Duleep Trophy 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಶ್ಚಿಮ ವಲಯ vs ದಕ್ಷಿಣ ವಲಯ ನಡುವಣ ದುಲೀಪ್ ಟ್ರೋಫಿಯ ಫೈನಲ್ ಪಂದ್ಯವು ರೋಚಕಘಟ್ಟಕ್ಕೆ ಬಂದು ನಿಂತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಶ್ಚಿಮ ವಲಯ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ದಕ್ಷಿಣ ವಲಯ ನಾಯಕ ಹನುಮ ವಿಹಾರಿ (63) ಅರ್ಧಶತಕ ಬಾರಿಸಿ ಮಿಂಚಿದರು.
ಆದರೆ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ದಕ್ಷಿಣ ವಲಯ ತಂಡವು 213 ರನ್ಗಳಿಗೆ ಆಲೌಟ್ ಆಯಿತು. ಪಶ್ವಿಮ ವಲಯ ಪರ ಅರ್ಝಾನ್, ಚಿಂತನ್ ಗಜ, ಡಿ. ಜಡೇಜಾ ತಲಾ 2 ವಿಕೆಟ್ ಪಡೆದರು.
ಇದಕ್ಕುತ್ತರವಾಗಿ ಇನಿಂಗ್ಸ್ ಆರಂಭಿಸಿದ ಪಶ್ಚಿಮ ವಲಯ ತಂಡಕ್ಕೆ ಆರಂಭಿಕ ಆಟಗಾರ ಪೃಥ್ವಿ ಶಾ (65) ಉತ್ತಮ ಆರಂಭ ಒದಗಿಸಿದ್ದರು. ಆದರೆ ಉಳಿದ ಬ್ಯಾಟರ್ಗಳು ವಿಧ್ವತ್ ಕಾವೇರಪ್ಪ ಎಸೆತಗಳಲ್ಲಿ ಪೆವಿಲಿಯನ್ ಪರೇಡ್ ನಡೆಸಿದರು. ಪರಿಣಾಮ ಪಶ್ಚಿಮ ವಲಯ ತಂಡವು ಮೊದಲ ಇನಿಂಗ್ಸ್ನಲ್ಲಿ ಕೇವಲ 146 ರನ್ಗಳಿಗೆ ಆಲೌಟ್ ಆಯಿತು. ದಕ್ಷಿಣ ವಲಯ ಪರ ವಿಧ್ವತ್ ಕಾವೇರಪ್ಪ ಕೇವಲ 53 ರನ್ಗಳಿಗೆ 7 ವಿಕೆಟ್ ಕಬಳಿಸಿ ಮಿಂಚಿದರು.
ಇದಾದ ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ ದಕ್ಷಿಣ ವಲಯ ತಂಡವು ಧರ್ಮೇಂದ್ರ ಜಡೇಜಾ ದಾಳಿಗೆ ತತ್ತರಿಸಿತು. ಪರಿಣಾಮ ಕೇವಲ 230 ರನ್ಗಳಿಗೆ ಆಲೌಟ್ ಆದರು. ಪಶ್ಚಿಮ ವಲಯ ಪರ ಧರ್ಮೇಂದ್ರ ಜಡೇಜಾ ಕೇವಲ 40 ರನ್ ನೀಡಿ 5 ವಿಕೆಟ್ ಕಬಳಿಸಿದರು.
ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 297 ರನ್ಗಳ ಗುರಿ ಪಡೆದ ಪಶ್ಚಿಮ ವಲಯ ತಂಡವು 18 ರನ್ಗಳಿಸುಷ್ಟರಲ್ಲಿ 2 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ಪ್ರಿಯಾಂಕ್ ಪಾಂಚಾಲ್ ತಂಡಕ್ಕೆ ಆಸರೆಯಾಗಿ ನಿಂತರು.
ಆದರೆ ಚೇತೇಶ್ವರ ಪೂಜಾರ (15) ಹಾಗೂ ಸೂರ್ಯಕುಮಾರ್ ಯಾದವ್ (4) ವಿಕೆಟ್ ಕಬಳಿಸಿದ ವಿ ಕೌಶಿಕ್ ದಕ್ಷಿಣ ವಲಯಕ್ಕೆ ಅಮೂಲ್ಯ ಯಶಸ್ಸು ತಂದುಕೊಟ್ಟರು. ಈ ಹಂತದಲ್ಲಿ ಜೊತೆಯಾದ ಪ್ರಿಯಾಂಕ್ ಪಾಂಚಾಲ್ ಹಾಗೂ ಸರ್ಫರಾಝ್ ಖಾನ್ 5ನೇ ವಿಕೆಟ್ಗೆ 98 ರನ್ಗಳ ಜೊತೆಯಾಟವಾಡಿದರು.
ನಾಲ್ಕನೆ ದಿನದಾಟದ ಅಂತಿಮ ಓವರ್ಗಳ ವೇಳೆ ಸಾಯಿ ಕಿಶೋರ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಸರ್ಫರಾಝ್ ಖಾನ್ (48) ಕ್ಲೀನ್ ಬೌಲ್ಡ್ ಆದರು. ಅದರಂತೆ ನಾಲ್ಕನೇ ದಿನದಾಟದ ಅಂತ್ಯಕ್ಕೆ ಪಶ್ಚಿಮ ವಲಯ ತಂಡವು 5 ವಿಕೆಟ್ ಕಳೆದುಕೊಂಡು 182 ರನ್ಗಳಿಸಿದೆ.
ಇನ್ನು ಕೊನೆಯ ದಿನದಾಟ ಬಾಕಿಯಿದ್ದು, ಗೆಲ್ಲಲು ಪಶ್ಚಿಮ ವಲಯ ತಂಡವು 116 ರನ್ಗಳಿಸಬೇಕಿದೆ. ಇತ್ತ ದಕ್ಷಿಣ ವಲಯಕ್ಕೆ 5 ವಿಕೆಟ್ಗಳ ಅಗತ್ಯತೆಯಿದೆ. ಸದ್ಯ ಕ್ರೀಸ್ನಲ್ಲಿ ಪ್ರಿಯಾಂಕ್ ಪಾಂಚಾಲ್ (92) ಹಾಗೂ ಅತಿತ್ ಶೇತ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಹೀಗಾಗಿ ಅಂತಿಮ ದಿನದಾಟದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು.
ಪಶ್ಚಿಮ ವಲಯ ಪ್ಲೇಯಿಂಗ್ 11: ಪೃಥ್ವಿ ಶಾ , ಪ್ರಿಯಾಂಕ್ ಪಾಂಚಾಲ್ (ನಾಯಕ) , ಚೇತೇಶ್ವರ ಪೂಜಾರ , ಸೂರ್ಯಕುಮಾರ್ ಯಾದವ್ , ಸರ್ಫರಾಝ್ ಖಾನ್ , ಧರ್ಮೇಂದ್ರಸಿನ್ಹ್ ಜಡೇಜಾ , ಹಾರ್ವಿಕ್ ದೇಸಾಯಿ (ವಿಕೆಟ್ ಕೀಪರ್) , ಚಿಂತನ್ ಗಜ , ಅರ್ಝಾನ್ ನಾಗವಾಸ್ವಾಲ್ಲಾ , ಅತಿತ್ ಶೇತ್ , ಶಮ್ಸ್ ಮುಲಾನಿ.
ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!
ದಕ್ಷಿಣ ವಲಯ ಪ್ಲೇಯಿಂಗ್ 11: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ , ಹನುಮ ವಿಹಾರಿ (ನಾಯಕ) , ರಿಕಿ ಭುಯಿ (ವಿಕೆಟ್ ಕೀಪರ್) , ತಿಲಕ್ ವರ್ಮಾ , ವಾಷಿಂಗ್ಟನ್ ಸುಂದರ್ , ಸಾಯಿ ಕಿಶೋರ್ , ಸಚಿನ್ ಬೇಬಿ , ವಿಧ್ವತ್ ಕಾವೇರಪ್ಪ , ವಿಜಯ್ ಕುಮಾರ್ ವೈಶಾಕ್ , ವಾಸುಕಿ ಕೌಶಿಕ್.