AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emerging Asia Cup 2023: ಲಂಕಾ ತಂಡವನ್ನು ಮಣಿಸಿ ಏಷ್ಯಾಕಪ್ ಫೈನಲ್​ಗೆ ಲಗ್ಗೆಯಿಟ್ಟ ಪಾಕಿಸ್ತಾನ..!

Emerging Asia Cup 2023: ಉದಯೋನ್ಮುಖ ಏಷ್ಯಾಕಪ್​ನಲ್ಲಿ ಇಂದು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಎ ತಂಡವನ್ನು 60 ರನ್​ಗಳಿಂದ ಮಣಿಸಿದ ಪಾಕಿಸ್ತಾನ ಎ ತಂಡ ಸತತ ಎರಡನೇ ಬಾರಿಗೆ ಏಷ್ಯಾಕಪ್ ಫೈನಲ್​ಗೆ ಲಗ್ಗೆ ಇಟ್ಟಿದೆ.

Emerging Asia Cup 2023: ಲಂಕಾ ತಂಡವನ್ನು ಮಣಿಸಿ ಏಷ್ಯಾಕಪ್ ಫೈನಲ್​ಗೆ ಲಗ್ಗೆಯಿಟ್ಟ ಪಾಕಿಸ್ತಾನ..!
ಪಾಕಿಸ್ತಾನ ಎ ತಂಡ
ಪೃಥ್ವಿಶಂಕರ
|

Updated on:Jul 21, 2023 | 6:19 PM

Share

ಉದಯೋನ್ಮುಖ ಏಷ್ಯಾಕಪ್​ನಲ್ಲಿ (Emerging Asia Cup 2023) ಇಂದು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಎ ತಂಡವನ್ನು 60 ರನ್​ಗಳಿಂದ ಮಣಿಸಿದ ಪಾಕಿಸ್ತಾನ ಎ (Pakistan A vs Sri Lanka A) ತಂಡ ಸತತ ಎರಡನೇ ಬಾರಿಗೆ ಏಷ್ಯಾಕಪ್ ಫೈನಲ್​ಗೆ ಲಗ್ಗೆ ಇಟ್ಟಿದೆ. ಇದೀಗ ಭಾರತ ಎ ಹಾಗೂ ಬಾಂಗ್ಲಾದೇಶ ಎ (India A vs Bangladesh A) ತಂಡಗಳ ನಡುವೆ ನಡೆಯುತ್ತಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ನಲ್ಲಿ ಪಾಕಿಸ್ತಾನ ಎ ವಿರುದ್ಧ ಸೆಣಸಾಡಲಿದೆ. ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 322 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಶ್ರೀಲಂಕಾ ಎ ತಂಡ ಆವಿಷ್ಕಾ ಫರ್ನಾಂಡೋ ಅವರ 97 ರನ್​ಗಳ ಏಕಾಂಗಿ ಹೋರಾಟದ ಹೊರತಾಗಿಯೂ ಗುರಿ ತಲುಪಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಆತಿಥೇಯ ತಂಡ 46ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 262 ರನ್ ಕಲೆಹಾಕಲಷ್ಟೇ ಶಕ್ತವಾಗಿ ಏಷ್ಯಾಕಪ್​ನಿಂದ ಹೊರಬಿತ್ತು.

ಬೃಹತ್ ಟಾರ್ಗೆಟ್ ಸೆಟ್ ಮಾಡಿದ ಪಾಕ್

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಎ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 24 ರನ್​ಗಳಿದ್ದಾಗ ಮೊದಲ ವಿಕೆಟ್ ಪತನವಾಯಿತು. ಆ ಬಳಿಕ ಉತ್ತಮ ಜೊತೆಯಾಟ ಕಟ್ಟಿದ ಸೈಮ್ ಅಯೂಬ್ ಹಾಗೂ ಒಮೈರ್ ಯೂಸುಫ್ ತಂಡದ ಮೊತ್ತವನ್ನು 60 ರ ಗಡಿ ದಾಟಿಸಿದರು. ಆದರೆ ಉತ್ತಮ ಜೊತೆಯಾಟ ಕಟ್ಟುವ ಹಂತದಲ್ಲಿ ಅಯೂಬ್ 22 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆ ಬಳಿಕ ಒಂದಾದ ಒಮೈರ್ ಯೂಸುಫ್ (88) ಹಾಗೂ ನಾಯಕ ಮೊಹಮ್ಮದ್ ಹ್ಯಾರಿಸ್ (52) ತಲಾ ಅರ್ಧಶತಕ ಸಿಡಿಸಿ ತಂಡಕ್ಕೆ ಬೃಹತ್ ಮುನ್ನಡೆ ತಂದುಕೊಟ್ಟರು. ಆದರೆ ಶತಕದಂಚಲ್ಲಿ ಎಡವಿದ ಯೂಸುಫ್ 88 ರನ್​ಗಳಿಗೆ ಪೆವಿಲಿಯನ್​ ಸೇರಿಕೊಂಡರು. ಈ ವಿಕೆಟ್ ನಂತರ ಬಂದ ಮುಬಾಸಿರ್ ಖಾನ್ 42 ರನ್​ಗಳ ಕೊಡುಗೆ ನೀಡಿದರು. ಅಂತಿಮವಾಗಿ ಪಾಕ್ ಪಡೆ 50 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 322 ರನ್ ಕಲೆಹಾಕಿತು.

ಲಂಕಾ ತಂಡದ ಕಳಪೆ ಆರಂಭ

ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಎ ತಂಡದ ಆರಂಭ ಕೂಡ ಉತ್ತಮವಾಗಿರಲಿಲ್ಲ. ಕೇವಲ 12 ರನ್​ ಆಗುವಷ್ಟರಲ್ಲೇ ತಂಡದ ಎರಡು ವಿಕೆಟ್ ಪತನಗೊಂಡವು. ಆರಂಭಿಕ ಲಸಿತ್ ಕ್ರೂಸ್ಪುಲ್ಲೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮಿನೋದ್ ಭಾನುಕಾ ಕೇವಲ 1 ರನ್​ಗಳಿಸಲಷ್ಟೇ ಶಕ್ತರಾದರು. 4ನೇ ಕ್ರಮಾಂಕದಲ್ಲಿ ಬಂದ ಪಸಿಂದು ಸೂರಿಯಬಂಡಾರ ಕೂಡ 10 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ಒಂದು ಬದಿಯಲ್ಲಿ ಭದ್ರವಾಗಿ ಬೇರೂರಿದ್ದ ಆವಿಷ್ಕಾ ಫರ್ನಾಂಡೋಗೆ, ಸಹನ್ ಅರಚ್ಚಿಗೆ ಅದ್ಭುತ ಸಾಥ್ ನೀಡಿದರು. ಹೀಗಾಗಿ 4ನೇ ಜೊತೆಯಾಟಕ್ಕೆ ಈ ಇಬ್ಬರು 128 ರನ್​ ಕಲೆಹಾಕಿದರು. ಆದರೆ ಇಬ್ಬರೂ ಸಹ ತಲಾ 97 ರನ್​ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಶತಕ ವಂಚಿತರಾದರು.

5 ವಿಕೆಟ್ ಪಡೆದ  ಅರ್ಷದ್ ಇಕ್ಬಾಲ್

ಈ ಇಬ್ಬರ ವಿಕೆಟ್ ಬಳಿಕ ಬಂದ ಲಂಕಾ ಬಾಲಂಹಗೋಚಿಗಳು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಂತು ಗೆಲುವಿಗಾಗಿ ಹೋರಾಡಲಿಲ್ಲ. ಹೀಗಾಗಿ ಭಿಗಿ ದಾಳಿ ನೆಡೆಸಿದ ಪಾಕಿಸ್ತಾನ, ಲಂಕಾ ತಂಡವನ್ನು ಅಲ್ಪ ರನ್​ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಪಾಕ್ ಪರ ಬೌಲಿಂಗ್​ನಲ್ಲಿ ಮಿಂಚಿದ ಅರ್ಷದ್ ಇಕ್ಬಾಲ್ 5 ವಿಕೆಟ್ ಪಡೆದರೆ, ಮುಬಾಸಿರ್ ಖಾನ್ ಹಾಗೂ ಸೂಫಿಯಾನ್ ಮುಖೀಮ್ ತಲಾ 2 ವಿಕೆಟ್ ಪಡೆದರು. ನಿರ್ಣಾಯಕ ಪಂದ್ಯದಲ್ಲಿ 5 ವಿಕೆಟ್ ಉರುಳಿಸಿ ತಂಡದ ಗೆಲುವಿನ ಹೀರೋ ಎನಿಸಿಕೊಂಡ ಅರ್ಷದ್ ಇಕ್ಬಾಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Fri, 21 July 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ