AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಶಿಖರ್ ಧವನ್‌, ಸುರೇಶ್ ರೈನಾಗೆ ಸೇರಿದ 11.14 ಕೋಟಿ ಮೌಲ್ಯದ ಆಸ್ತಿ ಜಪ್ತಿ

ED Seizes Shikhar Dhawan, Suresh Raina Assets: ಬೆಟ್ಟಿಂಗ್ ಆ್ಯಪ್ ಪ್ರಚಾರ ಪ್ರಕರಣದಲ್ಲಿ ಸಿಕ್ಕಿಬಿದ್ದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ ಮತ್ತು ಸುರೇಶ್ ರೈನಾಗೆ ಜಾರಿ ನಿರ್ದೇಶನಾಲಯ (ಇಡಿ) ಮತ್ತೊಂದು ಆಘಾತ ನೀಡಿದೆ. 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಇಡಿ ಇಬ್ಬರ ಒಟ್ಟು 11.14 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ ರೈನಾ ಮ್ಯೂಚುಯಲ್ ಫಂಡ್ ಹಾಗೂ ಧವನ್ ಸ್ಥಿರ ಆಸ್ತಿ ಸೇರಿವೆ.

Big News: ಶಿಖರ್ ಧವನ್‌, ಸುರೇಶ್ ರೈನಾಗೆ ಸೇರಿದ 11.14 ಕೋಟಿ ಮೌಲ್ಯದ ಆಸ್ತಿ ಜಪ್ತಿ
Raina, Dhawan
ಪೃಥ್ವಿಶಂಕರ
|

Updated on:Nov 06, 2025 | 4:27 PM

Share

ಬೆಟ್ಟಿಂಗ್ ಆ್ಯಪ್ ಪ್ರಚಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಿಕ್ಕು ವಿಲವಿಲ ಎಂದು ಒದ್ದಾಡುತ್ತಿರುವ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಶಿಖರ್ ಧವನ್ (Shikhar Dhawan) ಹಾಗೂ ಸುರೇಶ್ ರೈನಾಗೆ (Suresh Raina) ಜಾರಿ ನಿರ್ದೇಶನಾಲಯ ಮತ್ತೊಂದು ಆಘಾತ ನೀಡಿದೆ. ಈ ಇಬ್ಬರು ಕ್ರಿಕೆಟಿಗರಿಗೆ ಸೇರಿರುವ ಒಟ್ಟು 11.14 ಕೋಟಿ ರೂ ಮೊತ್ತದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ 2002 ರ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡಿದೆ. ಮುಟ್ಟುಗೋಲು ಹಾಕಿಕೊಂಡಿರುವ 11.14 ಕೋಟಿ ರೂ ಮೊತ್ತದಲ್ಲಿ ಸುರೇಶ್ ರೈನಾ ಅವರ ಹೆಸರಿನಲ್ಲಿರುವ 6.64 ಕೋಟಿ ರೂ. ಮೌಲ್ಯದ ಮ್ಯೂಚುವಲ್ ಫಂಡ್ ಹೂಡಿಕೆಗಳು ಮತ್ತು ಶಿಖರ್ ಧವನ್ ಅವರ ಹೆಸರಿನಲ್ಲಿರುವ 4.5 ಕೋಟಿ ರೂ ಮೌಲ್ಯದ ಸ್ಥಿರ ಆಸ್ತಿ ಸೇರಿವೆ.

ಶಿಖರ್ ಧವ್ನ ಹಾಗೂ ಸುರೇಶ್ ರೈನಾ ಇಬ್ಬರೂ ವಿದೇಶಿ ಕಂಪನಿಗಳೊಂದಿಗೆ ಒಪ್ಪಂದ ಮಾಡಿಕೊಂಡು ಅಕ್ರಮ ಬೆಟ್ಟಿಂಗ್ ಪ್ಲಾಟ್‌ಫಾರ್ಮ್ 1xBet ಅನ್ನು ಪ್ರಚಾರ ಮಾಡಿದ್ದಾರೆ ಎಂಬುದು ಇಡಿ ತನಿಖೆಯಿಂದ ತಿಳಿದುಬಂದಿದೆ. ಹಾಗೆಯೇ ಇವರಿಬ್ಬರು 1xBet ಮತ್ತು ಅದರ ಅಂಗಸಂಸ್ಥೆಗಳನ್ನು ಉತ್ತೇಜಿಸಲು ವಿದೇಶಿ ಸಂಸ್ಥೆಗಳೊಂದಿಗೆ ಗೊತ್ತಿದ್ದೂ ಜಾಹೀರಾತು ಒಪ್ಪಂದಗಳನ್ನು ಮಾಡಿಕೊಂಡಿರುವುದು ಖಚಿತವಾಗಿದೆ. ಹೀಗಾಗಿ ಇವರಿಬ್ಬರ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ತನಿಖೆಯಿಂದ ತಿಳಿದುಬಂದಿದ್ದೇನು?

1xBet ಪ್ಲಾಟ್‌ಫಾರ್ಮ್ ಭಾರತದಲ್ಲಿ ಸಾವಿರಾರು ನಕಲಿ ಬ್ಯಾಂಕ್ ಖಾತೆಗಳ ಮೂಲಕ ಹಣದ ವಹಿವಾಟು ನಡೆಸುತ್ತಿತ್ತು ಎಂಬುದು ಖಚಿತವಾಗಿದೆ. ಇದಕ್ಕೆ ಪೂರಕವಾಗಿ ಇಲ್ಲಿಯವರೆಗೆ 6000 ಕ್ಕೂ ಹೆಚ್ಚು ನಕಲಿ ಖಾತೆಗಳು ಪತ್ತೆಯಾಗಿವೆ. ಈ ಖಾತೆಗಳ ಮೂಲಕ ವಿವಿಧ ಪಾವತಿ ಗೇಟ್‌ವೇಗಳ ಮೂಲಕ ಬೆಟ್ಟಿಂಗ್ ಹಣದ ನಿಜವಾದ ಮೂಲವನ್ನು ಮರೆಮಾಡಲಾಗಿದೆ. ಇದುವರೆಗೆ 1000 ಕೋಟಿ ರೂ. ಗೂ ಅಧಿಕ ಮೊತ್ತದ ಅಕ್ರಮ ಹಣ ವರ್ಗಾವಣೆಯಾಗಿರುವುದು ಪತ್ತೆಯಾಗಿದೆ.

Shikhar Dhawan’s Net Worth: ದುಬಾರಿ ಕಾರುಗಳು, ಐಷರಾಮಿ ಬಂಗಲೆ.. ಶಿಖರ್ ಧವನ್ ಎಷ್ಟು ಕೋಟಿಯ ಒಡೆಯ ಗೊತ್ತಾ?

ಸಾರ್ವಜನಿಕರಿಗೆ ಇಡಿ ಎಚ್ಚರಿಕೆ

ಇದೀಗ ಈ ಪ್ರಕರಣದಲ್ಲಿ ನಾಲ್ಕು ಪಾವತಿ ಗೇಟ್‌ವೇಗಳ ಮೇಲೆ ಇಡಿ ದಾಳಿ ನಡೆಸಿ 60 ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಇದುವರೆಗೆ 4 ಕೋಟಿಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೆಯೇ ಯಾವುದೇ ರೀತಿಯ ಆನ್‌ಲೈನ್ ಬೆಟ್ಟಿಂಗ್ ಅಥವಾ ಜೂಜಾಟ ಪ್ರಚಾರ ಅಥವಾ ಹೂಡಿಕೆಯಿಂದ ದೂರವಿರುವಂತೆ ಇಡಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟವು ಆರ್ಥಿಕ ನಷ್ಟವನ್ನು ಉಂಟುಮಾಡುವುದಲ್ಲದೆ, ಹಣ ವರ್ಗಾವಣೆ ಮತ್ತು ಇತರ ಕಾನೂನುಬಾಹಿರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತದೆ ಎಂದು ಇಡಿ ಹೇಳಿದೆ. ಯಾವುದೇ ಅನುಮಾನಾಸ್ಪದ ಆನ್‌ಲೈನ್ ಜಾಹೀರಾತುಗಳು ಅಥವಾ ವಹಿವಾಟುಗಳು ಕಂಡುಬಂದಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರು ಅಥವಾ ಇಡಿಗೆ ತಿಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Thu, 6 November 25

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಉತ್ತರ ಪ್ರದೇಶದ ಬುಲಂದ್‌ಶಹರ್ ಕಾರ್ಖಾನೆಯಲ್ಲಿ ಬೆಂಕಿ ದುರಂತ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಪ್ರಪೋಸಲ್ ನಿರಾಕರಿಸಿದ್ದಕ್ಕೆ ಯುವತಿಯ ಮನೆ ಮೇಲೆ ಪ್ರೇಮಿಯಿಂದ ಬಾಂಬ್ ದಾಳಿ
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಈಗ ಸ್ವಲ್ಪ ಕನ್ನಡ ಬರುತ್ತೆ, ಮುಂದಿನ ಸಲ ಜಾಸ್ತಿ ಮಾತಾಡುವೆ: ರಾಮ್ ಚರಣ್
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಧರ್ಮೇಂದ್ರ ಪರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಸ್ವೀಕರಿಸಿದ ನಟಿ ಹೇಮಾ ಮಾಲಿನಿ
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
ಕೊಯಮತ್ತೂರು ಬಾಲಕಿ ಹತ್ಯೆ ಕುರಿತ ಸುದ್ದಿಗೋಷ್ಠಿಯಲ್ಲಿ ನಕ್ಕ ಮಹಿಳಾ ಪೊಲೀಸ್!
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
SIR ಸಭೆಗೆ ಗೈರಾದ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರಿಗೆ ‘ಕೈ’ ಕೊಕ್
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಶಿವಮೊಗ್ಗ KSCA ಮೈದಾನದಲ್ಲಿ ಕ್ರಿಕೆಟ್ ಆಟಗಾರ ಅಕ್ಷಯ್ ಅಂತಿಮ ದರ್ಶನ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಒಂದೇ ನೋಂದಣಿಯಲ್ಲಿ 2 ಮಕ್ಕಳಿಗೆ ಜನನ ಪ್ರಮಾಣಪತ್ರ: ಲೋಕಾ ದಾಳಿ
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!
ಪೊಲೀಸ್ ಠಾಣೆ ಮುಂದೆಯೇ ಬೆಂಗಳೂರು 'ಪಂಕ್ಚರ್ ಮಾಫಿಯಾ' ಆಟ!