AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy 2024: ಟಾಸ್ ಗೆದ್ದ ಭಾರತ ಡಿ: ಪ್ಲೇಯಿಂಗ್ ಇಲೆವೆನ್​ನಲ್ಲಿ ಐವರು ಕನ್ನಡಿಗರು

Duleep Trophy 2024: ದುಲೀಪ್ ಟ್ರೋಫಿಯ 2ನೇ ಸುತ್ತಿನ ಪಂದ್ಯಗಳು ಇಂದಿನಿಂದ ಶುರುವಾಗಿದೆ. ಆಂಧ್ರ ಪ್ರದೇಶದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ಎ ಮತ್ತು ಭಾರತ ಡಿ ತಂಡಗಳು ಮುಖಾಮುಖಿಯಾದರೆ, ಮತ್ತೊಂದು ಮ್ಯಾಚ್​ನಲ್ಲಿ ಭಾರತ ಸಿ ಮತ್ತು ಭಾರತ ಬಿ ತಂಡಗಳು ಕಣಕ್ಕಿಳಿದಿವೆ.

Duleep Trophy 2024: ಟಾಸ್ ಗೆದ್ದ ಭಾರತ ಡಿ: ಪ್ಲೇಯಿಂಗ್ ಇಲೆವೆನ್​ನಲ್ಲಿ ಐವರು ಕನ್ನಡಿಗರು
Duleep Trophy 2024
ಝಾಹಿರ್ ಯೂಸುಫ್
|

Updated on:Sep 12, 2024 | 10:07 AM

Share

ಆಂಧ್ರ ಪ್ರದೇಶದ ಅನಂತಪುರದಲ್ಲಿರುವ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಮೂರನೇ ಪಂದ್ಯದಲ್ಲಿ ಭಾರತ ಎ ಮತ್ತು ಭಾರತ ಡಿ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ಡಿ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಶುಭ್​ಮನ್ ಗಿಲ್ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಭಾರತ ಎ ತಂಡವನ್ನು ಕನ್ನಡಿಗ ಮಯಾಂಕ್ ಅಗರ್ವಾಲ್ ಮುನ್ನಡೆಸುತ್ತಿದ್ದಾರೆ. ಹಾಗೆಯೇ ಈ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಮತ್ತೋರ್ವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೂಡ ಕಾಣಿಸಿಕೊಂಡಿದ್ದಾರೆ.

ಇನ್ನು ಭಾರತ ಡಿ ತಂಡದಲ್ಲಿ ಕನ್ನಡಿಗರಾದ ದೇವದತ್ ಪಡಿಕ್ಕಲ್ ಹಾಗೂ ಕೊಡಗಿನ ವೇಗಿ ವಿಧ್ವತ್ ಕಾವೇರಪ್ಪ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ A (ಪ್ಲೇಯಿಂಗ್ XI): ಪ್ರಥಮ್ ಸಿಂಗ್, ಮಯಾಂಕ್ ಅಗರ್ವಾಲ್ (ನಾಯಕ), ತಿಲಕ್ ವರ್ಮಾ, ರಿಯಾನ್ ಪರಾಗ್, ಶಾಶ್ವತ್ ರಾವತ್, ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಆಕಿಬ್ ಖಾನ್.

ಭಾರತ D (ಪ್ಲೇಯಿಂಗ್ XI): ಅಥರ್ವ ತೈಡೆ, ಯಶ್ ದುಬೆ, ಶ್ರೇಯಸ್ ಅಯ್ಯರ್ (ನಾಯಕ), ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಸೌರಭ್ ಕುಮಾರ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವಿಧ್ವತ್ ಕಾವೇರಪ್ಪ, ಆದಿತ್ಯ ಠಾಕರೆ.

ಭಾರತ B vs ಭಾರತ C ಮುಖಾಮುಖಿ:

ಅನಂತಪುರದ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್​ನ 2ನೇ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮತ್ತೊಂದು ಪಂದ್ಯದಲ್ಲಿ ಭಾರತ ಬಿ ಮತ್ತು ಭಾರತ ಸಿ ತಂಡಗಳು ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಭಾರತ ಬಿ ತಂಡದ ನಾಯಕ ಅಭಿಮನ್ಯು ಈಶ್ವರನ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯದಲ್ಲಿ ಕರ್ನಾಟಕದ ವೇಗಿ ವಿಜಯ​ಕುಮಾರ್ ವೈಶಾಕ್ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಆಡುವ ಬಳಗ ಈ ಕೆಳಗಿನಂತಿದೆ…

ಭಾರತ B (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್ (ನಾಯಕ), ಎನ್ ಜಗದೀಸನ್ (ವಿಕೆಟ್ ಕೀಪರ್), ಮುಶೀರ್ ಖಾನ್, ಸರ್ಫರಾಝ್ ಖಾನ್, ರಿಂಕು ಸಿಂಗ್, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನವದೀಪ್ ಸೈನಿ, ಮುಖೇಶ್ ಕುಮಾರ್, ರಾಹುಲ್ ಚಾಹರ್.

ಇದನ್ನೂ ಓದಿ: ವಿಶ್ವದ ಟಾಪ್-5 ಬ್ಯಾಟರ್​ಗಳನ್ನು ಹೆಸರಿಸಿದ ಕೆಎಲ್ ರಾಹುಲ್

ಭಾರತ C (ಪ್ಲೇಯಿಂಗ್ XI): ರುತುರಾಜ್ ಗಾಯಕ್‌ವಾಡ್ (ನಾಯಕ), ಇಶಾನ್ ಕಿಶನ್, ಸಾಯಿ ಸುದರ್ಶನ್, ರಜತ್ ಪಾಟಿದಾರ್, ಬಾಬಾ ಇಂದ್ರಜಿತ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಮಾನವ್ ಸುತಾರ್, ಅಂಶುಲ್ ಕಾಂಬೋಜ್, ಮಯಾಂಕ್ ಮಾರ್ಕಾಂಡೆ, ವಿಜಯಕುಮಾರ್ ವೈಶಾಕ್, ಸಂದೀಪ್ ವಾರಿಯರ್.

ಕಣದಲ್ಲಿರುವ ಕನ್ನಡಿಗರು:

  • ಮಯಾಂಕ್ ಅಗರ್ವಾಲ್ (ಭಾರತ ಎ)
  • ಪ್ರಸಿದ್ಧ್ ಕೃಷ್ಣ (ಭಾರತ ಎ)
  • ದೇವದತ್ ಪಡಿಕ್ಕಲ್ (ಭಾರತ ಡಿ)
  • ವಿಧ್ವತ್ ಕಾವೇರಪ್ಪ (ಭಾರತ ಡಿ)
  • ವಿಜಯಕುಮಾರ್ ವೈಶಾಕ್ (ಭಾರತ ಸಿ)

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಬಾರಿಯ ದುಲೀಪ್ ಟ್ರೋಫಿಯು ಸ್ಪೋರ್ಟ್ಸ್​ 18 ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಈ ಪಂದ್ಯವನ್ನು ಜಿಯೋ ಸಿನಿಮಾ ಆ್ಯಪ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

Published On - 10:06 am, Thu, 12 September 24

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?