AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Devon Conway: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್​ನಲ್ಲಿ ನಡೆಯಿತು ನಾಚಿಕೆಗೇಡಿನ ಸಂಗತಿ: ಹೀಗಾಗ ಬಾರದಿತ್ತು

No DRS due to power failure in CSK vs MI Match: ತನ್ನ ಘನತೆಯನ್ನು ಕಾಪಾಡಿಕೊಂಡು ಬರುತ್ತಿರುವ ಐಪಿಎಲ್​ನಲ್ಲಿ ಇದೀಗ ನಾಚಿಕೆಗೇಡಿನ ಘಟನೆಯೊಂದು ಸಂಭವಿಸಿದೆ. ಐಪಿಎಲ್ 2022ರಲ್ಲಿ (IPL 2022) ಗುರುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯ ಇದಕ್ಕೆ ಸಾಕ್ಷಿಯಾಯಿತು.

Devon Conway: ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಐಪಿಎಲ್​ನಲ್ಲಿ ನಡೆಯಿತು ನಾಚಿಕೆಗೇಡಿನ ಸಂಗತಿ: ಹೀಗಾಗ ಬಾರದಿತ್ತು
No DRS CSK vs MI IPL 2022
TV9 Web
| Updated By: Vinay Bhat|

Updated on:May 13, 2022 | 8:04 AM

Share

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಲೀಗ್ ಎಂದರೆ ಅದು ಇಂಡಿಯನ್ ಪ್ರೀಮಿಯರ್ ಲೀಗ್. ಇಲ್ಲಿ ನೀರಿನಂತೆ ಹಣಗಳನ್ನು ಸುರಿಯುತ್ತಾರೆ. ಆರಂಭದಿಂದಲೂ ಕಠಿಣ ನಿಯಮ, ಆಟಗಾರರ ಭದ್ರತೆ ಸೇರಿದಂತೆ ಬಹುತೇಕ ಎಲ್ಲ ವಿಚಾರಗಳಲ್ಲಿ ತನ್ನ ಘನತೆಯನ್ನು ಕಾಪಾಡಿಕೊಂಡು ಬರುತ್ತಿರುವ ಐಪಿಎಲ್​ನಲ್ಲಿ ಇದೀಗ ನಾಚಿಕೆಗೇಡಿನ ಘಟನೆಯೊಂದು ಸಂಭವಿಸಿದೆ. ಐಪಿಎಲ್ 2022ರಲ್ಲಿ (IPL 2022) ಗುರುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್​ ಹಾಗೂ ಮುಂಬೈ ಇಂಡಿಯನ್ಸ್ (CSK vs MI) ನಡುವಣ ಪಂದ್ಯ ಇದಕ್ಕೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಧೋನಿ ಪಡೆ ಗೆದ್ದರೆ ಪ್ಲೇ ಆಫ್​ ಗೇರುವ ಕೊನೆಯ ಅವಕಾಶವಿತ್ತು. ಹೀಗಾಗಿ ಸಿಎಸ್​ಕೆ-ಎಂಐ ನಡುವಣ ಕಾದಾಟ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆದರೆ, ಸಿಎಸ್​ಕೆ ಯೋಜನೆಯನ್ನೇ ಪವರ್ ಕಟ್ ತಲೆಕೆಳಗಾಗಿಸಿತು ಎಂದರೆ ತಪ್ಪಾಗಲಾರದು. ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲ 10 ಎಸೆತಗಳಲ್ಲಿ ಡಿಆರ್‌ಎಸ್ ತಂತ್ರಜ್ಞಾನ ಬಳಕೆಗೆ ಲಭ್ಯವಾಗಿರಲಿಲ್ಲ. ಇದೇ ಸಂದರ್ಭ ಸಿಎಸ್‌ಕೆ ಆರಂಭಿಕ ಡೆವೊನ್ ಕಾನ್ವೆ (Devon Conway) ವಿವಾದಾತ್ಮಕ ತೀರ್ಪಿಗೆ ಔಟ್ ಆಗಿದ್ದು ಚೆನ್ನೈ ತಂಡದ ಹಿನ್ನಡೆಗೆ ಕಾರಣವಾಯಿತು.

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಸಿಎಸ್​ಕೆ ಆರಂಭದಲ್ಲೇ ವಿಕೆಟ್ ಕಳೆದುಕೊಂಡಿತು ಎನ್ನುವ ಬದಲು ವಿಕೆಟ್ ಕಳೆದುಕೊಳ್ಳ ಬೇಕಾಯಿತು ಎನ್ನಬಹುದು. ಡೆವೊನ್ ಕಾನ್ವೆ ಮೊದಲ ಓವರ್‌ನಲ್ಲೇ ಎಲ್‌ಬಿಡಬ್ಲ್ಯೂ ಆದರು. ಅಂಪೈರ್ ಔಟ್ ಕೊಟ್ಟರು, ಡಿಆರ್​ಎಸ್ ತೆಗೆದುಕೊಳ್ಳಲು ಬಯಸಿದರೂ ಸ್ಟೇಡಿಯಂನಲ್ಲಿ ಕರೆಂಟ್ ಇರಲಿಲ್ಲ. ವಿದ್ಯುತ್ ಇಲ್ಲದಿರುವುದು ಡಿಆರ್‌ಎಸ್ ಪಡೆಯಲು ಕಾನ್ವೆ ಅವರಿಗೆ ಅವಕಾಶ ಸಿಗಲೇ ಇಲ್ಲ. ಇದರೊಂದಿಗೆ ಹತಾಶೆಯಿಂದ ಕಾನ್ವೆ ಪೆವಿಲಿಯನ್​ನತ್ತ ಹೊರಡಬೇಕಾಯಿತು. ಆದರೆ ನಿಜಕ್ಕೂ ಇದು ಔಟ್ ಆಗಿತ್ತೆ ಎಂಬ ಅನುಮಾನ ಕಾಡಿದೆ. ಈ ಕುರಿತು ಅಭಿಮಾನಿಗಳು ಟ್ವಿಟರ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ
Image
IPL 2022: ಮುಂಬೈ ಮುಂದೆ ಮಂಕಾದ ಚೆನ್ನೈ; ಐಪಿಎಲ್ ಇತಿಹಾಸದಲ್ಲಿ 2ನೇ ಬಾರಿಗೆ ಕೆಟ್ಟ ದಾಖಲೆ ಬರೆದ ಧೋನಿ ಬಳಗ
Image
CSK vs MI IPL Match Result: ಹಳೆ ಸೋಲಿಗೆ ಸೇಡು ತೀರಿಸಿಕೊಂಡ ಮುಂಬೈ! ಚೆನ್ನೈ ಪ್ಲೇಆಫ್ ಆಸೆಗೆ ಬಿತ್ತು ಬ್ರೇಕ್
Image
CSK vs MI Highlights, IPL 2022: ಸೋಲಿನೊಂದಿಗೆ ಪ್ಲೇ ಆಫ್​ನಿಂದ ಹೊರಬಿದ್ದ ಚೆನ್ನೈ
Image
RCB vs PBKS IPL 2022 Head to Head: ಪಂಜಾಬ್- ಬೆಂಗಳೂರಿಗೆ ಪ್ರಮುಖ ಪಂದ್ಯ; ಮುಖಾಮುಖಿ ವರದಿ ಇಲ್ಲಿದೆ

ಇದಾದ ಬಳಿಕ ರಾಬಿನ್ ಉತ್ತಪ್ಪ ಅವರು ಜಸ್​ಪ್ರೀತ್ ಬೂಮ್ರಾ ಬೌಲಿಂಗ್​ನಲ್ಲಿ ಎಲ್​ಬಿಡಬ್ಲ್ಯೂ ಆದರು. ಅವರಿಗೂ ಡಿಆರ್​ಎಸ್​ ತೆಗೆದುಕೊಳ್ಳಲು ಆಗಲಿಲ್ಲ. ಹೀಗೆ ಇಬ್ಬರು ಆಟಗಾರರು ಡಿಆರ್​ಎಸ್ ತೆಗೆದುಕೊಳ್ಳಲು ಆಗದೇ ಪೆವಿಲಿಯನ್​ಗೆ ನಿರ್ಗಮಿಸುವಂತಾಯಿತು. ಈ ಘಟನೆ ನೋಡಿದ ನೆಟ್ಟಿಗರು ಫುಲ್ ಟ್ರೋಲ್ ಮಾಡುತ್ತಿದ್ದಾರೆ. ವಿಶ್ವದ ಶ್ರೀಮಂತ ಕ್ರಿಕೆಟ್​​ ಲೀಗ್​ನಲ್ಲಿ ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಹೇಳುತ್ತಿದ್ದಾರೆ.

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಚೆನ್ನೈ ಪರ ನಾಯಕ ಮಹೇಂದ್ರ ಸಿಂಗ್ ಧೋನಿ (ಔಟಾಗದೆ 36 ರನ್,33 ಎಸೆತ, 4 ಬೌಂಡರಿ, 2 ಸಿಕ್ಸರ್) ಅವರ ಏಕಾಂಗಿ ಹೋರಾಟದ ಹೊರತಾಗಿಯೂ 16 ಓವರ್‌ಗಳಲ್ಲಿ ಕೇವಲ 97 ರನ್‌ಗೆ ಆಲೌಟಾಯಿತು. ಡ್ವೇನ್ ಬ್ರಾವೊ(12 ರನ್), ಅಂಬಟಿ ರಾಯುಡು(10)ಹಾಗೂ ಶಿವಂ ದುಬೆ(10)ಎರಡಂಕೆಯ ಸ್ಕೋರ್ ಗಳಿಸಿದರು. ಕಾನ್ವೇ, ರಾಬಿನ್ ಉತ್ತಪ್ಪ ಹಾಗೂ ಮೊಯಿನ್ ಅಲಿ ಸೊನ್ನೆ ಸುತ್ತಿದರೆ ಗಾಯಕ್ವಾಡ್ 7 ರನ್​ಗೆ ನಿರ್ಗಮಿಸಿದರು. ಮುಂಬೈ ಪರ ಡೆನಿಲ್ ಸ್ಯಾಮ್ಸ್ 3 ವಿಕೆಟ್ ಕಿತ್ತರು. ಗೆಲ್ಲಲು 98 ರನ್ ಸುಲಭ ಸವಾಲು ಪಡೆದ ಮುಂಬೈ 14.5 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿತು. ತಿಲಕ್ ವರ್ಮಾ(ಔಟಾಗದೆ 34), ಹೃತಿಕ್ ಶೋಕೀನ್(18 ರನ್) ,ಟಿಮ್ ಡೇವಿಡ್(ಔಟಾಗದೆ 16)ಹಾಗೂ ರೋಹಿತ್ ಶರ್ಮಾ(18 ರನ್) ಎರಡಂಕೆಯ ಸ್ಕೋರ್ ಗಳಿಸಿ ಮುಂಬೈಗೆ ಗೆಲುವು ತಂದುಕೊಟ್ಟರು. ಈ ಮೂಲಕ ಸಿಎಸ್​​ಕೆ ಐಪಿಎಲ್ 2022 ರಿಂದ ಹೊರಬಿದ್ದಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:04 am, Fri, 13 May 22

ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್