AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kagiso Rabada: ನಿಮಗೆ ಸಲ್ಮಾನ್ ಖಾನ್ ಗೊತ್ತಾ? ಎಂದು ಕೇಳಿದ ಆ್ಯಂಕರ್​​ಗೆ ರಬಾಡ ಎಪಿಕ್ ರಿಪ್ಲೇ

Do You Know Salman Khan?: ಶುಕ್ರವಾರ ಪಂಜಾಬ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡವನ್ನ ಎದುರಿಸಲಿದೆ. ಈ ಕಾದಾಟಕ್ಕೂ ಮುನ್ನ ಪಂಜಾಬ್ ಕಿಂಗ್ಸ್​ ತಂಡದ ವಿದೇಶಿ ಆಟಗಾರರು ಬಾಲಿವುಡ್ ಸಿನಿಮಾದ ಡೈಲಾಗ್ ಹೇಳಿ ಮಿಂಚಿದ್ದಾರೆ. ಇದರಲ್ಲಿ ಪ್ರಮುಖ ಹೈಲೇಟ್ ಆಗಿದ್ದು ಕಗಿಸೊ ರಬಾಡ.

Kagiso Rabada: ನಿಮಗೆ ಸಲ್ಮಾನ್ ಖಾನ್ ಗೊತ್ತಾ? ಎಂದು ಕೇಳಿದ ಆ್ಯಂಕರ್​​ಗೆ ರಬಾಡ ಎಪಿಕ್ ರಿಪ್ಲೇ
Kagiso Rabada IPL 2022
TV9 Web
| Edited By: |

Updated on: May 10, 2022 | 12:09 PM

Share

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಪಂಜಾಬ್ ಕಿಂಗ್ಸ್​ (PBKS) ತಂಡದ ಪರ ಆಡುತ್ತಿರುವ ಕಗಿಸೊ ರಬಾಡ (Kagiso Rabada) ಬೊಂಬಾಟ್ ಬೌಲಿಂಗ್ ಪ್ರದರ್ಶಿಸುತ್ತಿದ್ದಾರೆ. ಆಡಿರುವ 10 ಪಂದ್ಯಗಳಿಂದ 18 ವಿಕೆಟ್ ಕಿತ್ತಿದ್ದಾರೆ. 33 ರನ್ ನೀಡಿ 4 ವಿಕೆಟ್ ಪಡೆದಿರುವುದು ಈ ಬಾರಿಯ ಇವರ ಶ್ರೇಷ್ಠ ಸಾಧನೆಯಾಗಿದೆ. 4 ವಿಕೆಟ್ ಹಾಗೂ 5 ವಿಕೆಟ್ ಒಂದು ಬಾರಿ ಪಡೆದುಕೊಂಡ ಸಾಧನೆ ಮಾಡಿದ್ದಾರೆ. ಇವರ ತಂಡ ಪಂಜಾಬ್ ಈ ಬಾರಿಯ ಐಪಿಎಲ್​ನಲ್ಲಿ ಸಾಧಾರಣ ಪ್ರದರ್ಶನ ನೀಡಿದೆಯಷ್ಟೆ. ಆಡಿದ 11 ಪಂದ್ಯಗಳಲ್ಲಿ ಐದರಲ್ಲಿ ಗೆಲುವು ಮತ್ತು ಆರು ಪಂದ್ಯಗಳಲ್ಲಿ ಸೋಲು ಕಂಡಿದೆ. ಸದ್ಯ ಮಯಾಂಕ್ ಪಡೆ ಪಾಯಿಂಟ್ ಟೇಬಲ್​ನಲ್ಲಿ ಏಳನೇ ಸ್ಥಾನದಲ್ಲಿದೆ. ಪ್ಲೇ ಆಫ್​​ ಪ್ರವೇಶಿಸಲು ಇನ್ನೂ ಅವಕಾಶ ಇದೆ. ಶುಕ್ರವಾರ ಪಂಜಾಬ್ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB vs PBKS) ತಂಡವನ್ನ ಎದುರಿಸಲಿದೆ.

ಈ ಕಾದಾಟಕ್ಕೂ ಮುನ್ನ ಪಂಜಾಬ್ ಕಿಂಗ್ಸ್​ ತಂಡದ ವಿದೇಶಿ ಆಟಗಾರರು ಬಾಲಿವುಡ್ ಸಿನಿಮಾದ ಡೈಲಾಗ್ ಹೇಳಿ ಮಿಂಚಿದ್ದಾರೆ. ಇದರಲ್ಲಿ ಪ್ರಮುಖ ಹೈಲೇಟ್ ಆಗಿದ್ದು ಕಗಿಸೊ ರಬಾಡ. ಐಪಿಎಲ್​ ಆ್ಯಂಕರ್​ ಒಬ್ಬರು ಕೇಳಿದ ಪ್ರಶ್ನೆಗೆ ರಬಾಡ ನೀಡಿರುವ ಉತ್ತರ ಬಾಲಿವುಡ್​ ಸುಲ್ತಾನ್​ ಸಲ್ಮಾನ್​ ಖಾನ್​ ಅಭಿಮಾನಿಗಳಿಗೆ ಬೇಸರ ತರಿಸಿದೆ. ಆ್ಯಂಕರ್ ಅವರು ರಬಾಡ ಬಳಿಕ ನಿಮಗೆ ಸಲ್ಮಾನ್​ ಖಾನ್​ ಗೊತ್ತಾ? ಎಂದು ಪ್ರಶ್ನೆ ಮಾಡುತ್ತಾರೆ. ಇದಕ್ಕೆ ಉತ್ತರ ನೀಡುವ ರಬಾಡ ಗೊತ್ತಿಲ್ಲ, ನನಗೆ ರಶೀದ್​ ಖಾನ್​ ಮಾತ್ರ ಗೊತ್ತು ಎಂದಿದ್ದಾರೆ. ಈ ಉತ್ತರ ಕೇಳಿದ ಆ್ಯಂಕರ್​ ಕೂಡ ಒಂದು ಕ್ಷಣ ದಂಗಾಗಿದ್ದಾರೆ.

ಪಂಜಾಬ್ ಕಿಂಗ್ಸ್​ ಈ ಬಗ್ಗೆ ವಿಡಿಯೋವನ್ನು ಹಂಚಿಕೊಂಡಿದ್ದು ಇದರಲ್ಲಿ ರಬಡಾ ಸಲ್ಮಾನ್​ ಖಾನ್​ ಅವರ ವಾಂಟೆಡ್​ ಚಿತ್ರದ ಡೈಲಾಗ್​ ಅನ್ನು ಹೊಡೆಯಲು ಯತ್ನಿಸಿದ್ದಾರೆ. ಆದರೆ, ಇವರಿಗೆ ಸಲ್ಮಾನ್ ಖಾನ್ ಯಾರೆಂದು ತಿಳಿದಿಲ್ಲ ಎಂಬುದು ಅನೇಕರಿಗೆ ಬೇಸರ ಮೂಡಿಸಿದೆ. ರಬಡಾ ಮಾತ್ರವಲ್ಲ ಇತರೆ ವಿದೇಶಿ ಆಟಗಾರರು ಬಾಲಿವುಡ್​ ಸಿನಿಮಾಗಳ ಡೈಲಾಗ್​ಗೆ ಡಬ್​ಸ್ಮ್ಯಾಶ್​ ಮಾಡಲು ಯತ್ನಿಸಿ ಕೆಲ ಕಾಲ ಫನ್​ ಮಾಡಿದ್ದಾರೆ.

ಇದನ್ನೂ ಓದಿ
Image
IND vs AUS T20: ಸೆಪ್ಟೆಂಬರ್​ನಲ್ಲಿ ಭಾರತ-ಆಸ್ಟ್ರೇಲಿಯಾ ನಡುವೆ ಟಿ20 ಸರಣಿ: ಎಲ್ಲಿ?, ಯಾವಾಗ?
Image
Rohit Sharma: ತಮ್ಮದೇ ತಂಡದ ಬ್ಯಾಟರ್​ಗಳಿಗೆ ಚಳಿ ಬಿಡಿಸಿದ ರೋಹಿತ್ ಶರ್ಮಾ: ಏನು ಹೇಳಿದ್ರು ಕೇಳಿ
Image
LSG vs GT: ಇಂದು ಲಖನೌ ಮತ್ತು ಗುಜರಾತ್ ನಡುವ ಹೈವೋಲ್ಟೇಜ್ ಕದನ: ಗೆದ್ದ ತಂಡ ಪ್ಲೇ ಆಫ್​​ಗೆ
Image
MI vs KKR: ನಾಟೌಟ್ ಆಗಿದ್ರೂ ಔಟ್ ಎಂದ ಅಂಪೈರ್: ಮೈದಾನದಲ್ಲಿ ರೋಹಿತ್ ಶರ್ಮಾ ಮಾಡಿದ್ದೇನು ನೋಡಿ

ವಾಂಖೆಡೆ ಕ್ರೀಡಾಂಗಣದಲ್ಲಿ ಶನಿವಾರ ಸಂಜೆ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ತಂಡದ ಎದುರು ಮಯಂಕ್ ಅಗರವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಸೋಲು ಕಂಡಿತ್ತು. ಯುಜ್ವೇಂದ್ರ ಚಾಹಲ್ ಸ್ಪಿನ್ ಮೋಡಿಗೆ ಮತ್ತು ಅಮೋಘ ಬ್ಯಾಟಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಪಂಜಾಬ್ ಗೆಲುವನ್ನು ಕಸಿದುಕೊಂಡಿದ್ದರು. ಜಾನಿ ಬೇಸ್ಟೊ ಅವರ ಅರ್ಧಶತಕ ಮತ್ತು ಜಿತೇಶ್ ಶರ್ಮಾ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಪಂಜಾಬ್ ಕಿಂಗ್ಸ್ 5ಕ್ಕೆ 189 ರನ್ ಗಳಿಸಿತ್ತು. ಗುರಿ ಬೆನ್ನತ್ತಿದ ರಾಜಸ್ಥಾನ ಇನ್ನೂ ಎರಡು ಎಸೆತ ಉಳಿದಿರುವಾಗ ದಡ ಸೇರಿತ್ತು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ