AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy: ಟೂರ್ನಿ ಆರಂಭಕ್ಕೂ ಮುನ್ನವೇ 2 ತಂಡಗಳು ಸೆಮಿಫೈನಲ್​ಗೆ ಎಂಟ್ರಿ..!

Duleep trophy 2025: ದುಲೀಪ್ ಟ್ರೋಫಿ ಟೂರ್ನಿಯು ಆಗಸ್ಟ್ 28 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಸೆಪ್ಟೆಂಬರ್ 11 ರಿಂದ ಆರಂಭವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಎರಡು ಟೀಮ್​ಗಳು ನೇರವಾಗಿ ಸೆಮಿಫೈನಲ್​ಗೆ ಪ್ರವೇಶಿಸಿದೆ.

Duleep Trophy: ಟೂರ್ನಿ ಆರಂಭಕ್ಕೂ ಮುನ್ನವೇ 2 ತಂಡಗಳು ಸೆಮಿಫೈನಲ್​ಗೆ ಎಂಟ್ರಿ..!
Duleep Trophy 2025
ಝಾಹಿರ್ ಯೂಸುಫ್
|

Updated on: Aug 28, 2025 | 7:29 AM

Share

ದೇಶೀಯ ಅಂಗಳದ ಟೆಸ್ಟ್ ಟೂರ್ನಿ ದುಲೀಪ್ ಟ್ರೋಫಿ (Duleep Trophy 2025) ಪಂದ್ಯಾವಳಿ ಇಂದಿನಿಂದ (ಆಗಸ್ಟ್ 28) ಶುರುವಾಗಲಿದೆ. ನಾಕೌಟ್ ಮಾದರಿಯಲ್ಲಿ ನಡೆಯಲಿರುವ ಈ ಟೂರ್ನಮೆಂಟ್ ನಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳಲ್ಲಿ ಎರಡು ಟೀಮ್​ಗಳು ಈಗಾಗಲೇ ಸೆಮಿ ಫೈನಲ್‌ಗೆ ಪ್ರವೇಶಿಸಿದೆ.

ಸೆಮಿಫೈನಲ್​ಗೆ ಡೈರೆಕ್ಟ್ ಎಂಟ್ರಿ ಯಾಕೆ?

ಈ ಬಾರಿಯ ದುಲೀಪ್ ಟ್ರೋಫಿ ನಡೆಯುತ್ತಿರುವುದು ನಾಕೌಟ್ ಮಾದರಿಯಲ್ಲಿ. ಇಲ್ಲಿ ಮೊದಲ ಸುತ್ತಿನಲ್ಲಿ ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆಯಲಿದೆ. ಆರು ತಂಡಗಳನ್ನು ಕ್ವಾರ್ಟರ್ ಫೈನಲ್ ನಲ್ಲಿ ಮುಖಾಮುಖಿಯಾಗಿಸಲು ಸಾಧ್ಯವಿಲ್ಲ. ಹೀಗಾಗಿ 4 ತಂಡಗಳನ್ನು ಮೊದಲ ಸುತ್ತಿನಲ್ಲಿ ಕಣಕ್ಕಿಳಿಸಿ ಮತ್ತೆರಡು ತಂಡಗಳಿಗೆ ನೇರವಾಗಿ ಸೆಮಿಫೈನಲ್ ಅರ್ಹತೆ ನೀಡಲಾಗಿದೆ.

ಇಲ್ಲಿ ಸೆಮಿಫೈನಲ್​ಗೆ ಪ್ರವೇಶಿಸಿರುವ ತಂಡಗಳು 2023 ರ ದುಲೀಪ್ ಟ್ರೋಫಿಯಲ್ಲಿ ಫೈನಲ್ ಆಡಿದ ಟೀಮ್ ಗಳು. ಅಂದರೆ ಕೊನೆಯ ಬಾರಿ ನಡೆದ ವಲಯವಾರು ದುಲೀಪ್ ಟ್ರೋಫಿಯಲ್ಲಿ ಫೈನಲ್ ಆಡಿದ ತಂಡಗಳನ್ನು ನೇರವಾಗಿ ಸೆಮಿಫೈನಲ್​ಗೆ ಆಯ್ಕೆ ಮಾಡಲಾಗಿದೆ.

ಅದರಂತೆ ಈ ಬಾರಿಯ ದುಲೀಪ್ ಟ್ರೋಫಿ ಟೂರ್ನಿಯ ಸೆಮಿಫೈನಲ್ ನಲ್ಲಿ ದಕ್ಷಿಣ ವಲಯ ಹಾಗೂ ಪಶ್ಚಿಮ ವಲಯ ತಂಡಗಳು ಕಣಕ್ಕಿಳಿಯಲಿವೆ.

ಏನಿದು ದುಲೀಪ್ ಟ್ರೋಫಿ?

ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ.

ದುಲೀಪ್ ಟ್ರೋಫಿ ಯಾವಾಗ ಶುರುವಾಯಿತು?

ದುಲೀಪ್ ಟ್ರೋಫಿಯನ್ನು 1961-62 ರಲ್ಲಿ ಮೊದಲ ಬಾರಿಗೆ ಆಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಭಾರತದ ವಿವಿಧ ಭೌಗೋಳಿಕ ವಲಯಗಳನ್ನು ಪ್ರತಿನಿಧಿಸುವ ತಂಡಗಳು ಕಣಕ್ಕಿಳಿಯುತ್ತವೆ.

ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ತಂಡಗಳಾವುವು?

ಈ ಟೂರ್ನಿಯಲ್ಲಿ ಒಟ್ಟು 6 ವಲಯ ತಂಡಗಳು ಕಣಕ್ಕಿಳಿಯುತ್ತವೆ. ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ.

  • ಕೇಂದ್ರ ವಲಯ
  • ದಕ್ಷಿಣ ವಲಯ
  • ಪೂರ್ವ ವಲಯ
  • ಪಶ್ಚಿಮ ವಲಯ
  • ಉತ್ತರ ವಲಯ
  • ಈಶಾನ್ಯ ವಲಯ

ದುಲೀಪ್ ಟ್ರೋಫಿಯ ವಲಯ ರಾಜ್ಯಗಳಾವುವು?

  • ಉತ್ತರ ವಲಯ : ಚಂಡೀಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಸರ್ವೀಸಸ್ ತಂಡಗಳು.
  • ದಕ್ಷಿಣ ವಲಯ : ಆಂಧ್ರಪ್ರದೇಶ, ಗೋವಾ, ಹೈದರಾಬಾದ್ ಕರ್ನಾಟಕ, ಕೇರಳ, ಪಾಂಡಿಚೇರಿ ಮತ್ತು ತಮಿಳುನಾಡು.
  • ಕೇಂದ್ರ ವಲಯ : ಛತ್ತೀಸ್‌ಗಢ, ಮಧ್ಯಪ್ರದೇಶ, ರೈಲ್ವೆ, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ವಿದರ್ಭ.
  • ಪೂರ್ವ ವಲಯ : ಅಸ್ಸಾಂ, ಬಿಹಾರ, ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ತ್ರಿಪುರಾ.
  • ಈಶಾನ್ಯ ವಲಯ : ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ.
  • ಪಶ್ಚಿಮ ವಲಯ : ಬರೋಡಾ, ಗುಜರಾತ್, ಮಹಾರಾಷ್ಟ್ರ, ಮುಂಬೈ ಮತ್ತು ಸೌರಾಷ್ಟ್ರ.

ಇದನ್ನೂ ಓದಿ: Duleep Trophy 2025: ದುಲೀಪ್ ಟ್ರೋಫಿ ಟೂರ್ನಿಗೆ ಎಲ್ಲಾ ತಂಡಗಳು ಪ್ರಕಟ

ಈ ರಾಜ್ಯಗಳ ಆಟಗಾರರು ಆಯಾ ವಲಯಗಳ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಹಿಂದೆ ಈ ವಲಯಗಳ ತಂಡಗಳನ್ನು ಎಲೈಟ್​​ ಹಾಗೂ ಇಂಡಿಯಾ ರೆಡ್, ಬ್ಲೂ, ಗ್ರೀನ್… ಹೆಸರಿನಲ್ಲಿ ಕಣಕ್ಕಿಳಿಸಲಾಗಿತ್ತು. ಹಾಗೆಯೇ ಇಂಡಿಯಾ A,B,C,D,E,F ಎಂದು ಹೆಸರಿನೊಂದಿಗೆ ಸಹ ಆಡಲಾಗಿತ್ತು. ಆದರೆ ಈ ಬಾರಿ ಮತ್ತೆ ವಲಯ ತಂಡಗಳಾಗಿ ಟೂರ್ನಿಯನ್ನು ಆಡಲಾಗುತ್ತದೆ.

ದುಲೀಪ್ ಟ್ರೋಫಿ 2025 ವೇಳಾಪಟ್ಟಿ:

ಹಂತ ಪಂದ್ಯ ದಿನಾಂಕ ಸ್ಥಳ
ಕ್ವಾರ್ಟರ್-ಫೈನಲ್ 1 ಉತ್ತರ ವಲಯ vs ಪೂರ್ವ ವಲಯ ಆಗಸ್ಟ್ 28-31 ಬಿಸಿಸಿಐ ಸಿಒಇ ಮೈದಾನ 1, ಬೆಂಗಳೂರು
ಕ್ವಾರ್ಟರ್-ಫೈನಲ್ 2 ಕೇಂದ್ರ ವಲಯ vs ಈಶಾನ್ಯ ವಲಯ ಆಗಸ್ಟ್ 28-31 ಬಿಸಿಸಿಐ ಸಿಒಇ ಮೈದಾನ 2, ಬೆಂಗಳೂರು
ಸೆಮಿಫೈನಲ್ 1 ಪಶ್ಚಿಮ ವಲಯ vs QF1 ವಿಜೇತ ಸೆಪ್ಟೆಂಬರ್ 4-7 ಬಿಸಿಸಿಐ ಸಿಒಇ ಮೈದಾನ 1, ಬೆಂಗಳೂರು
ಸೆಮಿಫೈನಲ್ 2 ದಕ್ಷಿಣ ವಲಯ vs QF2 ವಿಜೇತ ಸೆಪ್ಟೆಂಬರ್ 4-7 ಬಿಸಿಸಿಐ ಸಿಒಇ ಮೈದಾನ 2, ಬೆಂಗಳೂರು
ಫೈನಲ್ ಸೆಮೀಸ್ 1 ವಿಜೇತ vs ಸೆಮೀಸ್ ವಿಜೇತ 2 ಸೆಪ್ಟೆಂಬರ್ 11-15 ಬಿಸಿಸಿಐ ಸಿಒಇ ಮೈದಾನ 1, ಬೆಂಗಳೂರು

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ