AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy 2023: ಸೌರಭ್​ಗೆ 8 ವಿಕೆಟ್: ಕೇಂದ್ರ ವಲಯಕ್ಕೆ ಭರ್ಜರಿ ಜಯ

Duleep Trophy 2023: ಮುರಾಸಿಂಗ್ ಕೇವಲ 42 ರನ್​ಗಳಿಗೆ 5 ವಿಕೆಟ್ ಉರುಳಿಸಿ ಮಿಂಚಿದರು. ಪರಿಣಾಮ ಕೇಂದ್ರ ವಲಯ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 182 ರನ್​ಗಳಿಸಿ ಆಲೌಟ್ ಆಯಿತು.

Duleep Trophy 2023: ಸೌರಭ್​ಗೆ 8 ವಿಕೆಟ್: ಕೇಂದ್ರ ವಲಯಕ್ಕೆ ಭರ್ಜರಿ ಜಯ
Saurabh Kumar
TV9 Web
| Edited By: |

Updated on: Jul 01, 2023 | 10:00 PM

Share

Duleep Trophy 2023: ಬೆಂಗಳೂರಿನ ಆಲೂರಿನಲ್ಲಿರುವ ಕೆಎಸ್​ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ದುಲೀಪ್ ಟ್ರೋಫಿಯ (Duleep Trophy 2023) ಮೊದಲ ಕ್ವಾರ್ಟರ್ ಫೈನಲ್​ ಪಂದ್ಯದಲ್ಲಿ ಕೇಂದ್ರ ವಲಯ (Central Zone) ತಂಡವು ಭರ್ಜರಿ ಜಯ ಸಾಧಿಸಿದೆ. ಪೂರ್ವ ವಲಯ (East Zone) ತಂಡದ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕೇಂದ್ರ ವಲಯ ಮೊದಲು ಬ್ಯಾಟಿಂಗ್ ಮಾಡಿತು. ಆದರೆ ಮಣಿಶಂಕರ್ ಮುರಾಸಿಂಗ್ ದಾಳಿಗೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಕೇಂದ್ರ ವಲಯದ ಬ್ಯಾಟರ್​ಗಳು ಪೆವಿಲಿಯನ್​ ಪರೇಡ್ ನಡೆಸಿದರು.

ಇತ್ತ ಮುರಾಸಿಂಗ್ ಕೇವಲ 42 ರನ್​ಗಳಿಗೆ 5 ವಿಕೆಟ್ ಉರುಳಿಸಿ ಮಿಂಚಿದರು. ಪರಿಣಾಮ ಕೇಂದ್ರ ವಲಯ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 182 ರನ್​ಗಳಿಸಿ ಆಲೌಟ್ ಆಯಿತು. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿದ ಪೂರ್ವ ವಲಯ ಕೂಡ ಆರಂಭಿಕ ಆಘಾತಕ್ಕೆ ಸಿಲುಕಿತ್ತು. ಅದರಲ್ಲೂ ಪೂರ್ವ ತಂಡದ ಯಾವುದೇ ಬ್ಯಾಟ್ಸ್​ಮನ್ ಅನ್ನು ಕ್ರೀಸ್ ಕಚ್ಚಿ ನಿಲ್ಲಲು ಕೇಂದ್ರ ವಲಯದ ಬೌಲರ್​ಗಳು ಬಿಡಲಿಲ್ಲ.

ಪರಿಣಾಮ ಪೂರ್ವ ವಲಯ ತಂಡವು 100 ರನ್​ಗಳಿಸುವಷ್ಟರಲ್ಲಿ ಪ್ರಮುಖ 7 ವಿಕೆಟ್ ಕಳೆದುಕೊಂಡಿತು. ಇತ್ತ ಅವೇಶ್ ಖಾನ್ ಹಾಗೂ ಸೌರಭ್ ಕುಮಾರ್ ತಲಾ 3 ವಿಕೆಟ್ ಪಡೆದು ಮಿಂಚಿದರೆ, ನಾಯಕ ಶಿವಂ ಮಾವಿ 2 ವಿಕೆಟ್ ಕಬಳಿಸಿದರು. ಇದರೊಂದಿಗೆ ಪೂರ್ವ ವಲಯ ತಂಡವು ಕೇವಲ 122 ರನ್​ಗಳಿಗೆ ಸರ್ವಪತನ ಕಂಡಿತು.

60 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ ಆರಂಭಿಸಿದ ಕೇಂದ್ರ ವಲಯದ ಪರ ಆರಂಭಿಕರಾದ ಇಮಾಂಶು ಮಂತ್ರಿ (68) ಹಾಗೂ ವಿವೇಕ್ ಸಿಂಗ್ (56) ಅರ್ಧಶತಕ ಬಾರಿಸಿ ಮಿಂಚಿದರು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್​ಗಳು ಮತ್ತೊಮ್ಮೆ ವಿಫಲರಾಗುವುದರೊಂದಿಗೆ ಕೇಂದ್ರ ವಲಯ 2ನೇ ಇನಿಂಗ್ಸ್​ ಅನ್ನು 239 ರನ್​ಗಳಿಗೆ ಅಂತ್ಯಗೊಳಿಸಿತು.

ಪ್ರಥಮ ಇನಿಂಗ್ಸ್​ ಹಿನ್ನಡೆಯೊಂದಿಗೆ 300 ರನ್​ಗಳ ಗುರಿ ಪಡೆದ ಪೂರ್ವ ವಲಯ ತಂಡವು ಸೌರಭ್ ಕುಮಾರ್ ಸ್ಪಿನ್ ದಾಳಿಗೆ ತತ್ತರಿಸಿತು. 12.4 ಓವರ್ ಮಾಡಿದ ಸೌರಭ್ ಕೇವಲ 33 ರನ್​ ನೀಡಿ 8 ವಿಕೆಟ್ ಕಬಳಿಸಿದರು. ಈ ಮೂಲಕ ಪೂರ್ವ ವಲಯ ತಂಡವನ್ನು ಕೇವಲ 129 ರನ್​ಗಳಿಗೆ ಆಲೌಟ್ ಮಾಡಿ ಕೇಂದ್ರ ವಲಯ ತಂಡ 170 ರನ್​ಗಳ ಭರ್ಜರಿ ಜಯ ಸಾಧಿಸಿತು.

ಕೇಂದ್ರ ವಲಯ ಪ್ಲೇಯಿಂಗ್ 11: ಹಿಮಾಂಶು ಮಂತ್ರಿ , ಶುಭಂ ಎಸ್ ಶರ್ಮಾ , ಕುನಾಲ್ ಚಂದೇಲಾ , ವಿವೇಕ್ ಸಿಂಗ್ , ಸರನ್ಶ್ ಜೈನ್ , ರಿಂಕು ಸಿಂಗ್ , ಉಪೇಂದ್ರ ಯಾದವ್ (ವಿಕೆಟ್ ಕೀಪರ್) , ಶಿವಂ ಮಾವಿ (ನಾಯಕ) , ಸೌರಭ್ ಕುಮಾರ್ , ಅವೇಶ್ ಖಾನ್ , ಯಶ್ ಠಾಕೂರ್.

ಇದನ್ನೂ ಓದಿ: ODI World Cup 2023: ಚೆಪಾಕ್ ಮತ್ತು ಆಸ್ಟ್ರೇಲಿಯಾ: ಟೀಮ್ ಇಂಡಿಯಾಗೆ ಚಿಂತೆ ಶುರು..!

ಪೂರ್ವ ವಲಯ ಪ್ಲೇಯಿಂಗ್ 11: ಅಭಿಮನ್ಯು ಈಶ್ವರನ್ (ನಾಯಕ) , ಸುದೀಪ್ ಕುಮಾರ್ ಘರಾಮಿ , ಅನುಸ್ತುಪ್ ಮಜುಂದಾರ್ , ರಿಯಾನ್ ಪರಾಗ್ , ಮಣಿಶಂಕರ್ ಮುರಾಸಿಂಗ್ , ಶಹಬಾಜ್ ಅಹ್ಮದ್ , ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್) , ಶಹಬಾಝ್ ನದೀಮ್ , ಆಕಾಶ್ ದೀಪ್ , ಶಾಂತನು ಮಿಶ್ರಾ , ಇಶಾನ್ ಪೊರೆಲ್.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?