AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯ್ಯಯ್ಯೋ ಅಯ್ಯರ್: ಕನ್ನಡಕ ಧರಿಸಿ ಬ್ಯಾಟಿಂಗ್​; ಶೂನ್ಯಕ್ಕೆ ಔಟಾದ ಶ್ರೇಯಸ್​ಗೆ ಟ್ರೋಲಿಗರ ಕಾಟ

Shreyas Iyer: ಕೇವಲ 7 ಎಸೆತಗಳನ್ನು ಆಡಿದ ಶ್ರೇಯಸ್ ಅಯ್ಯರ್ ಖಾತೆ ತೆರೆಯದೆ ಔಟಾದರು. ಖಲೀಲ್ ಅಹ್ಮದ್ ಎಸೆತದಲ್ಲಿ ಔಟಾದ ಅಯ್ಯರ್ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಇದರ ನಂತರ, ಅಯ್ಯರ್ ಅವರನ್ನು ಟ್ರೋಲ್ ಮಾಡಲು ಶುರು ಮಾಡಿರುವ ನೆಟ್ಟಿಗರು ತರಹೆವಾರಿ ಕಾಮೆಂಟ್​ಗಳೊಂದಿಗೆ ಅವರ ಕಾಲೆಳೆದಿದ್ದಾರೆ.

ಅಯ್ಯಯ್ಯೋ ಅಯ್ಯರ್: ಕನ್ನಡಕ ಧರಿಸಿ ಬ್ಯಾಟಿಂಗ್​; ಶೂನ್ಯಕ್ಕೆ ಔಟಾದ ಶ್ರೇಯಸ್​ಗೆ ಟ್ರೋಲಿಗರ ಕಾಟ
ಶ್ರೇಯಸ್ ಅಯ್ಯರ್
ಪೃಥ್ವಿಶಂಕರ
|

Updated on: Sep 13, 2024 | 5:14 PM

Share

ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರ ವೃತ್ತಿಜೀವನ ಸದ್ಯಕ್ಕೆ ಹಳಿ ತಪ್ಪಿದ ರೈಲಿನಂತ್ತಾಗಿದೆ. ಸಾಕಷ್ಟು ಅವಕಾಶಗಳು ಸಿಕ್ಕರೂ ಅಯ್ಯರ್​ಗೆ ಫಾರ್ಮ್​ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಶ್ರೀಲಂಕಾ ಪ್ರವಾಸದಲ್ಲಿ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಲ್ಲಿ ವಿಫಲರಾಗಿದ್ದ ಅಯ್ಯರ್, ಆ ಬಳಿಕ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದರು. ಇದೀಗ ದುಲೀಪ್ ಟ್ರೋಫಿಯಲ್ಲೂ ಅಯ್ಯರ್ ಕಳಪೆ ಫಾರ್ಮ್ ಮುಂದುವರೆದಿದೆ. ಮೊದಲ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರೂ ಅಯ್ಯರ್ ತಂಡಕ್ಕೆ ಗೆಲುವು ಸಿಕ್ಕಿರಲಿಲ್ಲ. ಇದೀಗ ನಡೆಯುತ್ತಿರುವ ಎರಡನೇ ಪಂದ್ಯದಲ್ಲಿ ಅಯ್ಯರ್​ಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಕ್ರಿಕೆಟ್​ನಲ್ಲಿ ಬ್ಯಾಟರೊಬ್ಬ ಶೂನ್ಯಕ್ಕೆ ಔಟಾಗುವುದು ಸರ್ವೆ ಸಾಮಾನ್ಯ. ಆದರೆ ಶ್ರೇಯಸ್ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಟ್ರೋಲ್ ಮಾಡಲಾಗುತ್ತಿದೆ. ಇದಕ್ಕೆ ಕಾರಣ ಅಯ್ಯರ್ ಶೂನ್ಯಕ್ಕೆ ಔಟಾದುದ್ದಲ್ಲ. ಬದಲಿಗೆ ಅವರು ಕಪ್ಪು ಕನ್ನಡಕ ಧರಿಸಿ ಬ್ಯಾಟಿಂಗ್​ಗೆ ಬಂದಿದ್ದು.

ಕಪ್ಪು ಕನ್ನಡಕ ಧರಿಸಿ ಬ್ಯಾಟಿಂಗ್​ಗೆ ಇಳಿದ ಅಯ್ಯರ್

ವಾಸ್ತವವಾಗಿ ದುಲೀಪ್ ಟ್ರೋಫಿಯ ಎರಡನೇ ಸುತ್ತಿನ ಪಂದ್ಯದಲ್ಲಿ ಭಾರತ ಎ ಹಾಗೂ ಭಾರತ ಡಿ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಭಾರತ ಡಿ ತಂಡದ ನಾಯಕನಾಗಿರುವ ಶ್ರೇಯಸ್ ಅಯ್ಯರ್ ಕನ್ನಡಕ ಹಾಕಿಕೊಂಡು ಬ್ಯಾಟಿಂಗ್ ಮಾಡಲು ಕ್ರೀಸ್​ಗೆ ಬಂದಿದ್ದರು. ಆದರೆ ಕೇವಲ 7 ಎಸೆತಗಳನ್ನು ಆಡಿದ ಅಯ್ಯರ್ ಖಾತೆ ತೆರೆಯದೆ ಔಟಾದರು. ಖಲೀಲ್ ಅಹ್ಮದ್ ಎಸೆತದಲ್ಲಿ ಔಟಾದ ಅಯ್ಯರ್ ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡರು. ಇದರ ನಂತರ, ಅಯ್ಯರ್ ಅವರನ್ನು ಟ್ರೋಲ್ ಮಾಡಲು ಶುರು ಮಾಡಿರುವ ನೆಟ್ಟಿಗರು ತರಹೆವಾರಿ ಕಾಮೆಂಟ್​ಗಳೊಂದಿಗೆ ಅವರ ಕಾಲೆಳೆದಿದ್ದಾರೆ. ಅವುಗಳ ಒಂದಿಷ್ಟು ಝಲಕ್ ಇಲ್ಲಿದೆ.

ಪಂದ್ಯ ಹೀಗಿದೆ

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿರುವ ಭಾರತ ಎ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 290 ರನ್ ಗಳಿಸಿತು. ತಂಡದ ಪರ ಶಮ್ಸ್ ಮುಲಾನಿ 89 ರನ್‌ಗಳ ಅತ್ಯಧಿಕ ಇನ್ನಿಂಗ್ಸ್‌ ಆಡಿದರು. ಅವರ ಇನ್ನಿಂಗ್ಸ್‌ನಲ್ಲಿ 8 ಬೌಂಡರಿ ಮತ್ತು 3 ಸಿಕ್ಸರ್‌ಗಳು ಸೇರಿದ್ದವು. ತನುಷ್ ಕೋಟ್ಯಾನ್ ಕೂಡ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ. ಇನ್ನು ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತ ಡಿ ತಂಡ 183 ರನ್​ಗಳಿಗೆ ಆಲೌಟ್ ಆಗಿದೆ. ತಂಡದ ಪರ ಕನ್ನಡಿಗ ದೇವದತ್ ಪಡಿಕ್ಕಲ್ 92 ರನ್​ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ, ಉಳಿದವರು ಹೆಚ್ಚಾಗಿ ಒಂದಂಕಿಗೆ ಸುಸ್ತಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ