IPL 2022 ವೀಕ್ಷಣೆಯಲ್ಲಿ ಹೊಸ ದಾಖಲೆ: ಆರ್​ಸಿಬಿಯ ಆ ಪಂದ್ಯ ನೋಡಿದ್ದು ಎಷ್ಟು ಮಂದಿ ಗೊತ್ತೇ?

RCB: ಎರಡು ಹೊಸ ತಂಡಗಳು ಹಾಗೂ ಮೆಗಾ ಹರಾಜಿನ ಬಳಿಕ ಈ ಬಾರಿಯ ಐಪಿಎಲ್ 2022 ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ, ಅಚ್ಚರಿ ಎಂಬಂತೆ ಈ ಋತುವಿನಲ್ಲಿ ಐಪಿಎಲ್ ವೀಕ್ಷಕರ ಸಂಖ್ಯೆಯಲ್ಲಿ ಭಾರಿ ಕುಸಿತ ದಾಖಲಾಗಿದೆ. ಹೀಗಿರಯವಾಗ ಆರ್​ಸಿಬಿ ಹಾಗೂ ಲಖನೌ ನಡುವಿನ ಎಲಿಮಿನೇಟರ್​​ ಪಂದ್ಯ ವೀಕ್ಷಣೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ.

IPL 2022 ವೀಕ್ಷಣೆಯಲ್ಲಿ ಹೊಸ ದಾಖಲೆ: ಆರ್​ಸಿಬಿಯ ಆ ಪಂದ್ಯ ನೋಡಿದ್ದು ಎಷ್ಟು ಮಂದಿ ಗೊತ್ತೇ?
RCB IPL 2022
Follow us
| Updated By: Vinay Bhat

Updated on:May 28, 2022 | 12:56 PM

ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿಯ ಅಂತಿಮ ಹಂತಕ್ಕೆ ಬಂದು ನಿಂತಿದೆ. ಮೇ. 29 ರಂದು ಗುಜರಾತ್ ಟೈಟಾನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (GT vs RR) ನಡುವೆ ಫೈನಲ್ ಫೈಟ್ ನಡೆಯುವ ಮೂಲಕ ಐಪಿಎಲ್ 2022ಕ್ಕೆ (IPL 2022) ತೆರೆ ಬೀಳಲಿದೆ. ಎರಡು ಹೊಸ ತಂಡಗಳು ಹಾಗೂ ಮೆಗಾ ಹರಾಜಿನ ಬಳಿಕ ಈ ಬಾರಿಯ ಐಪಿಎಲ್ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿತ್ತು. ಆದರೆ, ಅಚ್ಚರಿ ಎಂಬಂತೆ ಈ ಋತುವಿನಲ್ಲಿ ಐಪಿಎಲ್ ವೀಕ್ಷಕರ ಸಂಖ್ಯೆಯಲ್ಲಿ ಭಾರಿ ಕುಸಿತ ದಾಖಲಾಗಿದೆ. ಟೂರ್ನಿ ಆರಂಭವಾದ ಮೊದಲ 2 ವಾರ ಕುಸಿತದ ಬಳಿಕ 3ನೇ ವಾರ ಚೇತರಿಸಿಕೊಂಡಿದ್ದ ಅಧಿಕೃತ ಪ್ರಸಾರಕರಾದ ಸ್ಟಾರ್‌ ಸ್ಪೋರ್ಟ್ಸ್ (Star Sports) ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌(ಟಿಆರ್‌ಪಿ), 4ನೇ ವಾರ ಮತ್ತೆ ಕುಸಿದಿತ್ತು. ಕಳೆದ ಆವೃತ್ತಿಗೆ ಹೋಲಿಸಿದರೆ ಈ ಆವೃತ್ತಿಯ 4ನೇ ವಾರ ಟಿಆರ್‌ಪಿ (TRP) ಶೇ.35ರಷ್ಟುಇಳಿಕೆ ಕಂಡಿತ್ತು. ಹೀಗಿರಯವಾಗ ಆರ್​ಸಿಬಿ (RCB) ಹಾಗೂ ಲಖನೌ ನಡುವಿನ ಎಲಿಮಿನೇಟರ್​​ ಪಂದ್ಯ ವೀಕ್ಷಣೆಯಲ್ಲಿ ಹೊಸ ದಾಖಲೆ ನಿರ್ಮಿಸಿದೆ.

ಸಾಕಷ್ಟು ರೋಚಕತೆ ಸೃಷ್ಟಿಸಿದ್ದ ಐಪಿಎಲ್ 2022ರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಖನೌ ಸೂಪರ್ ಜೇಂಟ್ಸ್ ನಡುವಿನ ಎಲಿಮಿನೇಟರ್​​​​​ ಪಂದ್ಯ ಹೊಸ ದಾಖಲೆ ಬರೆದಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಆರ್​ಸಿಬಿ ಭರ್ಜರಿ ಗೆಲುವು ಸಾಧಿಸಿತ್ತು. ಈ ತೀವ್ರ ಜಿದ್ದಿನ ಪಂದ್ಯವನ್ನ ಡಿಸ್ನಿ ಹಾಟ್​ಸ್ಟಾರ್​​ನಲ್ಲಿ ಬರೋಬ್ಬರಿ 8.7 ಮಿಲಿಯನ್​ ಮಂದಿ ವೀಕ್ಷಿಸಿದ್ದಾರೆ. ಇದು ಪ್ರಸಕ್ತ ಐಪಿಎಲ್​​​ನಲ್ಲಿ ಹೆಚ್ಚು ವೀಕ್ಷಣೆ ಪಡೆದ ಪಂದ್ಯ ಎಂಬ ಖ್ಯಾತಿಗೆ ಭಾಜನವಾಗಿದೆ.

ಆರ್​​ಸಿಬಿ-ಲಖನೌ ಪಂದ್ಯವನ್ನ 8.7 ಮಿಲಿಯನ್​​ ಮಂದಿ ನೋಡುವ ಮೂಲಕ ಚೆನ್ನೈ-ಮುಂಬೈ ಪಂದ್ಯದ ದಾಖಲೆ ಉಡೀಸ್ ಆಗಿದೆ. ಈ ಪಂದ್ಯವನ್ನ 8.3 ಮಿಲಿಮಂದಿ ಹಾಟ್​​ಸ್ಟಾರ್​​ನಲ್ಲಿ ವೀಕ್ಷಿಸಿದ್ದರು. ಈ ಪಂದ್ಯದಲ್ಲಿ ಧೋನಿ ಕೊನೆ ಓವರ್​​ನಲ್ಲಿ ಅಬ್ಬರಿಸಿ ಚೆನ್ನೈಗೆ ಗೆಲುವು ತಂದುಕೊಟ್ಟೊಇದ್ದರು. ಈ ಈ ಹಿಂದಿನ ದಾಖಲೆಯನ್ನು ಆರ್​ಸಿಬಿ-ಲಖನೌ ಪಂದ್ಯ ಅಳಿಸಿ ಹಾಕಿದೆ.

ಇದನ್ನೂ ಓದಿ
Image
Sanju Samson: ನಾವು ಆತನಿಗೋಸ್ಕರ ಕಪ್ ಗೆದ್ದೇ ಗೆಲ್ಲುತ್ತೇವೆ ಎಂದ ರಾಜಸ್ಥಾನ್ ರಾಯಲ್ಸ್
Image
Faf du Plessis: ಪಂದ್ಯ ಮುಗಿದ ಬಳಿಕ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಏನು ಹೇಳಿದ್ರು ಗೊತ್ತೇ?
Image
IPL 2022 Final: 14 ವರ್ಷಗಳ ನಂತರ ರಾಜಸ್ಥಾನ ಫೈನಲ್‌ಗೆ! ಟೇಬಲ್ ಟಾಪರ್ ಗುಜರಾತ್ ಮುಂದಿನ ಎದುರಾಳಿ
Image
RR vs RCB Qualifier 2, IPL 2022: ಐದು ಓವರ್‌, ಕೇವಲ 34 ರನ್, ಐದು ವಿಕೆಟ್! ಆರ್​ಸಿಬಿ ಸೋಲಿಗೆ ಕಾರಣವಿದು

Virat Kohli: ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ ಸಂಭ್ರಮಿಸಿದ್ದು ಹೇಗೆ ನೋಡಿ

ಕ್ವಾಲಿಫೈಯರ್- 2 ನಲ್ಲಿ ಆರ್​ಸಿಬಿಗೆ ಸೋಲು:

ಐಪಿಎಲ್ 2022 ರಲ್ಲಿ ಪ್ರಶಸ್ತಿ ಗೆಲ್ಲುವ ಕನಸು ಮತ್ತೆ ಆರ್​​ಸಿಬಿ ಪಾಲಿಗೆ ಕನಸಾಗಿಯೇ ಉಳಿದಿದೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್​​ಸಿಬಿಗೆ 7 ವಿಕೆಟ್ ಗಳ ಸೋಲಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿಗೆ ಪ್ರಮುಖ ಬ್ಯಾಟಿಗರು ಕೈ ಕೊಟ್ಟರು. ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ ವೆಲ್, ದಿನೇಶ್ ಕಾರ್ತಿಕ್ ವೈಫಲ್ಯ ಅನುಭವಿಸಿದರು. ನಾಯಕ ಫಾ ಡು ಪ್ಲೆಸಿಸ್ ನಿಧಾನಗತಿಯ ಇನಿಂಗ್ಸ್ ಆಗಿ 25 ರನ್ ಗಳಿಸಿದರೆ, ರಜತ್ ಪಟಿದಾರ್ 58 ರನ್ ಗಳ ಕಾಣಿಕೆ ನೀಡಿದರು. 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್ ಗಳಿಸಲಷ್ಟೇ ಶಕ್ತವಾಯಿತು.

ಇದು ರಾಜಸ್ಥಾನ್ ಬಲಿಷ್ಠ ಬ್ಯಾಟಿಂಗ್ ಎದುರು ಏನೇನೂ ಮೊತ್ತವಾಗಿರಲಿಲ್ಲ. ಮತ್ತೆ ಸಿಡಿದ ಜೋಸ್ ಬಟ್ಲರ್ ಭರ್ಜರಿ ಶತಕ ಸಿಡಿಸಿ 106 ರನ್ ಗಳಿಸಿ ಅಜೇಯರಾಗುಳಿದರು. ತಕ್ಕ ಸಾಥ್ ನೀಡಿದ ಯಶಸ್ವಿ ಜೈಸ್ವಾಲ್ 21, ಸಂಜು ಸ್ಯಾಮ್ಸನ್ 23 ರನ್ ಗಳ ಕೊಡುಗೆ ನೀಡಿದರು. ಇದರಿಂದಾಗಿ ರಾಜಸ್ಥಾನ್ 18.1 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 161 ರನ್ ಗಳಿಸುವ ಮೂಲಕ ಜಯ ಸಾಧಿಸಿ ಫೈನಲ್​ಗೆ ಪ್ರವೇಶ ಪಡೆದಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:56 pm, Sat, 28 May 22

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು