ ಹ್ಯಾಝಲ್​ವುಡ್​ ಟು ಡಿಕೆ ಕದನವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕೂಡ ಕಾತುರದಿಂದ ಕಾಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ