AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DPL 2024: ರಣರೋಚಕ ಫೈನಲ್​ನಲ್ಲಿ 3 ರನ್​ಗಳಿಂದ ಗೆದ್ದು ಬೀಗಿದ ಈಸ್ಟ್ ಡೆಲ್ಲಿ ರೈಡರ್ಸ್

DPL 2024: ಡೆಲ್ಲಿ ಪ್ರೀಮಿಯರ್ ಲೀಗ್​ಗೆ ತೆರೆಬಿದ್ದಿದೆ. ಪುರುಷರ ಫೈನಲ್ ಪಂದ್ಯದಲ್ಲಿ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು ಚಾಂಪಿಯನ್ಸ್ ಪಟ್ಟ ಅಲಂಕರಿಸಿದರೆ, ಮಹಿಳಾ ಡಿಪಿಎಲ್​ನಲ್ಲಿ ನಾರ್ಥ್ ಡೆಲ್ಲಿ ಸ್ಟ್ರೈಕರ್ಸ್ ತಂಡವು ಚೊಚ್ಚಲ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಆದರೆ ಈ ಎರಡು ಫೈನಲ್​ಗಳಲ್ಲೂ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡ ಸೋಲನುಭವಿಸಿ ನಿರಾಸೆ ಅನುಭವಿಸಿದೆ.

DPL 2024: ರಣರೋಚಕ ಫೈನಲ್​ನಲ್ಲಿ 3 ರನ್​ಗಳಿಂದ ಗೆದ್ದು ಬೀಗಿದ ಈಸ್ಟ್ ಡೆಲ್ಲಿ ರೈಡರ್ಸ್
DPL 2024
ಝಾಹಿರ್ ಯೂಸುಫ್
|

Updated on: Sep 09, 2024 | 9:19 AM

Share

ಡೆಲ್ಲಿ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ 3 ರನ್​ಗಳ ರೋಚಕ ಜಯ ಸಾಧಿಸಿ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಅಂತಿಮ ಹಣಾಹಣಿಯಲ್ಲಿ ಸೌತ್ ಡೆಲ್ಲಿ ಸೂಪರ್ ​ಸ್ಟಾರ್ಸ್ ಹಾಗೂ ಈಸ್ಟ್ ಡೆಲ್ಲಿ ರೈಡರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಈಸ್ಟ್ ಡೆಲ್ಲಿ ರೈಡರ್ಸ್ ತಂಡದ ನಾಯಕ ಹಿಮ್ಮತ್ ಸಿಂಗ್ ಬ್ಯಾಟಿಂಗ್ ಆಯ್ದುಕೊಂಡರು. ಇದಾಗ್ಯೂ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರ ಅನೂಜ್ ರಾವತ್ ಕೇವಲ 10 ರನ್​ಗಳಿಸಿ ಔಟಾದರೆ, ಸುಜಲ್ ಸಿಂಗ್ 5 ರನ್​ಗೆ ಇನಿಂಗ್ಸ್ ಅಂತ್ಯಗೊಳಿಸಿದರು. ಆ ಬಳಿಕ ಬಂದ ನಾಯಕ ಹಿಮ್ಮತ್ ಸಿಂಗ್ ಕಲೆಹಾಕಿದ್ದು ಕೇವಲ 20 ರನ್​ಗಳು ಮಾತ್ರ. ಆದರೆ ಐದನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮಯಾಂಕ್ ರಾವತ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.

39 ಎಸೆತಗಳನ್ನು ಎದುರಿಸಿದ ಮಯಾಂಕ್ ರಾವತ್ 6 ಭರ್ಜರಿ ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 78 ರನ್ ಚಚ್ಚಿದರು. ಈ ಸ್ಪೋಟಕ ಅರ್ಧಶತಕದ ನೆರವಿನಿಂದ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 183 ರನ್​ ಕಲೆಹಾಕಿತು.

ಈ ಸವಾಲಿನ ಗುರಿ ಬೆನ್ನತ್ತಿದ ಸೌತ್ ಡೆಲ್ಲಿ ಸೂಪರ್​ ಸ್ಟಾರ್ಸ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ಓಪನರ್​ಗಳಾದ ಕನ್ವರ್ ಭಿಧೂರಿ (22) ಹಾಗೂ ಪ್ರಿಯಾಂಶ್ ಆರ್ಯ (6) ಬೇಗನೆ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ನಾಯಕ ಆಯುಷ್ ಬದೋನಿ 7 ರನ್​ಗಳಿಸಿ ಔಟಾದರು.

ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಸುಮಿತ್ ಮಾಥುರ್ 42 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 68 ರನ್ ಚಚ್ಚಿದರು. ಈ ಮೂಲಕ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಇದಾಗ್ಯೂ ಅಂತಿಮ 5 ಓವರ್​ಗಳಲ್ಲಿ ಸೌತ್ ಡೆಲ್ಲಿ ಸೂಪರ್ ​ಸ್ಟಾರ್ಸ್ ತಂಡಕ್ಕೆ 66 ರನ್​ಗಳ ಅವಶ್ಯಕತೆಯಿತ್ತು.

ಕೊನೆಯ ಓವರ್​ಗಳ ವೇಳೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ತೆಜಸ್ವಿ ದಹಿಯಾ ಸೌತ್ ಡೆಲ್ಲಿ ತಂಡಕ್ಕೆ ಗೆಲುವಿನ ಆಸೆ ಚಿಗುರಿಸಿದ್ದರು. ಕೇವಲ 39 ಎಸೆತಗಳನ್ನು ಎದುರಿಸಿದ ದಹಿಯಾ 69 ರನ್ ಬಾರಿಸಿ 19ನೇ ಓವರ್​ನಲ್ಲಿ ವಿಕೆಟ್ ಒಪ್ಪಿಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 19 ರನ್​ಗಳು ಬೇಕಿತ್ತು.

ಇದನ್ನೂ ಓದಿ: ಒಂದೇ ವರ್ಷ ಟೀಮ್ ಇಂಡಿಯಾದ 8 ಆಟಗಾರರು ನಿವೃತ್ತಿ..!

ರೋನಕ್ ವಘೆಲಾ ಅವರ ಅಂತಿಮ ಓವರ್​ನಲ್ಲಿ ದಿಘ್ವೇಶ್ ಠಾಠಿ ಒಂದು ಸಿಕ್ಸ್ ಹಾಗೂ 2 ಫೋರ್​ಗಳನ್ನು ಬಾರಿಸಿದರೂ ತಂಡಕ್ಕೆ ಜಯ ತಂದುಕೊಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಕೊನೆಯ ಎರಡು ಎಸೆತಗಳಲ್ಲಿ 4 ರನ್​ಗಳಿಸಲು ದಿಘ್ವೇಶ್ ವಿಫಲರಾದರು. ಈ ಮೂಲಕ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 3 ರನ್​ಗಳ ರೋಚಕ ಜಯ ಸಾಧಿಸಿ ಚೊಚ್ಚಲ ಡೆಲ್ಲಿ ಪ್ರೀಮಿಯರ್ ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ವುಮೆನ್ಸ್ ಡಿಪಿಎಲ್: ಡೆಲ್ಲಿ ಸ್ಟ್ರೈಕರ್ಸ್ ಚಾಂಪಿಯನ್ಸ್:

ಮಹಿಳಾ ಡೆಲ್ಲಿ ಪ್ರೀಮಿಯರ್ ಲೀಗ್​ನ ಫೈನಲ್​ನಲ್ಲಿ ನಾರ್ಥ್ ಡೆಲ್ಲಿ ಸ್ಟ್ರೈಕರ್ಸ್ ತಂಡವು 10 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನಾರ್ಥ್ ಡೆಲ್ಲಿ ಸ್ಟ್ರೈಕರ್ಸ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 179 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಸೌತ್ ಡೆಲ್ಲಿ ಸೂಪರ್ ಸ್ಟಾರ್ಸ್ ತಂಡ 20 ಓವರ್​ಗಳಲ್ಲಿ 169 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಮಹಿಳಾ ಡಿಪಿಎಲ್​ನಲ್ಲಿ ನಾರ್ಥ್ ಡೆಲ್ಲಿ ಸ್ಟ್ರೈಕರ್ಸ್ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ