AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಂಗ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ..!

India A vs Afghanistan A: ಬ್ಯಾಕ್ ಟು ಬ್ಯಾಕ್ ಎರಡು ಮ್ಯಾಚ್​ಗಳಲ್ಲಿ ಸೋಲನುಭವಿಸಿರುವ ಭಾರತ ಎ ತಂಡವು ಇಂದು (ಜೂ.17) ಅಫ್ಘಾನಿಸ್ತಾನ್ ಎ ತಂಡವನ್ನು ಎದುರಿಸಲಿದೆ. ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಇಂದಿನ ಪಂದ್ಯದಲ್ಲಿ ಗೆದ್ದರೆ ಮಾತ್ರ ಭಾರತ ತಂಡ ಫೈನಲ್​ ರೇಸ್​ನಲ್ಲಿ ಉಳಿಯಬಹುದು.

ಯಂಗ್ ಇಂಡಿಯಾ ಪಾಲಿಗೆ ಇಂದು ನಿರ್ಣಾಯಕ ಪಂದ್ಯ..!
Team IndiaImage Credit source: BCCI
ಝಾಹಿರ್ ಯೂಸುಫ್
|

Updated on: Jun 17, 2026 | 8:23 AM

Share

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುತ್ತಿರುವ ತ್ರಿಕೋನ ಸರಣಿಯ 5ನೇ ಪಂದ್ಯದಲ್ಲಿ ಇಂದು (ಜೂನ್ 17) ತಿಲಕ್ ವರ್ಮಾ ನೇತೃತ್ವದ ಇಂಡಿಯಾ ‘ಎ’ ತಂಡವು ಇಮ್ರಾನ್ ಮಿರ್ ಸಾರಥ್ಯದ ಅಫ್ಘಾನಿಸ್ತಾನ್ ‘ಎ’ ತಂಡವನ್ನು ಎದುರಿಸಲಿದೆ. ಭಾರತ ತಂಡಕ್ಕೆ ಸರಣಿಯ ಫೈನಲ್ ರೇಸ್‌ನಲ್ಲಿ ಉಳಿಯಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಮ್ಯಾಚ್ ಟೀಮ್ ಇಂಡಿಯಾ ಪಾಲಿಗೆ ‘ಮಾಡೂ ಇಲ್ಲವೇ ಮಡಿ’ ಕದನವಾಗಿ ಮಾರ್ಪಟ್ಟಿದೆ.

ಟೀಮ್ ಇಂಡಿಯಾಗೆ ಸತತ ಸೋಲು:

ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಎ ವಿರುದ್ಧ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿದ್ದ ಭಾರತ ಎ ತಂಡವು, ಆ ನಂತರದ ಎರಡು ಪಂದ್ಯಗಳಲ್ಲಿ ಸೋಲನುಭವಿಸಿದೆ.

ಜೂನ್ 11 ರಂದು ನಡೆದ ಅಫ್ಘಾನಿಸ್ತಾನ್ ವಿರುದ್ಧದ ಮೊದಲ ಮುಖಾಮುಖಿಯಲ್ಲಿ ಭಾರತ 349 ರನ್‌ಗಳ ಬೃಹತ್ ಮೊತ್ತ ಪೇರಿಸಿದ್ದರೂ, ಮಳೆಯ ಕಾರಣದಿಂದಾಗಿ DLS ನಿಯಮದನ್ವಯ ಕೇವಲ 4 ರನ್‌ಗಳಿಂದ ಸೋಲೊಪ್ಪಿಕೊಂಡಿತ್ತು.

ಜೂನ್ 14 ರಂದು ನಡೆದ ಶ್ರೀಲಂಕಾ ‘ಎ’ ವಿರುದ್ಧದ ಪಂದ್ಯವು ಟೈ ಆದ ನಂತರ, ರೋಚಕ ‘ಸೂಪರ್ ಓವರ್’ನಲ್ಲಿ ಭಾರತ ಮತ್ತೊಮ್ಮೆ ಸೋಲಿನ ಸುಳಿಗೆ ಸಿಲುಕಿತು.  ಈ ಎರಡು ಸೋಲುಗಳಿಂದ ಕಂಗೆಟ್ಟಿರುವ ಟೀಮ್ ಇಂಡಿಯಾ ಫೈನಲ್ ರೇಸ್​ನಲ್ಲಿ ಉಳಿಯಲು ಇಂದು ಗೆಲ್ಲಲೇಬೇಕು.

ಅಂಕ ಪಟ್ಟಿಯ ಲೆಕ್ಕಾಚಾರ:

ಪ್ರಸ್ತುತ ಲೀಗ್ ಹಂತದಲ್ಲಿ ಭಾರತ 3 ಪಂದ್ಯಗಳಿಂದ ಕೇವಲ 2 ಅಂಕಗಳನ್ನು ಹೊಂದಿದ್ದು, ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಒಂದು ವೇಳೆ ಇಂದು ಭಾರತ ಸೋತರೆ, ಕೇವಲ 2 ಅಂಕಗಳೊಂದಿಗೆ ಟೂರ್ನಿಯಿಂದ ಹೊರಬೀಳಲಿದೆ.

ಅಫ್ಘಾನಿಸ್ತಾನ ಈಗಾಗಲೇ 2 ಅಂಕ ಹೊಂದಿದ್ದು, ಅವರಿಗೆ ಇನ್ನೂ ಒಂದು ಪಂದ್ಯ ಬಾಕಿ ಇರುವುದರಿಂದ ಇಂದಿನ ಪಂದ್ಯ ಗೆದ್ದರೆ ಅವರು ನೇರವಾಗಿ ಶ್ರೀಲಂಕಾ ಜೊತೆ ಫೈನಲ್ ಪ್ರವೇಶಿಸಲಿದ್ದಾರೆ.

ಆದ್ದರಿಂದ ಭಾರತ ಕೇವಲ ಗೆಲ್ಲುವುದಷ್ಟೇ ಅಲ್ಲದೆ, ಉತ್ತಮ ನೆಟ್ ರನ್ ರೇಟ್ ಕಾಯ್ದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಏಕೆಂದರೆ ಅಫ್ಘಾನಿಸ್ತಾನ್ ತಂಡಕ್ಕೆ ಇಂದಿನ ಪಂದ್ಯ ಹೊರತುಪಡಿಸಿ ಮತ್ತೊಂದು ಪಂದ್ಯವಿದೆ. ಹೀಗಾಗಿ ಇಂದಿನ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆಲುವಿನೊಂದಿಗೆ ನೆಟ್ ರನ್ ರೇಟ್ ಅನ್ನು ಟಾರ್ಗೆಟ್ ಮಾಡುವುದು ಅನಿವಾರ್ಯ.

ಅಫ್ಘಾನಿಸ್ತಾನ್ ಎ ತಂಡ: ಇಮ್ರಾನ್ ಮಿರ್ (ನಾಯಕ), ಹಸನ್ ಐಸಾಖಿಲ್, ಖಾಲಿದ್ ತನಿವಾಲ್, ಬಹಿರ್ ಶಾ, ಫರ್ಮಾನುಲ್ಲಾ ಸಫಿ, ಇಜಾಝ್ ಅಹ್ಮದ್ ಅಹ್ಮದ್‌ಝೈ, ಮೊಹಮ್ಮದ್ ಇಶಾಕ್ (ವಿಕೆಟ್ ಕೀಪರ್), ಶಮ್ಸ್ ಉರ್ ರೆಹಮಾನ್, ಅಬ್ದುಲ್ಲಾ ಅಹ್ಮದ್‌ಝಾಹಿ, ಝಹೀರ್ ಖಾನ್, ಖಲೀಲ್ ಗುರ್ಬಾಝ್, ನೂರ್ ಉಲ್ ರೆಹಮಾನ್, ಇಶಾಕ್ ರಹೀಮಿ, ಫೈಸಲ್ ಖಾನ್ಮೊ, ಮೊಹಮ್ಮದ್ ಇಬ್ರಾಹಿಂ.

ಇದನ್ನೂ ಓದಿ: ಮಿಂಚಿನಾಟದೊಂದಿಗೆ ಹೊಸ ಇತಿಹಾಸ ಬರೆದ ಎಂಬಾಪ್ಪೆ!

ಭಾರತ ಎ ತಂಡ: ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ, ರುತುರಾಜ್ ಗಾಯಕ್‌ವಾಡ್, ತಿಲಕ್ ವರ್ಮಾ (ನಾಯಕ), ಆಯುಷ್ ಬದೋನಿ, ನಿಶಾಂತ್ ಸಿಂಧು, ಸೂರ್ಯಾಂಶ್ ಶೆಡ್ಗೆ, ಅನ್ಕೂಲ್ ರಾಯ್, ವಿಪ್ರಾಜ್ ನಿಗಮ್, ಅರ್ಷದ್ ಖಾನ್, ಯಶ್ ಠಾಕೂರ್, ಅಂಶುಲ್ ಕಂಬೋಜ್, ಪ್ರಿಯಾಂಶ್ ಆರ್ಯ, ಕುಮಾರ್ ಕುಶಾಗ್ರ, ಅಶೋಕ್ ಶರ್ಮಾ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ