AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy 2025: ದುಲೀಪ್ ಟ್ರೋಫಿ ಎಂದರೇನು?

ದುಲೀಪ್ ಟ್ರೋಫಿಯನ್ನು 1961-62 ರಲ್ಲಿ ಮೊದಲ ಬಾರಿಗೆ ಆಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಭಾರತದ ವಿವಿಧ ಭೌಗೋಳಿಕ ವಲಯಗಳನ್ನು ಪ್ರತಿನಿಧಿಸುವ ತಂಡಗಳು ಕಣಕ್ಕಿಳಿಯುತ್ತವೆ. ಈ ಟೂರ್ನಿಯಲ್ಲಿ ಒಟ್ಟು 6 ವಲಯ ತಂಡಗಳು ಕಣಕ್ಕಿಳಿಯುತ್ತವೆ. ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ.

Duleep Trophy 2025: ದುಲೀಪ್ ಟ್ರೋಫಿ ಎಂದರೇನು?
Duleep Trophy
ಝಾಹಿರ್ ಯೂಸುಫ್
|

Updated on: Aug 17, 2025 | 2:07 PM

Share

Duleep Trophy 2025: ದುಲೀಪ್ ಟ್ರೋಫಿ 2025 ಆಗಸ್ಟ್ 28 ರಿಂದ ಶುರುವಾಗಲಿದೆ. ಈ ಬಾರಿಯ ಟೂರ್ನಿಯು ಎಲ್ಲಾ ಪಂದ್ಯಗಳು ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯಲಿದೆ. ವಿಶೇಷ ಎಂದರೆ ಈ ಬಾರಿ ಕಣಕ್ಕಿಳಿಯಲಿರುವ 6 ತಂಡಗಳಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕೂಡ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ 2025ರ ದುಲೀಪ್ ಟ್ರೋಫಿಯಲ್ಲಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಏನಿದು ದುಲೀಪ್ ಟ್ರೋಫಿ?

ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ.

ದುಲೀಪ್ ಟ್ರೋಫಿ ಯಾವಾಗ ಶುರುವಾಯಿತು?

ದುಲೀಪ್ ಟ್ರೋಫಿಯನ್ನು 1961-62 ರಲ್ಲಿ ಮೊದಲ ಬಾರಿಗೆ ಆಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಭಾರತದ ವಿವಿಧ ಭೌಗೋಳಿಕ ವಲಯಗಳನ್ನು ಪ್ರತಿನಿಧಿಸುವ ತಂಡಗಳು ಕಣಕ್ಕಿಳಿಯುತ್ತವೆ.

ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ತಂಡಗಳಾವುವು?

ಈ ಟೂರ್ನಿಯಲ್ಲಿ ಒಟ್ಟು 6 ವಲಯ ತಂಡಗಳು ಕಣಕ್ಕಿಳಿಯುತ್ತವೆ. ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ.

  • ಕೇಂದ್ರ ವಲಯ
  • ದಕ್ಷಿಣ ವಲಯ
  • ಪೂರ್ವ ವಲಯ
  • ಪಶ್ಚಿಮ ವಲಯ
  • ಉತ್ತರ ವಲಯ
  • ಈಶಾನ್ಯ ವಲಯ

ದುಲೀಪ್ ಟ್ರೋಫಿಯ ವಲಯ ರಾಜ್ಯಗಳಾವುವು?

  • ಉತ್ತರ ವಲಯ : ಚಂಡೀಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಸರ್ವೀಸಸ್ ತಂಡಗಳು.
  • ದಕ್ಷಿಣ ವಲಯ : ಆಂಧ್ರಪ್ರದೇಶ, ಗೋವಾ, ಹೈದರಾಬಾದ್ ಕರ್ನಾಟಕ, ಕೇರಳ, ಪಾಂಡಿಚೇರಿ ಮತ್ತು ತಮಿಳುನಾಡು.
  • ಕೇಂದ್ರ ವಲಯ : ಛತ್ತೀಸ್‌ಗಢ, ಮಧ್ಯಪ್ರದೇಶ, ರೈಲ್ವೆ, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ವಿದರ್ಭ.
  • ಪೂರ್ವ ವಲಯ : ಅಸ್ಸಾಂ, ಬಿಹಾರ, ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ತ್ರಿಪುರಾ.
  • ಈಶಾನ್ಯ ವಲಯ : ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ.
  • ಪಶ್ಚಿಮ ವಲಯ : ಬರೋಡಾ, ಗುಜರಾತ್, ಮಹಾರಾಷ್ಟ್ರ, ಮುಂಬೈ ಮತ್ತು ಸೌರಾಷ್ಟ್ರ.

ಈ ರಾಜ್ಯಗಳ ಆಟಗಾರರು ಆಯಾ ವಲಯಗಳ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಹಿಂದೆ ಈ ವಲಯಗಳ ತಂಡಗಳನ್ನು ಎಲೈಟ್​​ ಹಾಗೂ ಇಂಡಿಯಾ ರೆಡ್, ಬ್ಲೂ, ಗ್ರೀನ್… ಹೆಸರಿನಲ್ಲಿ ಕಣಕ್ಕಿಳಿಸಲಾಗಿತ್ತು. ಹಾಗೆಯೇ ಇಂಡಿಯಾ A,B,C,D,E,F  ಎಂದು ಹೆಸರಿನೊಂದಿಗೆ ಸಹ ಆಡಲಾಗಿತ್ತು. ಆದರೆ ಈ ಬಾರಿ ಮತ್ತೆ ವಲಯ ತಂಡಗಳಾಗಿ ಟೂರ್ನಿಯನ್ನು ಆಡಲಾಗುತ್ತದೆ.

ಇದನ್ನೂ ಓದಿ: IPL 2026: ಇಬ್ಬರ ಡೀಲ್… ಸಂಜು ಸ್ಯಾಮ್ಸನ್ ಮೇಲೆ KKR ಕಣ್ಣು

ದುಲೀಪ್ ಟ್ರೋಫಿಯ ಹಿಂದಿನ ವಿಜೇತರು ಯಾರು?

  • 196162 – ಪಶ್ಚಿಮ ವಲಯ
  • 1962–63 – ಪಶ್ಚಿಮ ವಲಯ
  • 1963–64 – ಪಶ್ಚಿಮ ವಲಯ ಮತ್ತು ದಕ್ಷಿಣ ವಲಯ (ಜಂಟಿ ವಿಜೇತರು)
  • 196465 – ಪಶ್ಚಿಮ ವಲಯ
  • 1965–66 – ದಕ್ಷಿಣ ವಲಯ
  • 1966–67 – ದಕ್ಷಿಣ ವಲಯ
  • 1967–68 – ದಕ್ಷಿಣ ವಲಯ
  • 1968–69 – ಪಶ್ಚಿಮ ವಲಯ
  • 1969–70 – ಪಶ್ಚಿಮ ವಲಯ
  • 1970–71 – ದಕ್ಷಿಣ ವಲಯ
  • 1971–72 – ಕೇಂದ್ರ ವಲಯ
  • 1972–73 – ಪಶ್ಚಿಮ ವಲಯ
  • 1973–74 – ಕೇಂದ್ರ ವಲಯ
  • 1974–75 – ದಕ್ಷಿಣ ವಲಯ
  • 1975–76 – ದಕ್ಷಿಣ ವಲಯ
  • 1976–77 – ಪಶ್ಚಿಮ ವಲಯ
  • 1977–78 – ಪಶ್ಚಿಮ ವಲಯ
  • 1978–79 – ಉತ್ತರ ವಲಯ
  • 1979–80 – ಉತ್ತರ ವಲಯ
  • 1980–81 – ಪಶ್ಚಿಮ ವಲಯ
  • 1981–82 – ಪಶ್ಚಿಮ ವಲಯ
  • 1982–83 – ಉತ್ತರ ವಲಯ
  • 1983–84 – ಉತ್ತರ ವಲಯ
  • 1984–85 – ದಕ್ಷಿಣ ವಲಯ
  • 1985–86 – ಪಶ್ಚಿಮ ವಲಯ
  • 1986–87 – ದಕ್ಷಿಣ ವಲಯ
  • 1987–88 – ಉತ್ತರ ವಲಯ
  • 1988–89 – ಉತ್ತರ ವಲಯ ಮತ್ತು ಪಶ್ಚಿಮ ವಲಯ (ಜಂಟಿ ವಿಜೇತರು)
  • 198990 – ದಕ್ಷಿಣ ವಲಯ
  • 1990–91 – ಉತ್ತರ ವಲಯ
  • 1991–92 – ಉತ್ತರ ವಲಯ
  • 1992–93 – ಉತ್ತರ ವಲಯ
  • 1993–94 – ಉತ್ತರ ವಲಯ
  • 1994–95 – ಉತ್ತರ ವಲಯ
  • 1995–96 – ದಕ್ಷಿಣ ವಲಯ
  • 1996–97 – ಕೇಂದ್ರ ವಲಯ
  • 1997–98 – ಕೇಂದ್ರ ವಲಯ ಮತ್ತು ಪಶ್ಚಿಮ ವಲಯ (ಜಂಟಿ ವಿಜೇತರು)
  • 199899 – ಕೇಂದ್ರ ವಲಯ
  • 1999–2000 – ಉತ್ತರ ವಲಯ
  • 2000–01 – ಉತ್ತರ ವಲಯ
  • 2001–02 – ಪಶ್ಚಿಮ ವಲಯ
  • 2002–03 – ಎಲೈಟ್ ಸಿ
  • 2003–04 – ಉತ್ತರ ವಲಯ
  • 2004–05 – ಕೇಂದ್ರ ವಲಯ
  • 2005–06 – ಪಶ್ಚಿಮ ವಲಯ
  • 2006–07 – ಉತ್ತರ ವಲಯ
  • 2007–08 – ಉತ್ತರ ವಲಯ
  • 2008–09 – ಪಶ್ಚಿಮ ವಲಯ
  • 2009–10 – ಪಶ್ಚಿಮ ವಲಯ
  • 2010–11 – ದಕ್ಷಿಣ ವಲಯ
  • 2011–12 – ಪೂರ್ವ ವಲಯ
  • 2012–13 – ಪೂರ್ವ ವಲಯ
  • 2013–14 – ಉತ್ತರ ವಲಯ ಮತ್ತು ದಕ್ಷಿಣ ವಲಯ (ಜಂಟಿ ವಿಜೇತರು)
  • 201415 – ಕೇಂದ್ರ ವಲಯ
  • 2016–17 – ಇಂಡಿಯಾ ಬ್ಲೂ
  • 2017–18 – ಇಂಡಿಯಾ ರೆಡ್
  • 2018–19 – ಇಂಡಿಯಾ ಬ್ಲೂ
  • 2019–20 – ಇಂಡಿಯಾ ರೆಡ್
  • 2022–23 – ಪಶ್ಚಿಮ ವಲಯ
  • 2023 – ದಕ್ಷಿಣ ವಲಯ
  • 2024- ಇಂಡಿಯಾ ಸಿ

Follow Us
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್
ಬರೋಬ್ಬರಿ 6 ಕಿ.ಮೀ. ಓಡಿದ ದಳಪತಿ ವಿಜಯ್