AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Avesh Khan: ಟೀಮ್ ಇಂಡಿಯಾಗೆ ಆಯ್ಕೆಯಾದ ಬೆನ್ನಲ್ಲೇ ಅವೇಶ್ ಖಾನ್​ಗೆ ಗಾಯ..!

Duleep Trophy 2023: ಪಶ್ಚಿಮ ವಲಯ ವಿರುದ್ಧದ ಮೊದಲ ದಿನದಾಟದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ರಿಂಕು ಸಿಂಗ್ ಹಾಗೂ ಅವೇಶ್ ಖಾನ್  ಡಿಕ್ಕಿಯಾಗಿದ್ದರು.

Avesh Khan: ಟೀಮ್ ಇಂಡಿಯಾಗೆ ಆಯ್ಕೆಯಾದ ಬೆನ್ನಲ್ಲೇ ಅವೇಶ್ ಖಾನ್​ಗೆ ಗಾಯ..!
Avesh Khan
TV9 Web
| Updated By: ಝಾಹಿರ್ ಯೂಸುಫ್|

Updated on: Jul 06, 2023 | 4:10 PM

Share

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಯುವ ವೇಗಿ ಅವೇಶ್ ಖಾನ್ (Avsesh Khan) ಕೂಡ ಸ್ಥಾನ ಪಡೆದಿದ್ದಾರೆ. ಆದರೆ ಅತ್ತ ಭಾರತ ತಂಡದಲ್ಲಿ ಸ್ಥಾನ ಸಿಗುತ್ತಿದ್ದಂತೆ, ಇತ್ತ ಅವೇಶ್ ಗಾಯಕ್ಕೆ ತುತ್ತಾಗಿದ್ದಾರೆ. ಬೆಂಗಳೂರಿನ ಆಲೂರಿನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಮೊದಲ ಸೆಮಿಫೈನಲ್​ನಲ್ಲಿ ಕೇಂದ್ರ ವಲಯದ ಪರ ಕಣಕ್ಕಿಳಿದಿದ್ದ ಅವೇಶ್ ಖಾನ್ ಫೀಲ್ಡಿಂಗ್ ವೇಳೆ ಗಾಯಗೊಂಡಿದ್ದಾರೆ.

ಪಶ್ಚಿಮ ವಲಯ ವಿರುದ್ಧದ ಮೊದಲ ದಿನದಾಟದಲ್ಲಿ ಕ್ಯಾಚ್ ಹಿಡಿಯುವ ಯತ್ನದಲ್ಲಿ ರಿಂಕು ಸಿಂಗ್ ಹಾಗೂ ಅವೇಶ್ ಖಾನ್  ಡಿಕ್ಕಿಯಾಗಿದ್ದರು. ಇದರಿಂದ ಅವರ ಬಲ ಭುಜಕ್ಕೆ ಗಂಭೀರ ಗಾಯವಾಗಿದ್ದು, ಹೀಗಾಗಿ ಅರ್ಧದಲ್ಲೇ ಮೈದಾನ ತೊರೆದಿದ್ದರು.

ಅಲ್ಲದೆ 2ನೇ ದಿನದಾಟದಲ್ಲೂ ಅವೇಶ್ ಖಾನ್ ಮೈದಾನಕ್ಕಿಳಿದಿಲ್ಲ. ಇತ್ತ ಭಾರತ ತಂಡಕ್ಕೆ ಆಯ್ಕೆಯಾದ ಬೆನ್ನಲ್ಲೇ ಯುವ ವೇಗಿ ಗಾಯಗೊಂಡಿರುವುದು ಚಿಂತೆಗೆ ಕಾರಣವಾಗಿದೆ. ಏಕೆಂದರೆ 2022 ರಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಬಾರಿ ಟಿ20 ಪಂದ್ಯವಾಡಿದ್ದ ಅವೇಶ್ ಖಾನ್​ಗೆ ಇದೀಗ ಮತ್ತೆ ಭಾರತ ತಂಡದಲ್ಲಿ ಅವಕಾಶ ನೀಡಲಾಗಿದೆ.

ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವ ವಿಶ್ವಾಸದಲ್ಲಿದ್ದ ಯುವ ವೇಗಿ ಇದೀಗ ಗಾಯಕ್ಕೆ ತುತ್ತಾಗಿದ್ದಾರೆ. ಇನ್ನು ಈ ಗಾಯವು ಗಂಭೀರವಾಗಿದ್ದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಹೊರಗುಳಿಯಬಹುದು.

ಇದನ್ನೂ ಓದಿ: IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ಭಾರತ-ವೆಸ್ಟ್ ಇಂಡೀಸ್ ನಡುವಣ ಟಿ20 ಸರಣಿಯು ಆಗಸ್ಟ್ 3 ರಿಂದ ಶುರುವಾಗಲಿದ್ದು, ಅದಕ್ಕೂ ಮುನ್ನ ಚೇತರಿಸಿಕೊಳ್ಳುವ ಭರವಸೆಯಿದ್ದರೆ ಮಾತ್ರ ಅವರನ್ನು ತಂಡದಲ್ಲಿರಿಸಲಾಗುತ್ತದೆ. ಹೀಗಾಗಿ ಅವೇಶ್ ಖಾನ್ ಅವರ ವೈದ್ಯಕೀಯ ವರದಿ ಬಂದ ಬಳಿಕವಷ್ಟೇ ಬಿಸಿಸಿಐ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದೆ.

ಭಾರತ ಟಿ20 ತಂಡ

ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭ್​​ಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರವಿ ಬಿಷ್ಣೋಯ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ ( ನಾಯಕ), ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ