AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy: ಟೂರ್ನಿ ಆರಂಭಕ್ಕೂ ಮುನ್ನವೇ 2 ತಂಡಗಳು ಸೆಮಿಫೈನಲ್​ಗೆ ಎಂಟ್ರಿ..!

Duleep trophy 2025: ದುಲೀಪ್ ಟ್ರೋಫಿ ಟೂರ್ನಿಯು ಆಗಸ್ಟ್ 28 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಸೆಪ್ಟೆಂಬರ್ 11 ರಿಂದ ಆರಂಭವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಎರಡು ಟೀಮ್​ಗಳು ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಿದೆ.

Duleep Trophy: ಟೂರ್ನಿ ಆರಂಭಕ್ಕೂ ಮುನ್ನವೇ 2 ತಂಡಗಳು ಸೆಮಿಫೈನಲ್​ಗೆ ಎಂಟ್ರಿ..!
Duleep Trophy 2025
ಝಾಹಿರ್ ಯೂಸುಫ್
|

Updated on: Aug 28, 2025 | 7:29 AM

Share

ದೇಶೀಯ ಅಂಗಳದ ಟೆಸ್ಟ್ ಟೂರ್ನಿ ದುಲೀಪ್ ಟ್ರೋಫಿ (Duleep Trophy 2025) ಪಂದ್ಯಾವಳಿ ಇಂದಿನಿಂದ (ಆಗಸ್ಟ್ 28) ಶುರುವಾಗಲಿದೆ. ನಾಕೌಟ್ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಮೆಂಟ್ ನಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಎರಡು ಟೀಮ್​ಗಳು ಈಗಾಗಲೇ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.

ಸೆಮಿಫೈನಲ್​ಗೆ ಡೈರೆಕ್ಟ್ ಎಂಟ್ರಿ ಯಾಕೆ?

ಈ ಬಾರಿಯ ದುಲೀಪ್ ಟ್ರೋಫಿ ನಡೆಯುತ್ತಿರುವುದು ನಾಕೌಟ್ ಮಾದರಿಯಲ್ಲಿ. ಇಲ್ಲಿ ಮೊದಲ ಸುತ್ತಿನಲ್ಲಿ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದೆ. ಆರು ತಂಡಗಳನ್ನು ಕ್ವಾರ್ಟರ್ ಫೈನಲ್ ನಲ್ಲಿ ಮುಖಾಮುಖಿಯಾಗಿಸಲು ಸಾಧ್ಯವಿಲ್ಲ. ಹೀಗಾಗಿ 4 ತಂಡಗಳನ್ನು ಮೊದಲ ಸುತ್ತಿನಲ್ಲಿ ಕಣಕ್ಕಿಳಿಸಿ ಮತ್ತೆರಡು ತಂಡಗಳಿಗೆ ನೇರವಾಗಿ ಸೆಮಿಫೈನಲ್ ಅರ್ಹತೆ ನೀಡಲಾಗಿದೆ.

ಇಲ್ಲಿ ಸೆಮಿಫೈನಲ್​ಗೆ ಪ್ರವೇಶಿಸಿರುವ ತಂಡಗಳು 2023 ರ ದುಲೀಪ್ ಟ್ರೋಫಿಯಲ್ಲಿ ಫೈನಲ್ ಆಡಿದ ಟೀಮ್ ಗಳು. ಅಂದರೆ ಕೊನೆಯ ಬಾರಿ ನಡೆದ ವಲಯವಾರು ದುಲೀಪ್ ಟ್ರೋಫಿಯಲ್ಲಿ ಫೈನಲ್ ಆಡಿದ ತಂಡಗಳನ್ನು ನೇರವಾಗಿ ಸೆಮಿಫೈನಲ್​ಗೆ ಆಯ್ಕೆ ಮಾಡಲಾಗಿದೆ.

ಅದರಂತೆ ಈ ಬಾರಿಯ ದುಲೀಪ್ ಟ್ರೋಫಿ ಟೂರ್ನಿಯ ಸೆಮಿಫೈನಲ್ ನಲ್ಲಿ ದಕ್ಷಿಣ ವಲಯ ಹಾಗೂ ಪಶ್ಚಿಮ ವಲಯ ತಂಡಗಳು ಕಣಕ್ಕಿಳಿಯಲಿವೆ.

ಏನಿದು ದುಲೀಪ್ ಟ್ರೋಫಿ?

ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ.

ದುಲೀಪ್ ಟ್ರೋಫಿ ಯಾವಾಗ ಶುರುವಾಯಿತು?

ದುಲೀಪ್ ಟ್ರೋಫಿಯನ್ನು 1961-62 ರಲ್ಲಿ ಮೊದಲ ಬಾರಿಗೆ ಆಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಭಾರತದ ವಿವಿಧ ಭೌಗೋಳಿಕ ವಲಯಗಳನ್ನು ಪ್ರತಿನಿಧಿಸುವ ತಂಡಗಳು ಕಣಕ್ಕಿಳಿಯುತ್ತವೆ.

ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ತಂಡಗಳಾವುವು?

ಈ ಟೂರ್ನಿಯಲ್ಲಿ ಒಟ್ಟು 6 ವಲಯ ತಂಡಗಳು ಕಣಕ್ಕಿಳಿಯುತ್ತವೆ. ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ.

  • ಕೇಂದ್ರ ವಲಯ
  • ದಕ್ಷಿಣ ವಲಯ
  • ಪೂರ್ವ ವಲಯ
  • ಪಶ್ಚಿಮ ವಲಯ
  • ಉತ್ತರ ವಲಯ
  • ಈಶಾನ್ಯ ವಲಯ

ದುಲೀಪ್ ಟ್ರೋಫಿಯ ವಲಯ ರಾಜ್ಯಗಳಾವುವು?

  • ಉತ್ತರ ವಲಯ : ಚಂಡೀಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಸರ್ವೀಸಸ್ ತಂಡಗಳು.
  • ದಕ್ಷಿಣ ವಲಯ : ಆಂಧ್ರಪ್ರದೇಶ, ಗೋವಾ, ಹೈದರಾಬಾದ್ ಕರ್ನಾಟಕ, ಕೇರಳ, ಪಾಂಡಿಚೇರಿ ಮತ್ತು ತಮಿಳುನಾಡು.
  • ಕೇಂದ್ರ ವಲಯ : ಛತ್ತೀಸ್‌ಗಢ, ಮಧ್ಯಪ್ರದೇಶ, ರೈಲ್ವೆ, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ವಿದರ್ಭ.
  • ಪೂರ್ವ ವಲಯ : ಅಸ್ಸಾಂ, ಬಿಹಾರ, ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ತ್ರಿಪುರಾ.
  • ಈಶಾನ್ಯ ವಲಯ : ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ.
  • ಪಶ್ಚಿಮ ವಲಯ : ಬರೋಡಾ, ಗುಜರಾತ್, ಮಹಾರಾಷ್ಟ್ರ, ಮುಂಬೈ ಮತ್ತು ಸೌರಾಷ್ಟ್ರ.

ಇದನ್ನೂ ಓದಿ: Duleep Trophy 2025: ದುಲೀಪ್ ಟ್ರೋಫಿ ಟೂರ್ನಿಗೆ ಎಲ್ಲಾ ತಂಡಗಳು ಪ್ರಕಟ

ಈ ರಾಜ್ಯಗಳ ಆಟಗಾರರು ಆಯಾ ವಲಯಗಳ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಹಿಂದೆ ಈ ವಲಯಗಳ ತಂಡಗಳನ್ನು ಎಲೈಟ್​​ ಹಾಗೂ ಇಂಡಿಯಾ ರೆಡ್, ಬ್ಲೂ, ಗ್ರೀನ್… ಹೆಸರಿನಲ್ಲಿ ಕಣಕ್ಕಿಳಿಸಲಾಗಿತ್ತು. ಹಾಗೆಯೇ ಇಂಡಿಯಾ A,B,C,D,E,F ಎಂದು ಹೆಸರಿನೊಂದಿಗೆ ಸಹ ಆಡಲಾಗಿತ್ತು. ಆದರೆ ಈ ಬಾರಿ ಮತ್ತೆ ವಲಯ ತಂಡಗಳಾಗಿ ಟೂರ್ನಿಯನ್ನು ಆಡಲಾಗುತ್ತದೆ.

ದುಲೀಪ್ ಟ್ರೋಫಿ 2025 ವೇಳಾಪಟ್ಟಿ:

ಹಂತ ಪಂದ್ಯ ದಿನಾಂಕ ಸ್ಥಳ
ಕ್ವಾರ್ಟರ್-ಫೈನಲ್ 1 ಉತ್ತರ ವಲಯ vs ಪೂರ್ವ ವಲಯ ಆಗಸ್ಟ್ 28-31 ಬಿಸಿಸಿಐ ಸಿಒಇ ಮೈದಾನ 1, ಬೆಂಗಳೂರು
ಕ್ವಾರ್ಟರ್-ಫೈನಲ್ 2 ಕೇಂದ್ರ ವಲಯ vs ಈಶಾನ್ಯ ವಲಯ ಆಗಸ್ಟ್ 28-31 ಬಿಸಿಸಿಐ ಸಿಒಇ ಮೈದಾನ 2, ಬೆಂಗಳೂರು
ಸೆಮಿಫೈನಲ್ 1 ಪಶ್ಚಿಮ ವಲಯ vs QF1 ವಿಜೇತ ಸೆಪ್ಟೆಂಬರ್ 4-7 ಬಿಸಿಸಿಐ ಸಿಒಇ ಮೈದಾನ 1, ಬೆಂಗಳೂರು
ಸೆಮಿಫೈನಲ್ 2 ದಕ್ಷಿಣ ವಲಯ vs QF2 ವಿಜೇತ ಸೆಪ್ಟೆಂಬರ್ 4-7 ಬಿಸಿಸಿಐ ಸಿಒಇ ಮೈದಾನ 2, ಬೆಂಗಳೂರು
ಫೈನಲ್ ಸೆಮೀಸ್ 1 ವಿಜೇತ vs ಸೆಮೀಸ್ ವಿಜೇತ 2 ಸೆಪ್ಟೆಂಬರ್ 11-15 ಬಿಸಿಸಿಐ ಸಿಒಇ ಮೈದಾನ 1, ಬೆಂಗಳೂರು

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್