AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy 2022 Final: ದುಲೀಪ್ ಟ್ರೋಫಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಪಶ್ಚಿಮ ವಲಯ

Duleep Trophy 2022 Final: ಕೊನೆಯ ಇನಿಂಗ್ಸ್​ನಲ್ಲಿ ಬೃಹತ್ ಟಾರ್ಗೆಟ್ ಪಡೆದ ದಕ್ಷಿಣ ವಲಯದ ಪರ ಆರಂಭಿಕ ಆಟಗಾರ ರೋಹನ್ (93) ಉತ್ತಮ ಇನಿಂಗ್ಸ್ ಆಡಿದರೂ, ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

Duleep Trophy 2022 Final: ದುಲೀಪ್ ಟ್ರೋಫಿಯಲ್ಲಿ ಚಾಂಪಿಯನ್ ಪಟ್ಟಕ್ಕೇರಿದ ಪಶ್ಚಿಮ ವಲಯ
Duleep Trophy 2022
TV9 Web
| Edited By: |

Updated on:Sep 25, 2022 | 1:34 PM

Share

2022ರ ದುಲೀಪ್ ಟ್ರೋಫಿಯ ಫೈನಲ್ (Duleep Trophy 2022 Final) ಪಂದ್ಯದಲ್ಲಿ ದಕ್ಷಿಣ ವಲಯದ (South Zone) ವಿರುದ್ಧ ಭರ್ಜರಿ ಜಯ ಸಾಧಿಸಿ ಪಶ್ಚಿಮ ವಲಯ (West Zone) ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೊಯಮತ್ತೂರಿನ ಎಸ್​ಎನ್​ಆರ್ ಕಾಲೇಜು ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಪಶ್ಚಿಮ ವಲಯದ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್​ ಆರಂಭಿಸಿದ ಪಶ್ಚಿಮ ವಲಯದ ಪರ ಮೊದಲ ಇನಿಂಗ್ಸ್​ನಲ್ಲಿ ಹೆಟ್ ಪಟೇಲ್ 98 ರನ್​ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ವೆಸ್ಟ್ ಝೋನ್ (ಪಶ್ಚಿಮ ವಲಯ) 270 ರನ್​ ಕಲೆಹಾಕಿತು. ಈ ಗುರಿಯೊಂದಿಗೆ ಮೊದಲ ಇನಿಂಗ್ಸ್ ಆರಂಭಿಸಿದ ದಕ್ಷಿಣ ವಲಯದ ಪರ ಬಾಬಾ ಇಂದ್ರಜಿತ್ (118) ಭರ್ಜರಿ ಶತಕ ಸಿಡಿಸಿದರು. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ ದಕ್ಷಿಣ ವಲಯ 327 ರನ್​ ಕಲೆಹಾಕಿತು.

57 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಪಶ್ಚಿಮ ವಲಯ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (265) ದ್ವಿಶತಕ ಸಿಡಿಸಿ ಮಿಂಚಿದರೆ, ಶ್ರೇಯಸ್ ಅಯ್ಯರ್ 71 ರನ್ ಬಾರಿಸಿದರು. ಇನ್ನು ಸರ್ಫರಾಜ್ ಖಾನ್ (127) ಬಿರುಸಿನ ಶತಕ ಸಿಡಿಸುವ ಮೂಲಕ 2ನೇ ಇನಿಂಗ್ಸ್​ನಲ್ಲಿ ಬೃಹತ್ ಮೊತ್ತ ಪೇರಿಸಲು ನೆರವಾದರು. ಅದರಂತೆ 4 ವಿಕೆಟ್ ನಷ್ಟಕ್ಕೆ 585 ರನ್​ಗಳಿಸಿ ಪಶ್ಚಿಮ ವಲಯ ಡಿಕ್ಲೇರ್ ಘೋಷಿಸಿತು.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಕೊನೆಯ ಇನಿಂಗ್ಸ್​ನಲ್ಲಿ ಬೃಹತ್ ಟಾರ್ಗೆಟ್ ಪಡೆದ ದಕ್ಷಿಣ ವಲಯದ ಪರ ಆರಂಭಿಕ ಆಟಗಾರ ರೋಹನ್ (93) ಉತ್ತಮ ಇನಿಂಗ್ಸ್ ಆಡಿದರೂ, ಉಳಿದ ಬ್ಯಾಟ್ಸ್​ಮನ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ 234 ರನ್​ಗಳಿಗೆ ಸೌತ್ ಝೋನ್ (ದಕ್ಷಿಣ ವಲಯ) ಆಲೌಟ್ ಆಯಿತು. ಇದರೊಂದಿಗೆ 294 ರನ್​ಗಳ ಭರ್ಜರಿ ಜಯ ಸಾಧಿಸಿ ಪಶ್ಚಿಮ ವಲಯ ಚಾಂಪಿಯನ್ ಪಟ್ಟ ಅಲಂಕರಿಸಿತು.

ಫೈನಲ್ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಬಾರಿಸಿದ ಯಶಸ್ವಿ ಜೈಸ್ವಾಲ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಜಯದೇವ್ ಉನದ್ಕಟ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ದಕ್ಷಿಣ ವಲಯ ಪ್ಲೇಯಿಂಗ್ ಇಲೆವೆನ್: ರೋಹನ್ ಕುನ್ನುಮ್ಮಳ್ , ಮಯಾಂಕ್ ಅಗರ್ವಾಲ್ , ಬಾಬಾ ಇಂದ್ರಜಿತ್ , ಹನುಮ ವಿಹಾರಿ (ನಾಯಕ) , ಮನೀಶ್ ಪಾಂಡೆ , ರಿಕಿ ಭುಯಿ ( ವಿಕೆಟ್ ಕೀಪರ್ ) , ಕೃಷ್ಣಪ್ಪ ಗೌತಮ್ , ಸಾಯಿ ಕಿಶೋರ್ , ಬೆಸಿಲ್ ಥಂಪಿ , ತೆಲುಕುಪಲ್ಲಿ ರವಿತೇಜ , ಚೀಪುರಪಲ್ಲಿ ಸ್ಟೀಫನ್.

ಪಶ್ಚಿಮ ವಲಯ ಪ್ಲೇಯಿಂಗ್ ಇಲೆವೆನ್: ಅಜಿಂಕ್ಯ ರಹಾನೆ (ನಾಯಕ) , ಶ್ರೇಯಸ್ ಅಯ್ಯರ್ , ಸರ್ಫರಾಜ್ ಖಾನ್ , ಅತಿತ್ ಶೇತ್ , ಶಮ್ಸ್ ಮುಲಾನಿ , ಹೆಟ್ ಪಟೇಲ್ ( ವಿಕೆಟ್ ಕೀಪರ್ ) , ತನುಷ್ ಕೋಟ್ಯಾನ್ , ಜಯದೇವ್ ಉನದ್ಕಟ್ , ಚಿಂತನ್ ಗಜಾ

Published On - 1:32 pm, Sun, 25 September 22

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ