AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಟ್ ಕ್ಲಬ್​ನಲ್ಲಿ ಗಲಾಟೆ: ಇಂಗ್ಲೆಂಡ್ ಆಟಗಾರರಿಬ್ಬರ ವಿರುದ್ಧ ತನಿಖೆ ಶುರು!

ಇಂಗ್ಲೆಂಡ್ ಆಟಗಾರರಿಗೂ ನೈಟ್ ಕ್ಲಬ್​ ವಿವಾದಕ್ಕೂ ಅವಿನಾಭಾವ ಸಂಬಂಧ ಇದ್ದಂತಿದೆ. ಏಕೆಂದರೆ ಕೆಲ ತಿಂಗಳುಗಳ ಹಿಂದೆಯಷ್ಟೇ ಇಂಗ್ಲೆಂಡ್ ಟಿ20 ತಂಡದ ನಾಯಕ ಹ್ಯಾರಿ ಬ್ರೂಕ್ ನ್ಯೂಝಿಲೆಂಡ್​ನ ನೈಟ್ ಕ್ಲಬ್​ನಲ್ಲಿ ಗಲಾಟೆ ಮಾಡಿದ್ದರು. ಈ ವಿವಾದ ತಣ್ಣಗಾಗುತ್ತಿದ್ದಂತೆ ಇದೀಗ ನೈಟ್ ಕ್ಲಬ್ ಗಲಾಟೆಯಲ್ಲಿ ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಹೆಸರು ಕೇಳಿ ಬಂದಿದೆ.

ನೈಟ್ ಕ್ಲಬ್​ನಲ್ಲಿ ಗಲಾಟೆ: ಇಂಗ್ಲೆಂಡ್ ಆಟಗಾರರಿಬ್ಬರ ವಿರುದ್ಧ ತನಿಖೆ ಶುರು!
Ben Stokes - Gus AtkinsonImage Credit source: ECB
ಝಾಹಿರ್ ಯೂಸುಫ್
|

Updated on: Jun 09, 2026 | 7:49 AM

Share

ಲಾರ್ಡ್ಸ್ ಮೈದಾನದಲ್ಲಿ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ ತಂಡ 115 ರನ್‌ಗಳ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ, ಇಂಗ್ಲೆಂಡ್ ಕ್ರಿಕೆಟ್‌ನಲ್ಲಿ ದೊಡ್ಡ ಬಿರುಗಾಳಿ ಎದ್ದಿದೆ. ಇಂಗ್ಲೆಂಡ್ ಟೆಸ್ಟ್ ತಂಡದ ನಾಯಕ ಬೆನ್ ಸ್ಟೋಕ್ಸ್ ಮತ್ತು ವೇಗಿ ಗಸ್ ಅಟ್ಕಿನ್ಸನ್ ಲಂಡನ್‌ನ ನೈಟ್‌ಕ್ಲಬ್‌ ಒಂದರಲ್ಲಿ ನಡೆದ ಗಲಾಟೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿ (ECB) ಇವರಿಬ್ಬರ ವಿರುದ್ಧ ಶಿಸ್ತು ಕ್ರಮದ ತನಿಖೆ ಆರಂಭಿಸಿದೆ.

 ಏನಿದು ಘಟನೆ?

ನ್ಯೂಝಿಲೆಂಡ್ ವಿರುದ್ಧದ ಟೆಸ್ಟ್ ಪಂದ್ಯ ಮುಗಿದ ಕೆಲವೇ ಗಂಟೆಗಳಲ್ಲಿ ಇಂಗ್ಲೆಂಡ್ ತಂಡದ ಕೆಲ ಆಟಗಾರರು ಚೆಲ್ಸಿಯಾದಲ್ಲಿರುವ ಪ್ರಸಿದ್ಧ ‘ರೆಕ್ಸ್ ರೂಮ್ಸ್’ ನೈಟ್‌ಕ್ಲಬ್​ಗೆ ತೆರಳಿದ್ದರು. ಈ ವೇಳೆ ಸರಸೆನ್ಸ್ ರಗ್ಬಿ ಅಕಾಡೆಮಿಯ ಆಟಗಾರರು ಕೂಡ ಅಲ್ಲಿದ್ದರು.

ಈ ಪಾರ್ಟಿಯ ನಡುವೆ ಬೆನ್ ಸ್ಟೋಕ್ಸ್ ಹಾಗೂ ಗಸ್ ಅಟ್ಕಿನ್ಸನ್ ಸರಸೆನ್ಸ್ ರಗ್ಬಿ ಅಕಾಡೆಮಿಯ ಆಟಗಾರರೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ. ಈ ಮಾತಿನ ಚಕಮಕಿಯಿಂದಾಗಿ ಗಲಾಟೆ ಕೂಡ ನಡೆದಿದೆ.

ಇತ್ತ ಗಲಾಟೆಯ ನಡುವೆ ಗಸ್ ಅಟ್ಕಿನ್ಸನ್ ಅವರತ್ತ ತೂರಿ ಬಂದ ಹೊಡೆತವನ್ನು ತಡೆಯಲು ಹೋದ ಇಸಿಬಿ ಭದ್ರತಾ ಸಿಬ್ಬಂದಿಯೊಬ್ಬರಿಗೆ ತೀವ್ರ ಗಾಯಗಳಾಗಿವೆ ಎಂದು ವರದಿಯಾಗಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಬೆನ್ ಸ್ಟೋಕ್ಸ್ ಅಥವಾ ಗಸ್ ಅಟ್ಕಿನ್ಸನ್ ಈ ಗಲಾಟೆಯನ್ನು ಶುರು ಮಾಡಿಲ್ಲ ಮತ್ತು ಇಬ್ಬರಿಗೂ ಯಾವುದೇ ದೈಹಿಕ ಗಾಯಗಳಾಗಿಲ್ಲ. ಆದರೆ, ತಂಡದ ನಿಯಮಗಳನ್ನು ಮೀರಿ ತಡರಾತ್ರಿ ಹೊರಗುಳಿದಿದ್ದೇ ಇವರ ಪಾಲಿಗೆ ಮುಳ್ಳಾಗಿದೆ.

ಕಟ್ಟುನಿಟ್ಟಿನ ‘ನಿಯಮ’ ಮೀರಿದ ಆಟಗಾರರು:

ಇತ್ತೀಚೆಗಷ್ಟೇ ನ್ಯೂಝಿಲೆಂಡ್‌ನಲ್ಲಿ ಇಂಗ್ಲೆಂಡ್‌ನ ವೈಟ್-ಬಾಲ್ ನಾಯಕ ಹ್ಯಾರಿ ಬ್ರೂಕ್ ಮೇಲೆ ಬೌನ್ಸರ್ ಒಬ್ಬರು ಹಲ್ಲೆ ನಡೆಸಿದ ಘಟನೆ ನಡೆದಿತ್ತು. ಈ ಕಾರಣದಿಂದಾಗಿ ಇಂಗ್ಲೆಂಡ್ ಮ್ಯಾನೇಜ್‌ಮೆಂಟ್ ಆಟಗಾರರಿಗೆ ಮಧ್ಯರಾತ್ರಿ 12 ಗಂಟೆಯ ಕರ್ಫ್ಯೂ ನಿಯಮವನ್ನು ಕಡ್ಡಾಯಗೊಳಿಸಿತ್ತು. ಅಂದರೆ ತಡರಾತ್ರಿ ಪಾರ್ಟಿಗಳಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸಿತ್ತು.

ಇದಾಗ್ಯೂ ಬೆನ್ ಸ್ಟೋಸ್ಟೋಕ್ಸ್ ಮತ್ತು ಗಸ್ ಅಟ್ಕಿನ್ಸನ್ ಈ ನಿಯಮವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಮುಂಜಾನೆವರೆಗೂ ಕ್ಲಬ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇದರ ನಡುವೆ ನಡೆದ ಜಗಳವೇ ಇದೀಗ ಇಬ್ಬರು ಆಟಗಾರರ ಪಾಲಿಗೆ ಮುಳುವಾಗಿದೆ.

ಈ ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಇಸಿಬಿ, ಪ್ರಕರಣವನ್ನು ಸ್ವತಂತ್ರ ಸಂಸ್ಥೆಯಾದ ಕ್ರಿಕೆಟ್ ರೆಗ್ಯುಲೇಟರ್‌ಗೆ ಒಪ್ಪಿಸಿದೆ. ಆಟಗಾರರ ವರ್ತನೆ ಮತ್ತು ಸುರಕ್ಷತಾ ನಿಯಮಗಳ ಉಲ್ಲಂಘನೆಯ ಬಗ್ಗೆ ತನಿಖೆ ಆರಂಭವಾಗಿದೆ.

ಸಂಕಷ್ಟಕ್ಕೆ ಸಿಲುಕಿದ ಇಸಿಬಿ:

ಈ ವಿವಾದದಿಂದಾಗಿ ಜೂನ್ 17 ರಿಂದ ‘ದಿ ಓವಲ್’ ಮೈದಾನದಲ್ಲಿ ಆರಂಭವಾಗಲಿರುವ ನ್ಯೂಝಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡದ ಸಿದ್ಧತೆ ಸಂಪೂರ್ಣ ಹಳಿ ತಪ್ಪಿದೆ. ಅಲ್ಲದೆ ಈ ಪಂದ್ಯಕ್ಕಾಗಿ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ ಇನ್ನೂ ಕೂಡ ತಂಡವನ್ನು ಪ್ರಕಟಿಸಿಲ್ಲ.

  • ತಂಡದ ಪ್ರಕಟಣೆ ವಿಳಂಬ: ಎರಡನೇ ಟೆಸ್ಟ್‌ಗೆ ಇಂಗ್ಲೆಂಡ್ ತಂಡವನ್ನು ಪ್ರಕಟಿಸಬೇಕಾಗಿದ್ದ ಇಸಿಬಿ, ಈ ವಿವಾದದ ಹಿನ್ನೆಲೆಯಲ್ಲಿ ಸದ್ಯಕ್ಕೆ ತಂಡದ ಪ್ರಕಟಣೆಯನ್ನು ಮುಂದೂಡಿದೆ.
  • ನಾಯಕತ್ವಕ್ಕೆ ಕುತ್ತು: ಬೆನ್ ಸ್ಟೋಕ್ಸ್ ಈ ಹಿಂದೆ ಕೂಡ ಇಂತಹದೇ ವಿವಾದಗಳಲ್ಲಿ ಸಿಲುಕಿದ್ದರು. ಈಗ ತಂಡದ ನಾಯಕನಾಗಿಯೇ ನಿಯಮ ಮುರಿದಿರುವುದರಿಂದ ಅವರ ನಾಯಕತ್ವದ ಸ್ಥಾನಕ್ಕೆ ಕುತ್ತು ಬರುವ ಸಾಧ್ಯತೆ ದಟ್ಟವಾಗಿದೆ.
  •  ಪ್ರಮುಖ ಬೌಲರ್ ಅಲಭ್ಯತೆ ಭೀತಿ: ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದು ಇಂಗ್ಲೆಂಡ್ ಗೆಲುವಿನ ರೂವಾರಿಯಾಗಿದ್ದ ಗಸ್ ಅಟ್ಕಿನ್ಸನ್, ಶಿಸ್ತು ಕ್ರಮದ ಭಾಗವಾಗಿ ತಂಡದಿಂದ ಅಮಾನತಾಗುವ ಭೀತಿಯಲ್ಲಿದ್ದಾರೆ.

ಇದನ್ನೂ ಓದಿ: 9 ವಿಕೆಟ್ ಪತನದೊಂದಿಗೆ ಭಾರತ vs ಅಫ್ಘಾನ್ ಟೆಸ್ಟ್ ಕೊನೆಗೊಂಡಿದ್ದೇಕೆ?

ಒಟ್ಟಾರೆಯಾಗಿ ಹೇಳುವುದಾದರೆ, ಲಾರ್ಡ್ಸ್ ಮೈದಾನದ ಐತಿಹಾಸಿಕ ಗೆಲುವಿನ ಸಂಭ್ರಮದಲ್ಲಿದ್ದ ಇಂಗ್ಲೆಂಡ್ ಕ್ರಿಕೆಟ್‌ಗೆ, ಈ ನೈಟ್‌ಕ್ಲಬ್ ವಿವಾದ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ. ನಿಯಮ ಮತ್ತು ಶಿಸ್ತಿಗೆ ಹೆಸರಾದ ಕ್ರಿಕೆಟ್ ಲೋಕದಲ್ಲಿ, ತಂಡದ ನಾಯಕನೇ ಕರ್ಫ್ಯೂ ಉಲ್ಲಂಘಿಸಿ ತನಿಖೆ ಎದುರಿಸುತ್ತಿರುವುದು ಇಂಗ್ಲೆಂಡ್‌ ತಂಡದ ವರ್ಚಸ್ಸಿಗೆ ಭಾರಿ ಧಕ್ಕೆ ತಂದಿದೆ. ಹೀಗಾಗಿ ಬೆನ್​ ಸ್ಟೋಕ್ಸ್​ ಹಾಗೂ ಗಸ್ ಅಟ್ಕಿನ್ಸನ್ ವಿರುದ್ಧ ಇಸಿಬಿ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಹೆಚ್ಚಿದೆ.

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ