
ದುಲೀಪ್ ಟ್ರೋಫಿಯೊಂದಿಗೆ (Duleep Trophy 2026) ಭಾರತೀಯ ದೇಶೀಯ ಕ್ರಿಕೆಟ್ನ ಹೊಸ ಸೀಸನ್ ಪ್ರಾರಂಭವಾಗಲಿದೆ. ಆಗಸ್ಟ್ 23 ರಿಂದ ಆರಂಭವಾಗಲಿರುವ ಈ ಟೂರ್ನಿಯ ಮೊದಲ ದಿನದಂದು ಎರಡು ಕ್ವಾರ್ಟರ್-ಫೈನಲ್ ಪಂದ್ಯಗಳು ನಡೆಯಲಿವೆ. ಇದರಲ್ಲಿ ಪೂರ್ವ ವಲಯ ತಂಡವು ಈಶಾನ್ಯ ವಲಯ ತಂಡವನ್ನು ಎದುರಿಸಿದರೆ, ಇತ್ತ ಉತ್ತರ ವಲಯವು ಪಶ್ಚಿಮ ವಲಯವನ್ನು ಎದುರಿಸಲಿದೆ. ಎರಡೂ ಪಂದ್ಯಗಳು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ನಡೆಯಲಿವೆ.
ಕಳೆದ ಆವೃತ್ತಿಯ ಚಾಂಪಿಯನ್ಗಳಾದ ಕೇಂದ್ರ ವಲಯ ಮತ್ತು ರನ್ನರ್-ಅಪ್ ದಕ್ಷಿಣ ವಲಯವು ಸೆಮಿಫೈನಲ್ಗೆ ನೇರ ಪ್ರವೇಶವನ್ನು ಪಡೆದುಕೊಂಡಿವೆ. ಹೀಗಾಗಿ ಈ ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಗೆದ್ದ ತಂಡಗಳು ಸೆಮಿಫೈನಲ್ನಲ್ಲಿ ಈ ಎರಡೂ ತಂಡಗಳನ್ನು ಎದುರಿಸಲಿವೆ. ಫೈನಲ್ ಪಂದ್ಯವು ಸೆಪ್ಟೆಂಬರ್ 6 ರಿಂದ 10 ರವರೆಗೆ ಚೆನ್ನೈನ MA ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ವರ್ಷ, ದುಲೀಪ್ ಟ್ರೋಫಿಯಲ್ಲಿ ಆರು ವಲಯಗಳನ್ನು ವಿಭಿನ್ನ ಆಟಗಾರರು ಮುನ್ನಡೆಸಲಿದ್ದಾರೆ. ಉತ್ತರ ವಲಯವನ್ನು ಕನ್ಹಯ್ಯಾ ವಾಧವನ್, ಪೂರ್ವ ವಲಯವನ್ನು ಇಶಾನ್ ಕಿಶನ್, ಪಶ್ಚಿಮ ವಲಯವನ್ನು ರುತುರಾಜ್ ಗಾಯಕ್ವಾಡ್, ದಕ್ಷಿಣ ವಲಯವನ್ನು ತಿಲಕ್ ವರ್ಮಾ, ಮಧ್ಯ ವಲಯವನ್ನು ರಜತ್ ಪಾಟಿದಾರ್ ಮತ್ತು ಈಶಾನ್ಯ ವಲಯವನ್ನು ರೋಂಗ್ಸೆನ್ ಜೊನಾಥನ್ ಮುನ್ನಡೆಸಲಿದ್ದಾರೆ.
ಪಂದ್ಯಾವಳಿಯ ಮೊದಲ ನಾಲ್ಕು ಪಂದ್ಯಗಳು ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿರುವ ಎರಡು ಮೈದಾನಗಳಲ್ಲಿ ನಡೆಯಲಿವೆ. ಕ್ವಾರ್ಟರ್ ಫೈನಲ್ ಪಂದ್ಯಗಳು ಆಗಸ್ಟ್ 23 ರಿಂದ 26 ರವರೆಗೆ ನಡೆದರೆ, ಸೆಮಿಫೈನಲ್ ಪಂದ್ಯಗಳು ಆಗಸ್ಟ್ 30 ರಿಂದ ಸೆಪ್ಟೆಂಬರ್ 2 ರವರೆಗೆ ನಡೆಯಲಿವೆ. ಫೈನಲ್ ಪಂದ್ಯವು ಸೆಪ್ಟೆಂಬರ್ 6 ರಿಂದ 10 ರವರೆಗೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ವಾರ್ಟರ್ ಫೈನಲ್ ಮತ್ತು ಸೆಮಿಫೈನಲ್ಗಳು ನಾಲ್ಕು ದಿನಗಳ ಪಂದ್ಯಗಳಾಗಿದ್ದರೆ, ಫೈನಲ್ ಐದು ದಿನಗಳ ಪಂದ್ಯವಾಗಿರುತ್ತದೆ. ಎಲ್ಲಾ ಪಂದ್ಯಗಳು ಸ್ಥಳೀಯ ಸಮಯ ಬೆಳಿಗ್ಗೆ 9:30 ಕ್ಕೆ ಪ್ರಾರಂಭವಾಗುತ್ತವೆ.
Duleep Trophy 2026: ದುಲೀಪ್ ಟ್ರೋಫಿ ಫೈನಲ್ ಬೆಂಗಳೂರಿನಿಂದ ಚೆನ್ನೈಗೆ ಸ್ಥಳಾಂತರ
ಕೇಂದ್ರ ವಲಯ ತಂಡ: ರಜತ್ ಪಾಟಿದಾರ್ (ನಾಯಕ), ರಿಂಕು ಸಿಂಗ್ (ಉಪನಾಯಕ), ಆರ್ಯನ್ ಜುಯಲ್ (ವಿಕೆಟ್ ಕೀಪರ್), ಸರನ್ಶಾ ಜೈನ್, ಅಮನ್ ಮೊಖಾಡೆ, ಕುನಾಲ್ ಚಾಂಡೇಲಾ, ಜೀಶನ್ ಅನ್ಸಾರಿ, ಆರ್ಯನ್ ಪಾಂಡೆ, ಅರ್ಷದ್ ಖಾನ್, ಆಯುಷ್ ಪಾಂಡೆ, ಯಶ್ ಸಿಂಗ್ ರಾಥೋಡ್, ಯಶ್ ರಾಥೋಡ್, ಪರ್ವ್ ರಾಥೋಡ್, ಯಶ್ ಠಾಕೂರ್, ನಚಿಕೇತ್ ಭೂತೆ,
ಸ್ಟ್ಯಾಂಡ್ಬೈ ಆಟಗಾರರು: ಅಮನದೀಪ್ ಖರೆ, ಮಯಾಂಕ್ ಮಿಶ್ರಾ, ಸೌರಭ್ ರಾವತ್, ಭಾರ್ಗವ್ ಮೆರಾಯ್, ಕುನಾಲ್ ಯಾದವ್, ಕುಮಾರ್ ಕಾರ್ತಿಕೇಯ.
ಪೂರ್ವ ವಲಯ ತಂಡ: ಅಭಿಮನ್ಯು ಈಶ್ವರನ್, ಸುದೀಪ್ ಘರಾಮಿ, ಮೊಹಮ್ಮದ್ ಶಮಿ, ಮುಖೇಶ್ ಕುಮಾರ್, ಶಹಬಾಜ್ ಅಹ್ಮದ್, ಸೂರಜ್ ಜೈಸ್ವಾಲ್, ಇಶಾನ್ ಕಿಶನ್ (ನಾಯಕ), ವೈಭವ್ ಸೂರ್ಯವಂಶಿ (ಉಪನಾಯಕ), ವಿರಾಟ್ ಸಿಂಗ್, ಕುಮಾರ್ ಕುಶಾಗ್ರ, ಶಿಖರ್ ಮೋಹನ್, ಸುಬ್ರಾಂಶು ಸೇನಾಪತಿ, ಅಭಿಜಿತ್ ಸರ್ಕಾರ್, ಅನುಕೂಲ್ ರಾಯ್ ಮತ್ತು ಡೆನಿಶ್ ದಾಸ್.
ಸ್ಟ್ಯಾಂಡ್ಬೈ ಆಟಗಾರರು: ಆಯುಷ್ ಲೋಹರುಕ, ಶ್ರೀದಂ ಪಾಲ್, ಸಂಬಿತ್ ಎಸ್ ಬರಾಲ್, ಶರಣದೀಪ್ ಸಿಂಗ್ ಮತ್ತು ಸ್ವಸ್ತಿಕ್ ಸಮಲ್.
ಪಶ್ಚಿಮ ವಲಯ ತಂಡ: ರುತುರಾಜ್ ಗಾಯಕ್ವಾಡ್ (ನಾಯಕ), ಶಮ್ಸ್ ಮುಲಾನಿ, ಪೃಥ್ವಿ ಶಾ, ಸರ್ಫರಾಝ್ ಖಾನ್, ಮುಶೀರ್ ಖಾನ್, ಶಾರ್ದೂಲ್ ಠಾಕೂರ್, ತನುಷ್ ಕೋಟ್ಯಾನ್, ತುಷಾರ್ ದೇಶಪಾಂಡೆ, ಹರ್ವಿಕ್ ದೇಸಾಯಿ, ಉರ್ವಿಲ್ ಪಟೇಲ್, ಶಿವಾಲಿಕ್ ಶರ್ಮಾ, ಸಿದ್ಧಾರ್ಥ್ ದೇಸಾಯಿ, ಅತಿತ್ ಶೇಠ್, ಮುಕೇಶ್ ಚೌಧರಿ, ಜೇಮೀತ್ ಪಟೇಲ್.
ದಕ್ಷಿಣ ವಲಯ ತಂಡ: ತಿಲಕ್ ವರ್ಮಾ (ನಾಯಕ), ರಿಕ್ಕಿ ಭುಯಿ, ಅಭಿನವ್ ತೇಜ್ರಾನಾ, ಶೇಖ್ ರಶೀದ್, ಕೆ. ಹಿಮತೇಜ, ಸ್ಮರಣ್ ರವಿಚಂದ್ರನ್, ಎನ್. ಜಗದೀಶನ್, ಕರುಣ್ ನಾಯರ್, ಟಿ. ತ್ಯಾಗರಾಜನ್, ಶ್ರೇಯಸ್ ಗೋಪಾಲ್, ಸಾಯಿ ತೇಜ, ಟಿ. ವಿಜಯ್, ವಿದ್ವತ್ ಕಾವೇರಪ್ಪ, ಅಮನ್ ಖಾನ್.
ಉತ್ತರ ವಲಯ ತಂಡ: ಕನ್ಹಯ್ಯಾ ವಾಧವನ್ (ನಾಯಕ), ಆಯುಷ್ ಬದೋನಿ (ಉಪನಾಯಕ), ಸನತ್ ಸಾಂಗ್ವಾನ್, ಕಮ್ರಾನ್ ಇಕ್ಬಾಲ್, ಯಶ್ ಧುಲ್, ಆಯುಷ್ ದೋಸೇಜಾ, ಅಬ್ದುಲ್ ಸಮದ್, ನಿಶಾಂತ್ ಸಿಂಧು, ಅರ್ಜುನ್ ಶರ್ಮಾ, ಅಬಿದ್ ಮುಷ್ತಾಕ್, ಅರ್ಷದೀಪ್ ಸಿಂಗ್, ಸುನಿಲ್ ಕುಮಾರ್, ಅನ್ಶುಲ್ ಕಂಬೋಜ್, ಯುಧ್ವೀರ್ ಸಿಂಗ್, ನಿಖಿಲ್ ಕಶ್ಯಪ್.
ಈಶಾನ್ಯ ವಲಯ ತಂಡ: ಜೊನಾಥನ್ ರೊಂಗ್ಸೆನ್ (ನಾಯಕ), ಬಿಶ್ವರ್ಜಿತ್ ಸಿಂಗ್ ಕೊಂಥೌಜಮ್ (ಉಪನಾಯಕ), ಟೆಚಿ ನೇರಿ, ಪ್ರಿಯೋಜಿತ್, ರೊನಾಲ್ಡ್ ಮೈಟೆಯಿ, ಜೋತಿನ್ ಸಿಂಗ್ ಫೀರೋಯಿಜಮ್, ಸುಭಾಯಂಗ್ಡೊ ಕಿಶನ್, ಆಕಾಶ್ ಕುಮಾರ್ ಚೌಧರಿ, ಜೋಸೆಫ್ ಲಾಲ್ಥಾನ್ಖುಮಾ, ಲಾಲ್ರೆಂಪೌಯಾ, ಇಮ್ಲಿವಾಟಿ ಲೆಮ್ಟೂರ್, ವಿನೋ ಜಿ ಝಿಮೋಮಿ, ರಾಬಿನ್ ಲಿಂಬೂ, ಆಶಿಶ್ ಥಾಪಾ.