AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DPL 2024: 4.1 ಓವರ್​ನಲ್ಲಿ ಪಂದ್ಯ ಮುಗಿಸಿದ ಡೆಲ್ಲಿ ರೈಡರ್ಸ್

DPL 2024: ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿರುವ ಅನೂಜ್ ರಾವತ್ ದೆಹಲಿ ಪ್ರೀಮಿಯರ್ ಲೀಗ್​ನಲ್ಲಿ ಈಸ್ಟ್ ಡೆಲ್ಲಿ ರೈಡರ್ಸ್ ಪರ ಆಡುತ್ತಿದ್ದಾರೆ. ಇದೀಗ ಡೆಲ್ಲಿ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿರುವ ಯುವ ಎಡಗೈ ದಾಂಡಿಗ ಮುಂಬರುವ ಐಪಿಎಲ್​ನಲ್ಲೂ ಚಾನ್ಸ್​ ಗಿಟ್ಟಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.

DPL 2024: 4.1 ಓವರ್​ನಲ್ಲಿ ಪಂದ್ಯ ಮುಗಿಸಿದ ಡೆಲ್ಲಿ ರೈಡರ್ಸ್
DPL 2024
ಝಾಹಿರ್ ಯೂಸುಫ್
|

Updated on: Aug 19, 2024 | 12:57 PM

Share

ದೆಹಲಿ ಪ್ರೀಮಿಯರ್ ಲೀಗ್​ನ 2ನೇ ಪಂದ್ಯದಲ್ಲಿ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸೆಂಟ್ರಲ್ ಡೆಲ್ಲಿ ಕಿಂಗ್ಸ್​ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಹಿಮಾಂಶು ಚೌಹಾಣ್ ಅವರ ಮಾರಕ ದಾಳಿಗೆ ತತ್ತರಿಸಿದ ಡೆಲ್ಲಿ ಕಿಂಗ್ಸ್ ಬ್ಯಾಟರ್​ಗಳು ಪೆವಿಲಿಯನ್ ಪೆರೇಡ್ ನಡೆಸಿದರು.

ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ತಂಡವು 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ದಾಳಿಗಿಳಿದ ಸಿಮರ್ಜೀತ್ ಸಿಂಗ್ ಹಾಗೂ ರೌನಕ್ ವಘೇಲಾ ಸಹ ಉತ್ತಮ ಬೌಲಿಂಗ್ ಪ್ರದರ್ಶಿಸಿದರು. ಇದರೊಂದಿಗೆ ಸೆಂಟ್ರಲ್ ಡೆಲ್ಲಿ ಕಿಂಗ್ಸ್ ತಂಡವು 8.1 ಓವರ್​ಗಳಲ್ಲಿ 61 ರನ್​ಗಳಿಸಿ ಆಲೌಟ್ ಆಯಿತು.

25 ಎಸೆತಗಳಲ್ಲಿ ಪಂದ್ಯ ಫಿನಿಶ್:

62 ರನ್​ಗಳ ಗುರಿಯನ್ನು ಬೆನ್ನತ್ತಲು ಈಸ್ಟ್ ಡೆಲ್ಲಿ ರೈಡರ್ಸ್ ​ಪರ ಆರಂಭಿಕರಾಗಿ ಕಣಕ್ಕಿಳಿದ ಅನೂಜ್ ರಾವತ್ ಹಾಗೂ ಹಿಮ್ಮತ್ ಸಿಂಗ್ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಸಿಡಿಲಬ್ಬರ ಆರಂಭಿಸಿದ ಅನೂಜ್ 12 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 25 ರನ್​ ಬಾರಿಸಿದರು.

ಮತ್ತೊಂದೆಡೆ 13 ಎಸೆತಗಳನ್ನು ಎದುರಿಸಿದ ಹಿಮ್ಮತ್ ಸಿಂಗ್ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 31 ರನ್​ ಚಚ್ಚಿದ್ದರು. ಈ ಮೂಲಕ ಕೇವಲ 4.1 ಓವರ್​ಗಳಲ್ಲಿ 62 ರನ್ ಬಾರಿಸಿ ಈಸ್ಟ್ ಡೆಲ್ಲಿ ರೈಡರ್ಸ್ ತಂಡವು 10 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಈಸ್ಟ್ ಡೆಲ್ಲಿ ರೈಡರ್ಸ್ ತಂಡ: ಅನೂಜ್ ರಾವತ್, ಸಿಮರ್ಜೀತ್ ಸಿಂಗ್, ಹಿಮ್ಮತ್ ಸಿಂಗ್, ಹಿಮಾಂಶು ಚೌಹಾಣ್, ಹರ್ಷ್ ತ್ಯಾಗಿ, ವೈಭವ್ ಶರ್ಮಾ, ಮಯಾಂಕ್ ರಾವತ್, ಸಮರ್ಥ್ ಸೇಠ್, ಪ್ರಣವ್ ಪಂತ್, ಸುಜಲ್ ಸಿಂಗ್, ಹಾರ್ದಿಕ್ ಶರ್ಮಾ, ರೌನಕ್ ವಘೇಲಾ, ಅಗ್ರಿಮ್ ಶರ್ಮಾ, ಶಂತನು ಸಿಂಗ್, ಭಗವಾನ್ ಯಾದವ್, ಭಗವಾನ್ ಯಾದವ್ ಚೌಧರಿ, ಸಾಗರ್ ಖತ್ರಿ, ಶಿವಂ ಕುಮಾರ್ ತ್ರಿಪಾಠಿ, ರಿಷಭ್ ರಾಣಾ, ಲಕ್ಷಯ ಸಾಂಗ್ವಾನ್.

ಇದನ್ನೂ ಓದಿ: IPL 2025: RCB ಪರ ಆಡುವ ಇಂಗಿತ ವ್ಯಕ್ತಪಡಿಸಿದ ರಿಂಕು ಸಿಂಗ್

ಸೆಂಟ್ರಲ್ ಡೆಲ್ಲಿ ಕಿಂಗ್ಸ್ ತಂಡ: ಯಶ್ ಧುಲ್, ಪ್ರಿನ್ಸ್ ಚೌಧರಿ, ಹಿತೇನ್ ದಲಾಲ್, ಜಾಂಟಿ ಸಿಧು, ಲಕ್ಷಯ್ ಥರೇಜಾ, ಯೋಗೇಶ್ ಶರ್ಮಾ, ಮನಿ ಗ್ರೆವಾರ್, ಕೇಶವ್ ದಬಾಸ್, ಶೌರ್ಯ ಮಲಿಕ್, ಸೌರವ್ ದಾಗರ್, ಆರ್ಯನ್ ರಾಣಾ, ಸಿದ್ಧಾಂತ್ ಬನ್ಸಾಲ್, ರಜನೀಶ್ ದಾದರ್, ಸುಮಿತ್ ಕುಮಾರ್, ಕೌಶಲ್ ಸುಮನ್, ದೀಪ್ ಬಲ್ಯಾನ್, ವಿಶಾಂತ್ ಭಾಟಿ, ಧ್ರುವ ಕೌಶಿಕ್, ಅಜಯ್ ಗುಲಿಯಾ.

ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು