AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emerging Asia Cup 2023: ಲಂಕಾ ತಂಡವನ್ನು ಮಣಿಸಿ ಏಷ್ಯಾಕಪ್ ಫೈನಲ್​ಗೆ ಲಗ್ಗೆಯಿಟ್ಟ ಪಾಕಿಸ್ತಾನ..!

Emerging Asia Cup 2023: ಉದಯೋನ್ಮುಖ ಏಷ್ಯಾಕಪ್​ನಲ್ಲಿ ಇಂದು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಎ ತಂಡವನ್ನು 60 ರನ್​ಗಳಿಂದ ಮಣಿಸಿದ ಪಾಕಿಸ್ತಾನ ಎ ತಂಡ ಸತತ ಎರಡನೇ ಬಾರಿಗೆ ಏಷ್ಯಾಕಪ್ ಫೈನಲ್​ಗೆ ಲಗ್ಗೆ ಇಟ್ಟಿದೆ.

Emerging Asia Cup 2023: ಲಂಕಾ ತಂಡವನ್ನು ಮಣಿಸಿ ಏಷ್ಯಾಕಪ್ ಫೈನಲ್​ಗೆ ಲಗ್ಗೆಯಿಟ್ಟ ಪಾಕಿಸ್ತಾನ..!
ಪಾಕಿಸ್ತಾನ ಎ ತಂಡ
ಪೃಥ್ವಿಶಂಕರ
|

Updated on:Jul 21, 2023 | 6:19 PM

Share

ಉದಯೋನ್ಮುಖ ಏಷ್ಯಾಕಪ್​ನಲ್ಲಿ (Emerging Asia Cup 2023) ಇಂದು ನಡೆದ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಶ್ರೀಲಂಕಾ ಎ ತಂಡವನ್ನು 60 ರನ್​ಗಳಿಂದ ಮಣಿಸಿದ ಪಾಕಿಸ್ತಾನ ಎ (Pakistan A vs Sri Lanka A) ತಂಡ ಸತತ ಎರಡನೇ ಬಾರಿಗೆ ಏಷ್ಯಾಕಪ್ ಫೈನಲ್​ಗೆ ಲಗ್ಗೆ ಇಟ್ಟಿದೆ. ಇದೀಗ ಭಾರತ ಎ ಹಾಗೂ ಬಾಂಗ್ಲಾದೇಶ ಎ (India A vs Bangladesh A) ತಂಡಗಳ ನಡುವೆ ನಡೆಯುತ್ತಿರುವ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಗೆದ್ದ ತಂಡ ಫೈನಲ್​ನಲ್ಲಿ ಪಾಕಿಸ್ತಾನ ಎ ವಿರುದ್ಧ ಸೆಣಸಾಡಲಿದೆ. ಇನ್ನು ಈ ಪಂದ್ಯದಲ್ಲಿ ಪಾಕಿಸ್ತಾನ ನೀಡಿದ 322 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಶ್ರೀಲಂಕಾ ಎ ತಂಡ ಆವಿಷ್ಕಾ ಫರ್ನಾಂಡೋ ಅವರ 97 ರನ್​ಗಳ ಏಕಾಂಗಿ ಹೋರಾಟದ ಹೊರತಾಗಿಯೂ ಗುರಿ ತಲುಪಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಆತಿಥೇಯ ತಂಡ 46ನೇ ಓವರ್​ನಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 262 ರನ್ ಕಲೆಹಾಕಲಷ್ಟೇ ಶಕ್ತವಾಗಿ ಏಷ್ಯಾಕಪ್​ನಿಂದ ಹೊರಬಿತ್ತು.

ಬೃಹತ್ ಟಾರ್ಗೆಟ್ ಸೆಟ್ ಮಾಡಿದ ಪಾಕ್

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಎ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 24 ರನ್​ಗಳಿದ್ದಾಗ ಮೊದಲ ವಿಕೆಟ್ ಪತನವಾಯಿತು. ಆ ಬಳಿಕ ಉತ್ತಮ ಜೊತೆಯಾಟ ಕಟ್ಟಿದ ಸೈಮ್ ಅಯೂಬ್ ಹಾಗೂ ಒಮೈರ್ ಯೂಸುಫ್ ತಂಡದ ಮೊತ್ತವನ್ನು 60 ರ ಗಡಿ ದಾಟಿಸಿದರು. ಆದರೆ ಉತ್ತಮ ಜೊತೆಯಾಟ ಕಟ್ಟುವ ಹಂತದಲ್ಲಿ ಅಯೂಬ್ 22 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆ ಬಳಿಕ ಒಂದಾದ ಒಮೈರ್ ಯೂಸುಫ್ (88) ಹಾಗೂ ನಾಯಕ ಮೊಹಮ್ಮದ್ ಹ್ಯಾರಿಸ್ (52) ತಲಾ ಅರ್ಧಶತಕ ಸಿಡಿಸಿ ತಂಡಕ್ಕೆ ಬೃಹತ್ ಮುನ್ನಡೆ ತಂದುಕೊಟ್ಟರು. ಆದರೆ ಶತಕದಂಚಲ್ಲಿ ಎಡವಿದ ಯೂಸುಫ್ 88 ರನ್​ಗಳಿಗೆ ಪೆವಿಲಿಯನ್​ ಸೇರಿಕೊಂಡರು. ಈ ವಿಕೆಟ್ ನಂತರ ಬಂದ ಮುಬಾಸಿರ್ ಖಾನ್ 42 ರನ್​ಗಳ ಕೊಡುಗೆ ನೀಡಿದರು. ಅಂತಿಮವಾಗಿ ಪಾಕ್ ಪಡೆ 50 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 322 ರನ್ ಕಲೆಹಾಕಿತು.

ಲಂಕಾ ತಂಡದ ಕಳಪೆ ಆರಂಭ

ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಎ ತಂಡದ ಆರಂಭ ಕೂಡ ಉತ್ತಮವಾಗಿರಲಿಲ್ಲ. ಕೇವಲ 12 ರನ್​ ಆಗುವಷ್ಟರಲ್ಲೇ ತಂಡದ ಎರಡು ವಿಕೆಟ್ ಪತನಗೊಂಡವು. ಆರಂಭಿಕ ಲಸಿತ್ ಕ್ರೂಸ್ಪುಲ್ಲೆ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರೆ, ಮಿನೋದ್ ಭಾನುಕಾ ಕೇವಲ 1 ರನ್​ಗಳಿಸಲಷ್ಟೇ ಶಕ್ತರಾದರು. 4ನೇ ಕ್ರಮಾಂಕದಲ್ಲಿ ಬಂದ ಪಸಿಂದು ಸೂರಿಯಬಂಡಾರ ಕೂಡ 10 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ಒಂದು ಬದಿಯಲ್ಲಿ ಭದ್ರವಾಗಿ ಬೇರೂರಿದ್ದ ಆವಿಷ್ಕಾ ಫರ್ನಾಂಡೋಗೆ, ಸಹನ್ ಅರಚ್ಚಿಗೆ ಅದ್ಭುತ ಸಾಥ್ ನೀಡಿದರು. ಹೀಗಾಗಿ 4ನೇ ಜೊತೆಯಾಟಕ್ಕೆ ಈ ಇಬ್ಬರು 128 ರನ್​ ಕಲೆಹಾಕಿದರು. ಆದರೆ ಇಬ್ಬರೂ ಸಹ ತಲಾ 97 ರನ್​ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಶತಕ ವಂಚಿತರಾದರು.

5 ವಿಕೆಟ್ ಪಡೆದ  ಅರ್ಷದ್ ಇಕ್ಬಾಲ್

ಈ ಇಬ್ಬರ ವಿಕೆಟ್ ಬಳಿಕ ಬಂದ ಲಂಕಾ ಬಾಲಂಹಗೋಚಿಗಳು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ನಿಂತು ಗೆಲುವಿಗಾಗಿ ಹೋರಾಡಲಿಲ್ಲ. ಹೀಗಾಗಿ ಭಿಗಿ ದಾಳಿ ನೆಡೆಸಿದ ಪಾಕಿಸ್ತಾನ, ಲಂಕಾ ತಂಡವನ್ನು ಅಲ್ಪ ರನ್​ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಪಾಕ್ ಪರ ಬೌಲಿಂಗ್​ನಲ್ಲಿ ಮಿಂಚಿದ ಅರ್ಷದ್ ಇಕ್ಬಾಲ್ 5 ವಿಕೆಟ್ ಪಡೆದರೆ, ಮುಬಾಸಿರ್ ಖಾನ್ ಹಾಗೂ ಸೂಫಿಯಾನ್ ಮುಖೀಮ್ ತಲಾ 2 ವಿಕೆಟ್ ಪಡೆದರು. ನಿರ್ಣಾಯಕ ಪಂದ್ಯದಲ್ಲಿ 5 ವಿಕೆಟ್ ಉರುಳಿಸಿ ತಂಡದ ಗೆಲುವಿನ ಹೀರೋ ಎನಿಸಿಕೊಂಡ ಅರ್ಷದ್ ಇಕ್ಬಾಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:56 pm, Fri, 21 July 23

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ