AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Emerging Teams Asia Cup 2023: ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ; ವಿಶ್ವಕಪ್ ಹೀರೋಗೆ ತಂಡದ ನಾಯಕತ್ವ..!

Emerging Teams Asia Cup 2023: ಶ್ರೀಲಂಕಾದಲ್ಲಿ ನಡೆಯಲಿರುವ 2023 ರ ಉದಯೋನ್ಮುಖ ತಂಡಗಳ ಏಷ್ಯಾಕಪ್‌ಗೆ ಭಾರತ-ಎ ತಂಡವನ್ನು ಪ್ರಕಟಿಸಲಾಗಿದೆ. ಅಂಡರ್ 19 ವಿಶ್ವಕಪ್ ತಂಡದ ನಾಯಕತ್ವವಹಿಸಿದ್ದ ಯಶ್ ಧುಲ್ ಅವರಿಗೆ ತಂಡದ ಕಮಾಂಡ್ ನೀಡಲಾಗಿದೆ.

Emerging Teams Asia Cup 2023: ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ; ವಿಶ್ವಕಪ್ ಹೀರೋಗೆ ತಂಡದ ನಾಯಕತ್ವ..!
ಯಶ್ ಧುಲ್Image Credit source: insidesport
ಪೃಥ್ವಿಶಂಕರ
|

Updated on: Jul 05, 2023 | 7:06 AM

Share

ಶ್ರೀಲಂಕಾದಲ್ಲಿ ನಡೆಯಲಿರುವ 2023 ರ ಉದಯೋನ್ಮುಖ ತಂಡಗಳ ಏಷ್ಯಾಕಪ್‌ಗೆ (Emerging Teams Asia Cup 2023) ಭಾರತ-ಎ ತಂಡವನ್ನು ಪ್ರಕಟಿಸಲಾಗಿದೆ. ಅಂಡರ್ 19 ವಿಶ್ವಕಪ್ ತಂಡದ ನಾಯಕತ್ವವಹಿಸಿದ್ದ ಯಶ್ ಧುಲ್ (Yash Dhull) ಅವರಿಗೆ ತಂಡದ ಕಮಾಂಡ್ ನೀಡಲಾಗಿದ್ದು, ಪಂಜಾಬ್ ಆಲ್ ರೌಂಡರ್ ಅಭಿಷೇಕ್ ಶರ್ಮಾ (Abhishek Sharma) ಉಪನಾಯಕನಾಗಿ ಆಯ್ಕೆಯಾಗಿದ್ದಾರೆ. ಉದಯೋನ್ಮುಖ ತಂಡಗಳ ಏಷ್ಯಾಕಪ್ ಜುಲೈ 13 ರಿಂದ ಶ್ರೀಲಂಕಾದಲ್ಲಿ ಪ್ರಾರಂಭವಾಗಲಿದ್ದು, ಲೀಗ್​ನ ಫೈನಲ್ ಪಂದ್ಯ ಜುಲೈ 23 ರಂದು ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತವಲ್ಲದೆ ಪಾಕಿಸ್ತಾನ, ಶ್ರೀಲಂಕಾ, ಯುಎಇ, ನೇಪಾಳ, ಬಾಂಗ್ಲಾದೇಶ, ಓಮನ್ ಮತ್ತು ಅಫ್ಘಾನಿಸ್ತಾನ ತಂಡಗಳು ಭಾಗವಹಿಸಲಿವೆ.

ಜೂನಿಯರ್ ಕ್ರಿಕೆಟ್ ಸಮಿತಿಯು ಮಂಗಳವಾರ ಭಾರತ-ಎ ತಂಡವನ್ನು ಆಯ್ಕೆ ಮಾಡಿದ್ದು, ಐಪಿಎಲ್ 2023 ಮತ್ತು ಟಿಎನ್‌ಪಿಎಲ್‌ನಲ್ಲಿ ರನ್ ಮಳೆಗೈದ ಎಡಗೈ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ. ಹರಿಯಾಣದ ಆಲ್ ರೌಂಡರ್ ನಿಶಾಂತ್ ಸಿಂಧು, ಪಂಜಾಬ್ ವಿಕೆಟ್ ಕೀಪರ್ ಪ್ರಭಾಸಿಮ್ರಾನ್ ಸಿಂಗ್, ಧ್ರುವ್ ಜುರೆಲ್ ಕೂಡ ಭಾರತ ಎ ತಂಡಕ್ಕೆ ಆಯ್ಕೆಯಾಗಿದ್ದಾರೆ.

ರಿಯಾನ್ ಪರಾಗ್​ಗೂ ಅವಕಾಶ

ಭಾರತ-ಎ ತಂಡದ ಆಯ್ಕೆಯಲ್ಲಿ ಅತ್ಯಂತ ಅಚ್ಚರಿಯ ಸಂಗತಿ ಎಂದರೆ ರಿಯಾನ್ ಪರಾಗ್ ಅವರಿಗೂ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ. ಐಪಿಎಲ್ 2023 ಮತ್ತು ದುಲೀಪ್ ಟ್ರೋಫಿಯಲ್ಲಿ ರಿಯಾನ್ ಪರಾಗ್ ವಿಫಲರಾದರೂ, ಅಸ್ಸಾಂನ ಈ ಆಲ್ ರೌಂಡರ್ ಭಾರತ-ಎ ತಂಡದಲ್ಲಿ ಆಯ್ಕೆಯಾಗಿದ್ದಾರೆ. ಇದಕ್ಕೆ ತದ್ವಿರುದ್ಧವಾಗಿ ತಮ್ಮ ಮೊದಲ ಐಪಿಎಲ್ ಸೀಸನ್​ನಲ್ಲಿ ಅದ್ಭುತ ಪ್ರದರ್ಶನ ನೀಡಿದ ನೆಹಾಲ್ ವಧೇರಾಗೆ ತಂಡದಲ್ಲಿ ಅವಕಾಶ ನೀಡಲಾಗಿಲ್ಲ. ಆದರೂ ಅವರನ್ನು ಸ್ಟ್ಯಾಂಡ್‌ಬೈ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಲಾಗಿದೆ.

Asia Cup 2023 Schedule: ಭಾರತ- ಪಾಕ್ ಪಂದ್ಯದ್ದೇ ಚಿಂತೆ; ಏಷ್ಯಾಕಪ್ ವೇಳಾಪಟ್ಟಿ ವಿಳಂಬವಾಗಲು ಕಾರಣ ಬಹಿರಂಗ

ಭಾರತ ಎ ತಂಡ: ಯಶ್ ಧುಲ್ (ನಾಯಕ), ಅಭಿಷೇಕ್ ಶರ್ಮಾ (ಉಪನಾಯಕ), ಸಾಯಿ ಸುದರ್ಶನ್, ನಿಕಿನ್ ಜೋಸ್, ಪ್ರದೋಶ್ ರಂಜನ್ ಪೌಲ್, ರಿಯಾನ್ ಪರಾಗ್, ನಿಶಾಂತ್ ಸಿಂಧು, ಪ್ರಭಾಸಿಮ್ರಾನ್ ಸಿಂಗ್, ಧ್ರುವ್ ಜುರೆಲ್, ಮಾನವ್ ಸುತಾರ್, ಯುವರಾಜಸಿನ್ಹ ದೋಡಿಯಾ, ಹರ್ಷಿತ್ ರಾಣಾ, ಹರ್ಷಿತ್ ರಾಣಾ, ಆಕಾಶ್ ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ರಾಜವರ್ಧನ್ ಹಂಗರ್ಗೇಕರ್.

ಸ್ಟ್ಯಾಂಡ್‌ಬೈ ಆಟಗಾರರು: ಹರ್ಷ್ ದುಬೆ, ನೆಹಾಲ್ ವಧೇರಾ, ಸ್ನೇಲ್ ಪಟೇಲ್ ಮತ್ತು ಮೋಹಿತ್ ರೆಡ್ಕರ್.

ಉದಯೋನ್ಮುಖ ತಂಡಗಳ ಏಷ್ಯಾಕಪ್‌ನಲ್ಲಿ ಒಟ್ಟು 8 ತಂಡಗಳು ಆಡಲಿದ್ದು, ಟೂರ್ನಿಯಲ್ಲಿ ಎರಡು ಗುಂಪುಗಳಿರುತ್ತವೆ. ಭಾರತ ತಂಡ ಬಿ ಗುಂಪಿನಲ್ಲಿ ಸ್ಥಾನ ಪಡೆದಿದ್ದು, ಟೀಂ ಇಂಡಿಯಾದೊಂದಿಗೆ ನೇಪಾಳ, ಯುಎಇ ಮತ್ತು ಪಾಕಿಸ್ತಾನ ತಂಡಗಳು ಈ ಗುಂಪಿನಲ್ಲಿ ಸ್ಥಾನ ಪಡೆದಿವೆ. ಮತ್ತೊಂದೆಡೆ, ಶ್ರೀಲಂಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಒಮನ್ ಎ ಗುಂಪಿನಲ್ಲಿವೆ. ಎರಡೂ ಗುಂಪಿನ ಅಗ್ರ 2 ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸಲಿವೆ. ಸೆಮಿಫೈನಲ್‌ನಲ್ಲಿ, ಎ ಗುಂಪಿನ ಅಗ್ರಸ್ಥಾನ ಪಡೆದ ತಂಡವು ಬಿ ಗುಂಪಿನ ಎರಡನೇ ಸ್ಥಾನ ಪಡೆದ ತಂಡದೊಂದಿಗೆ ಸ್ಪರ್ಧಿಸುತ್ತದೆ. ಮತ್ತೊಂದೆಡೆ, ಬಿ ಗುಂಪಿನಲ್ಲಿ ಅಗ್ರಸ್ಥಾನ ಪಡೆದ ತಂಡವು ಎ ಗುಂಪಿನಲ್ಲಿ ಎರಡನೇ ಸ್ಥಾನ ಪಡೆದ ತಂಡವನ್ನು ಎದುರಿಸಲಿದೆ.

ಉದಯೋನ್ಮುಖ ತಂಡಗಳ ಏಷ್ಯಾಕಪ್‌ನಲ್ಲಿ ಟೀಂ ಇಂಡಿಯಾದ ವೇಳಾಪಟ್ಟಿ

ಭಾರತ-ಎ vs ಯುಎಇ-ಎ, 13 ಜುಲೈ ಭಾರತ ಎ vs ಪಾಕಿಸ್ತಾನ ಎ, 15 ಜುಲೈ ಭಾರತ-ಎ vs ನೇಪಾಳ, 18 ಜುಲೈ ಸೆಮಿಫೈನಲ್ 1 – 21 ಜುಲೈ ಸೆಮಿಫೈನಲ್ 2-21 ಜುಲೈ ಫೈನಲ್ ಪಂದ್ಯ – 23 ಜುಲೈ

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
ಮಸ್ಕತ್​​ನಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಯಕ್ಷಗಾನ, ನೃತ್ಯದ ಸ್ವಾಗತ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
3 ರಾಷ್ಟ್ರಗಳ ಪ್ರವಾಸದ ಕೊನೆಯ ಹಂತವಾಗಿ ಒಮನ್​ಗೆ ತೆರಳಿದ ಪ್ರಧಾನಿ ಮೋದಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ