Duleep Trophy 2024: ದುಲೀಪ್ ಟ್ರೋಫಿ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

Duleep Trophy 2024: ಭಾರತ ಟೆಸ್ಟ್ ತಂಡದ ಬಹುತೇಕ ಆಟಗಾರರು ಈ ಬಾರಿಯ ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿರುವ ಆಟಗಾರರು ದೇಶೀಯ ಟೂರ್ನಿ ಆಡುವುದನ್ನು ಬಿಸಿಸಿಐ ಕಡ್ಡಾಯಗೊಳಿಸಿದೆ. ಇದಾಗ್ಯೂ ಟೀಮ್ ಇಂಡಿಯಾದ ಹಿರಿಯ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್ ಹಾಗೂ ಜಸ್​ಪ್ರೀತ್ ಬುಮ್ರಾಗೆ ಅವರಿಗೆ ವಿನಾಯಿತಿ ನೀಡಲಾಗಿದೆ.

Duleep Trophy 2024: ದುಲೀಪ್ ಟ್ರೋಫಿ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ
Duleep Trophy 2024
Follow us
|

Updated on: Sep 04, 2024 | 8:35 AM

ಬಹುನಿರೀಕ್ಷಿತ ದುಲೀಪ್ ಟ್ರೋಫಿ ಟೆಸ್ಟ್ ಟೂರ್ನಿಯು ಗುರುವಾರದಿಂದ (ಸೆ.4) ಶುರುವಾಗಲಿದೆ. ನಾಲ್ಕು ತಂಡಗಳ ನಡುವಣ ಈ ಟೂರ್ನಿಯಲ್ಲಿ ಈ ಬಾರಿ ಟೀಮ್ ಇಂಡಿಯಾ ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇಲ್ಲಿ ಆಟಗಾರರನ್ನು A,B,C ಮತ್ತು D ತಂಡಗಳಾಗಿ ವಿಂಗಡಿಸಲಾಗಿದ್ದು, ಅದರಂತೆ ಎ ತಂಡವನ್ನು ಶುಭ್​ಮನ್ ಗಿಲ್ ಮುನ್ನಡೆಸಲಿದ್ದಾರೆ. ಇನ್ನು ಬಿ ತಂಡಕ್ಕೆ ಅಭಿಮನ್ಯು ಮಿಥುನ್ ನಾಯಕನಾದರೆ, ಸಿ ತಂಡಕ್ಕೆ ಶ್ರೇಯಸ್ ಅಯ್ಯರ್ ಕ್ಯಾಪ್ಟನ್ ಆಗಿದ್ದಾರೆ. ಹಾಗೆಯೇ ಡಿ ತಂಡವನ್ನು ರುತುರಾಜ್ ಗಾಯಕ್ವಾಡ್ ಮುನ್ನಡೆಸಲಿದ್ದಾರೆ.

ಹೇಗಿರಲಿದೆ ದುಲೀಪ್ ಟ್ರೋಫಿ?

ಈ ಬಾರಿಯ ದುಲೀಪ್ ಟ್ರೋಫಿ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಇಲ್ಲಿ ಪ್ರತಿ ತಂಡಗಳು ಮೂರು ಪಂದ್ಯಗಳನ್ನಾಡಲಿದೆ. ಆ ಬಳಿಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ. ಅಂದರೆ ಇಲ್ಲಿ ಯಾವುದೇ ಸೆಮಿಫೈನಲ್ ಮತ್ತು ಫೈನಲ್ ಪಂದ್ಯವಿರುವುದಿಲ್ಲ.

ಇದನ್ನೂ ಓದಿ: 2 ವರ್ಷ ಬೆಂಚ್ ಕಾಯಿಸಿದ RCBಗೆ ಬ್ಯಾಟ್ ಮೂಲಕವೇ ಉತ್ತರ ನೀಡಿದ ಮನೋಜ್ ಭಾಂಡಗೆ

ಅಂದಹಾಗೆ ದುಲೀಪ್ ಟ್ರೋಫಿ ಟೆಸ್ಟ್ ಮಾದರಿಯಲ್ಲಿ ನಡೆಯುತ್ತಿದ್ದರೂ, ಈ ಪಂದ್ಯವು ನಾಲ್ಕು ದಿನದಾಟಗಳಿಗೆ ಸೀಮಿತವಾಗಿರಲಿದೆ. ಹೀಗಾಗಿ ಇಲ್ಲಿ ಗೆಲುವಿನ ಜೊತೆಗೆ ಡ್ರಾ ಲೆಕ್ಕಾಚಾರಗಳು ಕೂಡ ಸಹ ಮುಖ್ಯವಾಗುತ್ತದೆ. ಅದರಂತೆ ಈ ಬಾರಿಯ ದುಲೀಪ್ ಟ್ರೋಫಿಯ ವೇಳಾಪಟ್ಟಿ ಈ ಕೆಳಗಿನಂತಿದೆ…

ದಿನಾಂಕ ತಂಡಗಳು ಸಮಯ  ಸ್ಥಳ
ಗುರುವಾರ, ಸೆಪ್ಟೆಂಬರ್ 5 ರಿಂದ 8 ರವರೆಗೆ ಟೀಮ್ A vs ಟೀಮ್ B 9:00 AM ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು
ಗುರುವಾರ, ಸೆಪ್ಟೆಂಬರ್ 5 ರಿಂದ 8 ರವರೆಗೆ ಟೀಮ್ C vs ಟೀಮ್ D 9:00 AM ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂ, ಅನಂತಪುರ
ಗುರುವಾರ, ಸೆಪ್ಟೆಂಬರ್ 12 ರಿಂದ 15 ರವರೆಗೆ ಟೀಮ್ A vs ಟೀಮ್ D 9:00 AM ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂ, ಅನಂತಪುರ
ಗುರುವಾರ, ಸೆಪ್ಟೆಂಬರ್ 12 ರಿಂದ 15 ರವರೆಗೆ ಟೀಮ್ B vs ಟೀಮ್ C 9:00 AM ಎಸಿಎ ಎಡಸಿಎ ಮೈದಾನ, ಅನಂತಪುರ
ಗುರುವಾರ, ಸೆಪ್ಟೆಂಬರ್ 19 ರಿಂದ  22 ರವರೆಗೆ ಟೀಮ್ B vs ಟೀಮ್ D 9:00 AM ಎಸಿಎ ಎಡಸಿಎ ಮೈದಾನ, ಅನಂತಪುರ
ಗುರುವಾರ, ಸೆಪ್ಟೆಂಬರ್ 19 ರಿಂದ 22 ರವರೆಗೆ ಟೀಮ್ A vs ಟೀಮ್ C 9:00 AM ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂ, ಅನಂತಪುರ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ